Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿಯಲ್ಲಿ ನದಿಗೆ ಬಿದ್ದ ಮಹಿಳೆ...

ಉಪ್ಪಿನಂಗಡಿಯಲ್ಲಿ ನದಿಗೆ ಬಿದ್ದ ಮಹಿಳೆ ಬಂಟ್ವಾಳದ ಕಡೇಶಿವಾಲಯದಲ್ಲಿ ರಕ್ಷಣೆ

ನೀರಲ್ಲಿ ಮುಳುಗೇಳುತ್ತಿದ್ದ ವೃದ್ಧೆಯ ಪ್ರಾಣ ಉಳಿಸಿದ ಅಬ್ಬಾಸ್ ಮತ್ತು ಕೇಶವ

ವಾರ್ತಾಭಾರತಿವಾರ್ತಾಭಾರತಿ12 Sept 2019 11:24 AM IST
share
ಉಪ್ಪಿನಂಗಡಿಯಲ್ಲಿ ನದಿಗೆ ಬಿದ್ದ ಮಹಿಳೆ ಬಂಟ್ವಾಳದ ಕಡೇಶಿವಾಲಯದಲ್ಲಿ ರಕ್ಷಣೆ

ಬಂಟ್ವಾಳ, ಸೆ.12: ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯೊಬ್ಬರನ್ನು ದೋಣಿಯ ನಾವಿಕರೊಬ್ಬರು ರಕ್ಷಣೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಎಂಬಲ್ಲಿ ಗುರುವಾರ ನಡೆದಿದೆ.

ಕಡಬ ತಾಲೂಕಿನ ರಾಮಕುಂಜ ನಿವಾಸಿ, ಸುಮಾರು 70 ವರ್ಷ ಪ್ರಾಯದ ಮಂಜಕ್ಕ ಎಂಬವರು ರಕ್ಷಿಸಲ್ಪಟ್ಟವರು. ಇವರನ್ನು ಕಡೇಶಿವಾಲಯ ನಿವಾಸಿ, ಜನರನ್ನು ಸಾಗಿಸುವ ದೋಣಿಯ ನಾವಿಕ ಅಬ್ಬಾಸ್ ಎಂಬವರು ರಕ್ಷಣೆ ಮಾಡಿದ್ದಾರೆ.

''ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನೇತ್ರಾವತಿ ನದಿಯಲ್ಲಿ ತೀರದಲ್ಲಿ ಸಾರ್ವಜನಿಕರಾಗಿ ಕಾಯುತ್ತಿದ್ದಾಗ ದೂರದಲ್ಲಿ ಯಾವುದೋ ಒಂದು ವಸ್ತು ತೇಲಿ ಬರುತ್ತಿದ್ದ ಹಾಗೆ ಕಂಡಿತು. ತಕ್ಷಣ ದೋಣಿ ಮೂಲಕ ತೆರಳಿ ಗಮನಿಸಿದಾಗ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗೇಳುತ್ತಿದ್ದರು. ನೀರಿನ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಅವರನ್ನು ಕೂಡಲೇ ಕೇಶವ ಎಂಬವರ ಸಹಾಯದಿಂದ ಮೇಲೆತ್ತಿ ರಕ್ಷಣೆ ಮಾಡಿದೆವು'' ಎಂದು ಅಬ್ಬಾಸ್ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.

ಬಳಿಕ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿ ಮಂಜಕ್ಕು ಅವರನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಅಬ್ಬಾಸ್  ಮಾಹಿತಿ ನೀಡಿದ್ದಾರೆ.

ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಯತ್ನ?

ಮಹಿಳೆಯೊಬ್ಬರು ಗುರುವಾರ ಬೆಳಗ್ಗೆ ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಬಳಿಯಿರುವ ನೇತ್ರಾವತಿ ಸಮುದಾಯ ಭವನದ ಸಮೀಪ ನದಿಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಕೆಲವರು ಗಮನಿಸಿದ್ದರೂ, ರಕ್ಷಣೆ ಸಾಧ್ಯವಾಗಿರಲಿಲ್ಲ. ಮಹಿಳೆಯನ್ನು ಕಡೇಶಿವಾಲಯದಲ್ಲಿ ರಕ್ಷಣೆ ಮಾಡಿದಾಗ ಅವರು ರಾಮಕುಂಜ ನಿವಾಸಿ ಮಂಜಕ್ಕ ಎಂದು ತಿಳಿದುಬಂದಿದೆ. ಈ ನಡುವೆ ಮಂಜಕ್ಕ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ನದಿಗೆ ಹಾರಿರುವುದಾಗಿ ಹೇಳಲಾಗುತ್ತಿದ್ದು, ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X