Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ಜ್ಯುವೆಲ್ಲರಿ ದರೋಡೆ ಪ್ರಕರಣ:...

ಮಂಗಳೂರಿನ ಜ್ಯುವೆಲ್ಲರಿ ದರೋಡೆ ಪ್ರಕರಣ: ಅಫ್ಘಾನ್ ಮೂಲದ ಇಬ್ಬರು ಸೇರಿ ಮೂವರ ಬಂಧನ

2.8 ಕೆಜಿ ಚಿನ್ನಾಭರಣ ವಶ: ತನಿಖೆ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ26 Sept 2019 12:25 PM IST
share
ಮಂಗಳೂರಿನ ಜ್ಯುವೆಲ್ಲರಿ ದರೋಡೆ ಪ್ರಕರಣ: ಅಫ್ಘಾನ್ ಮೂಲದ ಇಬ್ಬರು ಸೇರಿ ಮೂವರ ಬಂಧನ

ಮಂಗಳೂರು, ಸೆ.26: ನಗರದ ಭವಂತಿ ಸ್ಟ್ರೀಟ್‌ನ ಅರುಣ್ ಜ್ಯುವೆಲ್ಲರಿ ಸ್ಟೋರ್‌ನಲ್ಲಿ ಸೆಪ್ಟಂಬರ್ 2ರ ತಡರಾತ್ರಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಫ್ಘಾನ್ ಮೂಲದ ಕ್ರಿಮಿನಲ್‌ಗಳು ಸೇರಿದಂತೆ ಮೂರು ಮಂದಿಯನ್ನು ಬಂಧಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದ ದರೋಡೆ ಜಾಲವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಡಾ. ಹರ್ಷ, ಅತ್ಯಂತ ಸಂಘಟಿತ ಹಾಗೂ ಸುಸಜ್ಜಿತ ಸಲಕರಣಗಳನ್ನು ಬಳಸಿ ನಡೆಸಲಾಗಿದ್ದ ಈ ಅಂತರಾಷ್ಟ್ರೀಯ ದರೋಡೆ ಪ್ರಕರಣವನ್ನು ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಸುಮಾರು 20 ದಿನಗಳ ಅಂತರದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

ಪ್ರಕರಣದ ಪ್ರಮುಖ ಆರೋಪಿ, ಕೇರಳ ಮೂಲದ ಕುಖ್ಯಾತ ಕ್ರಿಮಿನಲ್ ಮುತ್ತಸ್ಸಿಮು ಸಿಎಂ ಅಲಿಯಾಸ್ ತಸ್ಲೀಂ (39) ಹಾಗೂ ಅಫ್ಘಾನಿಸ್ತಾನದ ಕುಖ್ಯಾತರಾದ ವಲಿ ಮುಹಮ್ಮದ್ ಸಫಿ ಅಲಿಯಾಸ್ ಸಫಿ (45), ಮುಹಮ್ಮದ್ ಅಝೀಮ್ ಖುರಂ ಅಲಿಯಾಸ್ ಅಝೀಮ್ (25) ಬಂಧಿತರು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 12 ದಿನಗಳ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕೇರಳದಲ್ಲಿ ಸೆ. 23ರಂದು ಈ ಮೂವರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ದರೋಡೆಯಾಗಿದ್ದ 2.8 ಕೆಜಿ ಚಿನ್ನಾಭರಣಗಳನ್ನು ಕೇರಳ ಹಾಗೂ ಮುಂಬೈನಿಂದ ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದಲ್ಲಿ ಅಪ್ಘಾನ್ ಮೂಲದ ಇನ್ನೋರ್ವ ಕ್ರಿಮಿನಲ್ ಸೇರಿದಂತೆ ಇಬ್ಬರು ತಲೆಮರೆಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಅತ್ಯಂತ ವ್ಯವಸ್ಥಿತ ಹಾಗೂ ಸಂಘಟಿತವಾಗಿ ನಡೆಸಲಾಗಿದ್ದ ಈ ದರೋಡೆ ಪ್ರಕರಣವನ್ನು ನಾಲ್ಕೈದು ತಂಡಗಳಲ್ಲಿ ಮಂಗಳೂರು ಪೊಲೀಸರು ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರೀಯ ಮಟ್ಟದಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕೆಲ ದಿನಗಳಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆಯುಕ್ತರು ಹೇಳಿದರು.

ಅರುಣ್ ಜುವೆಲ್ಲರಿಯಿಂದ ಸೆ.2 ರ ತಡರಾತ್ರಿ ಆಕ್ಸಿಜನ್ ಸಿಲಿಂಡರ್, ಸುಸಜ್ಜಿತ ವೆಲ್ಡಿಂಗ್ ಯಂತ್ರ ಬಳಸಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಕವಾಟು ರಚಿಸಿ ಒಳಗೆ ನುಗ್ಗಿ ಸೇಫ್ ಲಾಕರ್‌ನಿಂದ 3431.45 ಗ್ರಾಂ ಚಿನ್ನ ಹಾಗೂ 20.660 ಗ್ರಾಂ ಬೆಳ್ಳಿ ಆಭರಣ ಸೇರಿ ಒಟ್ಟು 1.12 ಕೋಟಿ ರೂ. ಮೌಲ್ಯದ ದರೋಡೆ ನಡೆಸಲಾಗಿತ್ತು. ಇದೀಗ ಬಂಧಿತರ ವಿಚಾರಣೆ ನಡೆಸಿ ದರೋಡೆಯಾದ ಒಂದು ಭಾಗ ಚಿನ್ನವನ್ನು ಕಾಸರಗೋಡು ಹಾಗೂ ಹೆಚ್ಚಿನ ಭಾಗವನ್ನು ಮುಂಬೈನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಈ ಸಂದರ್ಭ ಅವರು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸ್ ತಂಡವನ್ನು ಅಭಿನಂದಿಸಿದರು.

ದರೋಡೆಗೆ ನಡೆದಿತ್ತು 6 ತಿಂಗಳ ಪ್ಲಾನ್!
ಚಿನ್ನ ಹಾಗೂ ಬೆಳ್ಳಿ ಆಭರಣಗಳ ಅಂಗಡಿಗಳು ಅಧಿಕವಾಗಿರುವ ಭವಂತಿ ಸ್ಟ್ರೀಟ್‌ನಲ್ಲಿ ಈ ಬೃಹತ್ ದರೋಡೆಗಾಗಿ ಈ ಅಂತಾರಾಷ್ಟ್ರೀಯ ಮಟ್ಟದ ಕ್ರಿಮಿನಲ್‌ಗಳು ಸುಮಾರು ಆರು ತಿಂಗಳಿನಿಂದ ವ್ಯವಸ್ಥಿತ ಯೋಜನೆಯನ್ನು ರೂಪಿಸಿದ್ದರು. ಆರೋಪಿಗಳೆಲ್ಲರೂ ವೃತ್ತಿಪರ ಅಪರಾಧಿಗಳಾಗಿದ್ದಾರೆ. ದರೋಡೆಯ ಪ್ರಮುಖ ರುವಾರಿ ತಸ್ಲೀಂ ವಿರುದ್ಧ ಕೇರಳದ ಬೇಕಲ್ ಠಾಣೆ, ಹೊಸದಿಲ್ಲಿ ಸೇರಿದಂತೆ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಈತ ಮೂಲತ: ಕೇರಳದವನಾಗಿದ್ದು, ನಂತರ ಮುಂಬೈಗೆ ತೆರಳಿ ಅಲ್ಲಿ ಭೂಗತ ಜಗತ್ತಿನ ಜತೆ ನಂಟು ಬೆಳೆಸಿ ಅಪರಾಧ ಜಗತ್ತಿನಲ್ಲಿ ಸಾಕಷ್ಟು ಕುಖ್ಯಾತಿ ಪಡೆದಿದ್ದಾನೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಕಾರಣಕ್ಕೆ ಜನವರಿಯಲ್ಲಿ ಈತ ದಿಲ್ಲಿಯಲ್ಲಿ ಬಂಧಿಸಲ್ಪಟ್ಟಿದ್ದ ಎಂದು ಪೊಲಿೀಸ್ ಆಯುಕ್ತ ಡಾ. ಹರ್ಷ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X