Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವಸಂಸ್ಥೆ ಮಧ್ಯಸ್ಥಿಕೆಯ ಮಾತುಕತೆಗೆ ...

ವಿಶ್ವಸಂಸ್ಥೆ ಮಧ್ಯಸ್ಥಿಕೆಯ ಮಾತುಕತೆಗೆ ಸುಡಾನ್‌ನ ಪ್ರಜಾಪ್ರಭುತ್ವ ಪರ ಬಣದ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ17 Jan 2022 12:13 AM IST
share
ವಿಶ್ವಸಂಸ್ಥೆ ಮಧ್ಯಸ್ಥಿಕೆಯ ಮಾತುಕತೆಗೆ  ಸುಡಾನ್‌ನ ಪ್ರಜಾಪ್ರಭುತ್ವ ಪರ ಬಣದ ಒಪ್ಪಿಗೆ

ಖಾರ್ಟಮ್, ಜ.16: ಸುಡಾನ್‌ನಲ್ಲಿ ಅಕ್ಟೋಬರ್‌ನಲ್ಲಿ ನಡೆದ ಸೇನಾಕ್ರಾಂತಿಯ ಬಳಿಕ ತಲೆದೋರಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಮಧ್ಯಸ್ಥಿಕೆಯ ಮಾತುಕತೆಗೆ ಸುಡಾನ್‌ನ ಪ್ರಮುಖ ಪ್ರಜಾಪ್ರಭುತ್ವ ಪರ ಬಣ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

  ಸುಡಾನ್‌ನ ಬಿಕ್ಕಟ್ಟಿಗೆ ಪರಿಹಾರ ರೂಪಿಸಲು ವಿವಿಧ ಬಣಗಳ ನಡುವಿನ ಮಾತುಕತೆಗೆ ನೆರವಾಗುವುದಾಗಿ ವಿಶ್ವಸಂಸ್ಥೆ ನಿಯೋಗ ನೀಡಿರುವ ಆಹ್ವಾನವನ್ನು ಸ್ವೀಕರಿಸುವುದಾಗಿ ‘ಸೆಂಟ್ರಲ್ ಕೌನ್ಸಿಲ್ ಫಾರ್ ದಿ ಫೋರ್ಸಸ್ ಆಫ್ ಫ್ರೀಡಂ ಆ್ಯಂಡ್ ಚೇಂಜ್’ (ಸಿಸಿಎಫ್‌ಎಫ್‌ಸಿ) ಬಣದ ವಕ್ತಾರ ಜಾಫರ್ ಹಸನ್ ಹೇಳಿದ್ದಾರೆ. ಸಿಸಿಎಫ್‌ಎಫ್‌ಸಿಯ ನಿಯೋಗವು ರವಿವಾರ ವಿಶ್ವಸಂಸ್ಥೆಯ ನಿಯೋಗವನ್ನು ಭೇಟಿಯಾಗಿ, ವಿವಿಧ ಪಕ್ಷಗಳ ನಡುವಿನ ಮಾತುಕತೆಗೆ ಸಿಸಿಎಫ್‌ಎಫ್‌ಸಿಯ ಪರಿಕಲ್ಪನೆಯನ್ನು ವಿವರಿಸಿದೆ ಎಂದವರು ಹೇಳಿದ್ದಾರೆ.

ಆದರೆ ಸುಡಾನ್‌ನ ಮತ್ತೊಂದು ಪ್ರಮುಖ ನಾಗರಿಕ ಬಣ ‘ಸುಡಾನೀಸ್ ಪ್ರೊಫೆಷನಲ್ ಅಸೋಸಿಯೇಷನ್’ ವಿಶ್ವಸಂಸ್ಥೆಯ ಆಹ್ವಾನವನ್ನು ನಿರಾಕರಿಸಿದೆ.

   ಕಳೆದ ಅಕ್ಟೋಬರ್‌ನಲ್ಲಿ ಸೇನೆ ನಡೆಸಿದ ಕ್ಷಿಪ್ರಕ್ರಾಂತಿಯಲ್ಲಿ ಪ್ರಧಾನಿ ಅಬ್ದುಲ್ಲಾ ಹಮ್ದೋಕ್ ನೇತೃತ್ವದ ಸರಕಾರವನ್ನು ಪದಚ್ಯುತಗೊಳಿಸಿದಂದಿನಿಂದ ಸೇನಾಡಳಿತದ ವಿರುದ್ಧ ದೇಶದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ. ತಾತ್ಕಾಲಿಕ ಸರಕಾರದಲ್ಲಿ ಸೇನೆಯನ್ನು ಹೊರಗಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ, ಸೇನೆಯ ತಾಂತ್ರಿಕ ನೆರವಿನ ಉಸ್ತುವಾರಿಯಲ್ಲಿ ಸ್ವತಂತ್ರ ಸಂಪುಟ ರಚಿಸಬೇಕೆಂಬ ಷರತ್ತಿನಲ್ಲಿ ಹಮ್ದೋಕ್ ಅವರ ಸರಕಾರವನ್ನು ನವೆಂಬರ್ 21ರಂದು ಮರುಸ್ಥಾಪಿಸಲಾಗಿದೆ. ಆದರೆ ಈ ಒಪ್ಪಂದವನ್ನು ಸುಡಾನ್‌ನ ಪ್ರಜಾಪ್ರಭುತ್ವ ಪರ ಬಣ ತಿರಸ್ಕರಿಸಿದ್ದು, ನಾಗರಿಕ ಸರಕಾರಕ್ಕೆ ಅಧಿಕಾರ ಹಸ್ತಾಂತರಿಸಬೇಕು ಎಂದು ಆಗ್ರಹಿಸಿದೆ. ಸೇನೆಯೊಂದಿಗೆ ಭಿನ್ನಾಭಿಪ್ರಾಯದಿಂದ ಹಮ್ದೋಕ್ ಜನವರಿಯಲ್ಲಿ ರಾಜೀನಾಮೆ ನೀಡಿದ್ದರು.

 ಈ ಮಧ್ಯೆ, ಆಫ್ರಿಕನ್ ಯೂನಿಯನ್‌ನ ಪ್ರತಿನಿಧಿ ಎಡ್ವೆ ಬಂಕೋಲೆ ಖರ್ಟೂಮ್‌ಗೆ ಆಗಮಿಸಿದ್ದು ಸಿಸಿಎಫ್‌ಎಫ್‌ಸಿಯ ಪದಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸುಡಾನ್ ಬಿಕ್ಕಟ್ಟು ನಿವಾರಣೆಗೆ ದೇಶದ ಎಲ್ಲಾ ಜನರ ಅಭಿಪ್ರಾಯ, ಸಲಹೆ ಸಂಗ್ರಹಿಸುವುದು ತನ್ನ ಉದ್ದೇಶ ಎಂದು ಬಂಕೋಲೆ ಹೇಳಿದ್ದಾರೆ. ಸುಡಾನ್‌ಗೆ ಅಮೆರಿಕದ ನೂತನ ರಾಯಭಾರಿಯಾಗಿರುವ ಡೇವಿಡ್ ಸ್ಯಾಟರ್‌ಫೀಲ್ಡ್ ಮತ್ತು ಆಫ್ರಿಕಾ ವ್ಯವಹಾರ ಇಲಾಖೆಯ ಸಹಾಯಕ ಕಾರ್ಯದರ್ಶಿ ಮೋಲಿ ಫೀ ಮುಂದಿನವಾರ ಸುಡಾನ್‌ಗೆ ಭೇಟಿ ನೀಡಲಿದ್ದು ರಾಜಕೀಯ ಮತ್ತು ಸೇನಾ ಪ್ರಮುಖರು, ಪ್ರಜಾಪ್ರಭುತ್ವ ಪರ ಹೋರಾಟಗಾರರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X