Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೊಮ್ಮಗನನ್ನು ಕೆರೆಗೆ ದೂಡಿ ತಾನೂ...

ಮೊಮ್ಮಗನನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಜ್ಜಿ: ಬಾಲಕ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ24 Sept 2019 8:18 PM IST
share
ಮೊಮ್ಮಗನನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಜ್ಜಿ: ಬಾಲಕ ಮೃತ್ಯು

ಮಂಡ್ಯ, ಸೆ.24: ಕೃಷ್ಣರಾಜಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ಮಾರುತಿ ನಗರದಲ್ಲಿ ವಾಸವಾಗಿರುವ ಸಾವಿತ್ರಮ್ಮ ಎಂಬ ವಯೋವೃದ್ಧೆಯು ಆತನ ಮೊಮ್ಮಗನನ್ನು ಕೈಕಾಲು ಕಟ್ಟಿ ಸಿಂದಘಟ್ಟ ಗ್ರಾಮದ ಕೆರೆಯ ನೀರಿಗೆ ಹಾಕಿ ಸಾಯಿಸಿ, ತಾನೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಲು ಮುಂದಾಗಿದ್ದು, ಉಯ್ಗೋನಹಳ್ಳಿ ಗ್ರಾಮಸ್ಥರು ವೃದ್ಧೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಾರುತಿನಗರ ಬಡಾವಣೆಯ ಶೆಡ್ ಒಂದರಲ್ಲಿ ತನ್ನ ಮಗಳು ಲಕ್ಷ್ಮೀ(35) ಮತ್ತು 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪ್ರಜ್ವಲ್(11) ಜೊತೆ ಸಾವಿತ್ರಮ್ಮ(65) ವಾಸವಾಗಿದ್ದಳು. ಕಳೆದ 20 ದಿನಗಳ ಹಿಂದೆ ತನ್ನ ಮಗಳು ಲಕ್ಷ್ಮಿ ಮಂಗಳೂರು ಮೂಲದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಳು ಎನ್ನಲಾಗಿದೆ. ಮಗಳು ಪರಪುರುಷನ ಜತೆ ಓಡಿಹೋದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಹೊಂದಿದ ಸಾವಿತ್ರಮ್ಮ ಮೊಮ್ಮಗನನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಲು ನಿರ್ಧಾರಿಸಿದ್ದು, ಅದರಂತೆ ಸೋಮವಾರ ಮೊಮ್ಮಗ ಪ್ರಜ್ವಲ್‍ನನ್ನು ಹಬ್ಬಕ್ಕೆ ಹೋಗಬೇಕೆಂದು ಶಾಲೆಯಿಂದ ಶಿಕ್ಷಕರ ಅನುಮತಿಯನ್ನು ಪಡೆದುಕೊಂಡು ಮನೆಗೆ ಕರೆದುಕೊಂಡು ಹೋಗಿದ್ದಾಳೆ.

ಶಾಲೆಯಿಂದ ನೇರವಾಗಿ ಮಾರುತಿ ನಗರದಿಂದ 3 ಕಿ.ಮೀ ದೂರದಲ್ಲಿರುವ ಸಿಂದಘಟ್ಟ ಗ್ರಾಮದ ಕೆರೆಯ ಬಳಿ ಪ್ರಜ್ವಲ್‍ನನ್ನು ಕರೆದುಕೊಂಡು ಹೋಗಿ ಕೈಕಾಲುಗಳನ್ನು ಕಟ್ಟಿಹಾಕಿ ಶಾಲಾ ಉಡುಪಿನಲ್ಲಿಯೇ ಕೆರೆಗೆ ತಳ್ಳಿದ್ದು, ಬಳಿಕ ತಾನೂ ಕೆರೆಗೆ ಹಾರಲು ಸಿದ್ಧವಾಗುತ್ತಿದ್ದ ವೇಳೆ ಕೆರೆಯ ಬದಿಯಲ್ಲಿದ್ದ ಸಾರ್ವಜನಿಕರು ಗಮನಿಸಿ ನೀರಿಗೆ ಬೀಳದಂತೆ ತಡೆದು ಕೃಷ್ಣರಾಜಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಜ್ವಲ್ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಠಾಣಾಧಿಕಾರಿ ಶ್ರೀನಿವಾಸರಾವ್ ಮತ್ತು ಹರೀಶ್ ವಿಶ್ವಕರ್ಮ, ಲಕ್ಷ್ಮಣ ಅವರ ನೇತೃತ್ವದಲ್ಲಿ ಭಾರೀ ಸಾಹಸ ನಡೆಸಿ ನೀರಿನಿಂದ ಹೊರ ತೆಗೆಯಲಾಯಿತು. ಶವದ ಮರಣೋತ್ತರ ಪರೀಕ್ಷೆ ಬಳಿಕ, ಪ್ರಜ್ವಲ್ ಮೃತದೇಹವನ್ನು ಆತನ ತಾಯಿ ಲಕ್ಷ್ಮಿಗೆ ಹಸ್ತಾಂತರಿಸಲಾಯಿತು.

ಮಂಗಳೂರಿನಲ್ಲಿದ್ದ ಮೃತ ಬಾಲಕ ಪ್ರಜ್ವಲ್ ತಾಯಿ ಲಕ್ಷ್ಮಿಯು ಘಟನೆ ಬಳಿಕ ಆಗಮಿಸಿ ತನ್ನ ಮಗನ ಸಾವಿಗೆ ತನ್ನ ತಾಯಿ ಸಾವಿತ್ರಮ್ಮನೇ ಕಾರಣ ಎಂದು ದೂರನ್ನು ನೀಡಿದ್ದಾರೆ. ಕೆ.ಆರ್.ಪೇಟೆ ಪೊಲೀಸರು ಸಾವಿತ್ರಮ್ಮನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಷುರಾಮ್, ನಾಗಮಂಗಲ ಡಿವೈಎಸ್‍ಪಿ ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಸುಧಾಕರ್, ಕಿಕ್ಕೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್ ಸ್ಥಳಕ್ಕೆ ಭೇಟಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X