Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಎ-ಎನ್‌ಆರ್‌ಸಿ ಹಿಂಪಡೆಯದಿದ್ದರೆ...

ಸಿಎಎ-ಎನ್‌ಆರ್‌ಸಿ ಹಿಂಪಡೆಯದಿದ್ದರೆ ಮತ್ತೊಮ್ಮೆ 'ಭೀಮಾ ಕೋರೆಗಾಂವ್' ಯುದ್ಧ: ಜ್ಞಾನಪ್ರಕಾಶ್ ಸ್ವಾಮೀಜಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Jan 2020 10:32 PM IST
share
ಸಿಎಎ-ಎನ್‌ಆರ್‌ಸಿ ಹಿಂಪಡೆಯದಿದ್ದರೆ ಮತ್ತೊಮ್ಮೆ ಭೀಮಾ ಕೋರೆಗಾಂವ್ ಯುದ್ಧ: ಜ್ಞಾನಪ್ರಕಾಶ್ ಸ್ವಾಮೀಜಿ ಎಚ್ಚರಿಕೆ

ಮೈಸೂರು, ಜ.12: ದೇಶದಲ್ಲಿ ಮತ್ತೊಮ್ಮೆ ಭೀಮಾ ಕೋರೆಗಾಂವ್ ಮಾದರಿಯ ಯುದ್ಧ ನಡೆಯುವ ಮುಂಚೆ ಸಿಎಎ ಮತ್ತು ಎನ್‌ಆರ್‌ಸಿ ಯನ್ನು ಹಿಂಪಡೆದರೆ ಒಳ್ಳೆಯದು ಎಂದು ಕೇಂದ್ರ ಸರ್ಕಾರಕ್ಕೆ ಮೈಸೂರಿನ ಗಾಂಧಿನಗರದ ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಎಚ್ಚರಿಕೆ ನೀಡಿದರು.

ನಂಜನಗೂಡಿನ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ರವಿವಾರ “ಭೀಮಾ ಕೋರೆಗಾಂವ್” ವಿಜಯೋತ್ಸವದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾರಾಷ್ಟ್ರದ ಭೀಮಾ ನದಿ ತೀರದಲ್ಲಿ ಮಹಾರ್ ಸೈನಿಕರು ಪೇಶ್ವೆಗಳನ್ನು ಹೊಡೆದು ಓಡಿಸಿದ ಹಾಗೆ ದೇಶದಲ್ಲಿ ಮತ್ತೊಮ್ಮೆ ಕ್ರಾಂತಿಯಾಗುವ ಮುಂಚೆ ಸಿಎಎ, ಎನ್‌ಆರ್‌ಸಿ ಹಿಂಪಡೆಯಿರಿ. ದೇಶದ 97% ಮೂಲನಿವಾಸಿಗಳು ಶಾಂತಿಪ್ರಿಯರು. ಹಾಗಾಗಿ, ಶಾಂತ ರೀತಿಯಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರನ್ನು ಪದೇ ಪದೇ ಕೆರಳಿಸುವ ಪ್ರಯತ್ನ ಮಾಡಿದರೆ ನಿಮ್ಮ ಕತೆ ಮುಗಿಯಿತು ಎಂದರ್ಥ ಎಂದು ಹೇಳಿದರು.

ಸಿಎಎ ಮತ್ತು ಎನ್‌ಆರ್‌ಸಿ ಜಾರಿ ಮಾಡುವ ಮೂಲಕ ಸಂವಿಧಾನದ ಬೇರುಗಳನ್ನು ಕಿತ್ತು ಹಾಕುವ ಕೆಲಸ ಮಾಡುತ್ತಿದ್ದೀರಿ. ದೇಶ ಕಟ್ಟಬೇಕೆ ಹೊರತು ದ್ವೇಷ ಕಟ್ಟಬಾರದು. ನಮ್ಮ ಆಯುಧಗಳು ಮಾತನಾಡುವ ಮುಂಚೆ ನಿಮ್ಮ ಕಾಯ್ದೆಯನ್ನು ವಾಪಸ್ ಪಡೆಯಿರಿ ಎಂದು  ಹೇಳಿದರು.

ಸಿಎಎ, ಎನ್‌ಆರ್‌ಸಿ ವಿರೋಧಿಸುವವರು ದೇಶದ್ರೋಹಿಗಳು ಎನ್ನುವುದಾದರೆ, ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರು, ಮಹಿಳೆಯರ ಮೇಲೆ ಅತ್ಯಾಚಾರ ಮಾಡುವವರು, ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರ ಕಳುಹಿಸುವವರು, ಮೀಸೆ ಬಿಟ್ಟ ಎಂಬ ಒಂದೇ ಕಾರಣಕ್ಕೆ ದಲಿತ ಯುವಕನನ್ನು ಕೊಲೆ ಮಾಡುವವರು, ಮದುವೆ ಮನೆಗೆ ಕುದುರೆ ಏರಿ ಬಂದ ಎಂದು ದಲಿತ ಮಧುಮಗನನ್ನು ಕೊಚ್ಚಿ ಕೊಲೆ ಮಾಡುವವರು ದೇಶ ಪ್ರೇಮಿಗಳೇ ಎಂದು ಪ್ರಶ್ನಿಸಿದರು.

ಧರ್ಮದ ಹೆಸರಿನಲ್ಲಿ ಜಾತಿಯ ಹೆಸರಿನಲ್ಲಿ ಹೊಡೆದು ಆಳುವ ನೀತಿಯನ್ನು ಕಳೆದ 97 ವರ್ಷಗಳಿಂದ ಸಂಘಪರಿವಾರ ಮಾಡಿಕೊಂಡು ಬರುತ್ತಿದೆ. ಅದರ ಅಜೆಂಡಾ ಹಿಂದೂ ರಾಷ್ಟ್ರ ಸ್ಥಾಪನೆ ಮಾಡುವುದು. ಅದಕ್ಕೆ ಇನ್ನೂ ಮೂರು ವರ್ಷಗಳ ಕಾಲಾವಕಾಶವಿದೆ. ಭಾರತ ಅಪಾಯದಲ್ಲಿದ್ದು ಭಾರತೀಯರಾದ ನಾವು ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದರು.

ಸಮಾಜದ ಅರಿವಿರದ ಮುಟ್ಟಾಳ ಸಂಸದ ಪಂಕ್ಚರ್ ಹಾಕುವವರು ಬೀದಿಯಲ್ಲಿ ಬಂದು ಹೋರಾಟ ಮಾಡುತ್ತಾರೆ ಎಂದು ಹೇಳುತ್ತಾನೆ. ಹಾಗಾದರೆ ಚಾಯ್ ಮಾರುವವರು ಪ್ರಧಾನಿಯಾಗಬಹುದೆ. ಎದೆಯಲ್ಲಿ ಎರಡಕ್ಷರ ಎನ್ನುವ ಮುಟ್ಟಾಳ ಸಂಸದನಿಗೆ ಲಕ್ಷಾಂತರ ಪಿಎಚ್‍ಡಿ ಮಾಡಿರುವವರು, ವಿಜ್ಞಾನಿಗಳು, ಸೇರಿದಂತೆ ಅನೇಕ ವಿದ್ಯಾರ್ಥಿಗಳು ಬೀದಿಗಳಿದು ಹೋರಾಟ ಮಾಡುತ್ತಿರುವುದು ಕಾಣುವುದಿಲ್ಲವೆ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X