Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಚ್ಐವಿಯ ಅಧಿಕ ಮಾರಣಾಂತಿಕ ತಳಿ...

ಎಚ್ಐವಿಯ ಅಧಿಕ ಮಾರಣಾಂತಿಕ ತಳಿ ನೆದರ್‌ಲ್ಯಾಂಡ್‌ ನಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ4 Feb 2022 11:17 PM IST
share
ಎಚ್ಐವಿಯ ಅಧಿಕ ಮಾರಣಾಂತಿಕ ತಳಿ ನೆದರ್‌ಲ್ಯಾಂಡ್‌ ನಲ್ಲಿ ಪತ್ತೆ

ಬ್ರಿಟನ್, ಫೆ.4: ಎಚ್ಐವಿಯ ಅತ್ಯಧಿಕ ಮಾರಣಾಂತಿಕವಾಗಿರುವ ಹೊಸ ತಳಿ ಹಲವಾರು ದಶಕಗಳಿಂದ ನೆದರ್ಲ್ಯಾಂಡಿನಲ್ಲಿ ಸುಪ್ತವಾಗಿದೆ. ಆದರೆ ಆಧುನಿಕ ಚಿಕಿತ್ಸೆಯ ಪರಿಣಾಮಕಾರಿತ್ವದ ಕಾರಣ ಈ ವಿಷಯದ ಬಗ್ಗೆ ಹೆಚ್ಚಿನ ಆತಂಕವಿಲ್ಲ ಎಂದು ಆಕ್ಸ್ಫರ್ಡ್ ಸಂಶೋಧಕರು ಗುರುವಾರ ಘೋಷಿಸಿದ್ದಾರೆ.

ವಿಬಿ ರೂಪಾಂತರಿ ಎಂದು ಕರೆಯಲಾಗುವ ಹೊಸ ತಳಿಯ ಸೋಂಕಿಗೆ ಒಳಗಾದವರ ರಕ್ತದಲ್ಲಿ , ಇತರ ತಳಿಗಿಂತ 3.5ರಿಂದ 5.5ರಷ್ಟು ಅಧಿಕ ಮಟ್ಟದ ವೈರಸ್ ಪತ್ತೆಯಾಗಿದೆ ಮತ್ತು ಇವರಲ್ಲಿ ರೋಗ ನಿರೋಧಕ ಶಕ್ತಿ ತ್ವರಿತವಾಗಿ ಕ್ಷೀಣಿಸುತ್ತಿರುವುದು ಬೆಳಕಿಗೆ ಬಂದಿದೆ. ಆದರೆ, ಚಿಕಿತ್ಸೆ ಆರಂಭಿಸದ ಬಳಿಕ ಇವರಲ್ಲಿ ಇತರ ಎಚ್ಐವಿ ತಳಿಯ ಸೋಂಕಿಗೆ ಒಳದಾದವರ ರೀತಿಯಲ್ಲೇ ರೋಗ ನಿರೋಧಕ ಶಕ್ತಿ ಚೇತರಿಸಿಕೊಂಡಿದೆ ಎಂದು ಗುರುವಾರ ‘ಸೈಯನ್ಸ್’ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹೇಳಿದೆ. 

1980 ಮತ್ತು 90ರ ದಶಕದ ಆರಂಭದಲ್ಲಿ ಈ ತಳಿ ನೆದರ್ ಲ್ಯಾಂಡಿನಲ್ಲಿ ಉಲ್ಬಣಿಸಿರುವ ಸಾಧ್ಯತೆಯಿದೆ. ಆದರೆ ಸುಮಾರು 2010ರ ಅವಧಿಯಲ್ಲಿ ಕ್ಷೀಣಿಸತೊಡಗಿದೆ. ಈ ಹೊಸ ತಳಿಯ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಕ್ಸ್‌ಫರ್ಡ್‌ ನ ಸೋಂಕುರೋಗ ಶಾಸ್ತ್ರಜ್ಞ ಕ್ರಿಸ್ ವೇಮಂಟ್ ಹೇಳಿದ್ದಾರೆ. ಆಧುನಿಕ ಚಿಕಿತ್ಸಾ ವ್ಯವಸ್ಥೆ ಈ ತಳಿಯ ವಿರುದ್ಧವೂ ಪರಿಣಾಮಕಾರಿಯಾಗಿದ್ದು ಪ್ರಾಥಮಿಕ ಹಂತದಲ್ಲಿ ರೋಗ ಪತ್ತೆ ಮತ್ತು ಸೂಕ್ತ ಚಿಕಿತ್ಸೆ ಅತ್ಯಗತ್ಯವಾಗಿದೆ ಎಂದವರು ಹೇಳಿದ್ದಾರೆ.
   
ಎಚ್ಐವಿ ಸೋಂಕಿಗೆ ಒಳಗಾಗುವ ಅಪಾಯದಲ್ಲಿರುವವರು ನಿಯಮಿತ ಪರೀಕ್ಷೆಯ ಮೂಲಕ ಪ್ರಾಥಮಿಕ ಹಂತದಲ್ಲೇ ರೋಗ ನಿರ್ಣಯ ಮತ್ತು ತಕ್ಷಣದ ಚಿಕಿತ್ಸೆ ಪಡೆಯಬೇಕು ಎಂಬ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯ ಮಹತ್ವವನ್ನು ನಮ್ಮ ಅಧ್ಯಯನ ದೃಢಪಡಿಸಿದೆ ಎಂದು ಆಕ್ಸ್‌ಫರ್ಡ್‌ ನ ಮತ್ತೊಬ್ಬ ಸಂಶೋಧಕ ಕ್ರಿಸ್ಟೋಫರ್ ಫ್ರೇಸರ್ ಹೇಳಿದ್ದಾರೆ. ವೈರಸ್‌ಗಳು ಹೆಚ್ಚು ವಿಶಕಾರಿಯಾಗಿ ವಿಕಸನಗೊಳ್ಳುತ್ತವೆ ಎಂಬ ಸಿದ್ಧಾಂತಕ್ಕೆ ಈ ನಿರ್ದಶನ ಪೂರಕವಾಗಿದೆ. ಇದಕ್ಕೆ ಮತ್ತೊಂದು ನಿದರ್ಶನವೆಂದರೆ ಕೋವಿಡ್ ಸೋಂಕು ಮತ್ತು ಡೆಲ್ಟಾ ರೂಪಾಂತರ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X