Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆ್ಯಂಬಿಡೆಂಟ್ ಪ್ರಕರಣ ಸಿಬಿಐಗೆ ವಹಿಸಲು...

ಆ್ಯಂಬಿಡೆಂಟ್ ಪ್ರಕರಣ ಸಿಬಿಐಗೆ ವಹಿಸಲು ರವಿಕೃಷ್ಣಾರೆಡ್ಡಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 Dec 2018 7:57 PM IST
share
ಆ್ಯಂಬಿಡೆಂಟ್ ಪ್ರಕರಣ ಸಿಬಿಐಗೆ ವಹಿಸಲು ರವಿಕೃಷ್ಣಾರೆಡ್ಡಿ ಒತ್ತಾಯ

ಬೆಂಗಳೂರು, ಡಿ.22: ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಶಾಸಕರು ಹಾಗೂ ಸಚಿವರು ಶಾಮೀಲಾಗಿರುವ ಆರೋಪ ಇರುವುದರಿಂದ ಇದನ್ನು ಸಿಬಿಐಗೆ ವಹಿಸುವುದೆ ಸೂಕ್ತವೆಂದು ಲಂಚಮುಕ್ತ ಕರ್ನಾಟಕ ವೇದಿಕೆಯ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಸರಕಾರವನ್ನು ಒತ್ತಾಯಿಸಿದರು.

ಶನಿವಾರ ಆ್ಯಂಬಿಡೆಂಟ್, ಆಲಾ, ಇಂಝಾಝ್, ಅಜ್ಮೀರ ಇತ್ಯಾದಿ ಕಂಪನಿಗಳಿಂದ ವಂಚನೆಗೊಳಗಾಗಿರುವ ಜನರಿಗೆ ನ್ಯಾಯ ಮತ್ತು ಪರಿಹಾರಕ್ಕೆ ಆಗ್ರಹಿಸಿ ಲಂಚಮುಕ್ತ ಕರ್ನಾಟಕ ವೇದಿಕೆ ವತಿಯಿಂದ ನಗರದ ಆನಂದರಾವ್ ವೃತ್ತದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಉಪವಾಸ ಮತ್ತು ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆ್ಯಂಬಿಡೆಂಟ್ ಕಂಪೆನಿಯಿಂದ ವಂಚನೆಗೆ ಒಳಗಾದ ಸಂತ್ರಸ್ಥರು 2017ರಲ್ಲಿಯೆ ಸಂಬಂಧಿಸಿದ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಆದರೆ, ಈ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು ಶಾಮೀಲಾಗಿರುವುದರಿಂದ ಸಂತ್ರಸ್ಥರ ದೂರನ್ನು ಮೂಲೆಗೆ ಎಸೆಯಲಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿಯಿಂದ ತನಿಖೆ ನಡೆಸುವುದರಿಂದ ಯಾವುದೆ ಪ್ರಯೋಜನ ಇಲ್ಲವೆಂದು ಅವರು ಹೇಳಿದರು.

ಆ್ಯಂಬಿಡೆಂಟ್ ಕಂಪನಿಯಲ್ಲಿ ಸಾವಿರಾರು ಮಂದಿ ಸಂತ್ರಸ್ತರು ಹಣ ಹೂಡಿದ್ದು, ಕೋಟ್ಯಂತರ ರೂ. ಹಗರಣ ಇದಾಗಿದೆ. ಹಾಗೂ ಇದರಲ್ಲಿ ಪ್ರಭಾವಿ ವ್ಯಕ್ತಿಗಳ ಕೈವಾಡ ಇರುವುದರಿಂದ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸುವುದು ಸೂಕ್ತ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

ಸರಕಾರ ಪರಿಹಾರ ಒದಗಿಸಲಿ: ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಸರಕಾರದ ನಿರ್ಲಕ್ಷ ಧೋರಣೆಯಿಂದಾಗಿಯೆ ಆರೋಪಿಗಳು ಮೋಸ ಮಾಡಲು ಕಾರಣವಾಗಿದೆ. ಹೀಗಾಗಿ ಪ್ರಾಥಮಿಕ ಹಂತವಾಗಿ ಸಂತ್ರಸ್ಥರಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಪ್ರಕರಣದಲ್ಲಿ ಮೋಸ ಮಾಡಿದ ಆರೋಪಿಗಳಿಂದ ಸಂತ್ರಸ್ತರ ಹಣವನ್ನು ವಾಪಸ್ ಪಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಹೇಳಿದರು.

ಆ್ಯಂಬಿಡೆಂಟ್ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೆ ಧರಣಿ ನಡೆಸುವುದಕ್ಕೆ ನಾನು ಸಿದ್ಧವಾಗಿದ್ದೇನೆ. ಆದರೆ, ಪ್ರಕರಣದಲ್ಲಿ ಸಂತ್ರಸ್ತರಾಗಿರುವವರು ಧರಣಿಯಲ್ಲಿ ಭಾಗವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಹೀಗಾಗಿ ಸಾಂಕೇತಿಕವಾಗಿ ಮೂರು ದಿನ ಅನಿರ್ದಿಷ್ಟಾವಧಿ ಉಪವಾಸ ಮತ್ತು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದೇನೆ. ಸಂತ್ರಸ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರೆ, ಧರಣಿ ಸತ್ಯಾಗ್ರಹವನ್ನು ಮತ್ತಷ್ಟು ದಿನ ಮುಂದುವರೆಸಲಾಗುವುದು ಎಂದು ಅವರು ಹೇಳಿದರು.

ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ, ಆ್ಯಂಬಿಡೆಂಟ್ ಪ್ರಕರಣದಲ್ಲಿ ವಂಚನೆಗೆ ಒಳಗಾದ ಸಂತ್ರಸ್ತರು ಬೀದಿಗೆ ಇಳಿಯಬೇಕಾಗಿದೆ. ಹೋರಾಟದ ನೇತೃತ್ವವನ್ನು ರವಿಕೃಷ್ಣಾರೆಡ್ಡಿ, ನಾನು ಸೇರಿದಂತೆ ಹಲವು ಮುಖಂಡರು ವಹಿಸಿಕೊಳ್ಳುವುದಕ್ಕೆ ಸಿದ್ಧರಿದ್ದೇವೆ. ಸಂತ್ರಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಆಶಿಸಿದರು. 

ದೊಡ್ಡ ಮಟ್ಟದ ಹೋರಾಟ ಅಗತ್ಯವಿದೆ

ಸಮಾಜದಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ, ಸರಕಾರದ ಕೆಲವು ಅಧಿಕಾರಿಗಳು, ಜನಪ್ರನಿಧಿಗಳ ಕುಮ್ಮಕ್ಕು ಇರುವುದು ಆತಂಕದ ಬೆಳವಣಿಗೆಯಾಗಿದೆ. ಇಂತಹ ಸಂದರ್ಭದಲ್ಲಿ ವಂಚನೆ ಪ್ರಕರಣದ ವಿರುದ್ಧ ದೊಡ್ಡ ಮಟ್ಟದ ಹೋರಾಟ ಅಗತ್ಯವಿದೆ.

-ಎಚ್.ಎಸ್.ದೊರೆಸ್ವಾಮಿ, ಹಿರಿಯ ಸ್ವಾತಂತ್ರ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X