Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದ ಬರಹಗಾರರು, ಕವಿಗಳು ದ್ವೇಷ...

ಕರ್ನಾಟಕದ ಬರಹಗಾರರು, ಕವಿಗಳು ದ್ವೇಷ ಬಿತ್ತುವ ಪ್ರಯತ್ನದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ: ಪಿ.ಸಾಯಿನಾಥ್

ವಾರ್ತಾಭಾರತಿವಾರ್ತಾಭಾರತಿ27 May 2022 8:28 PM IST
share
ಕರ್ನಾಟಕದ ಬರಹಗಾರರು, ಕವಿಗಳು ದ್ವೇಷ ಬಿತ್ತುವ ಪ್ರಯತ್ನದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ: ಪಿ.ಸಾಯಿನಾಥ್

ದಾವಣಗೆರೆ:  ಕರ್ನಾಟಕದ ಬರಹಗಾರರು ಮತ್ತು ಕವಿಗಳು ಅಭಿವ್ಯಕ್ತಿಯ ಹಕ್ಕಿನ ರಕ್ಷಣೆಗಾಗಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು ದ್ವೇಷ ಬಿತ್ತುವ ಪ್ರಯತ್ನದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅಭಿಪ್ರಾಯಪಟ್ಟರು.

ನಗರದ ತಾಜ್ ಪ್ಯಾಲೇಸ್‍ನಲ್ಲಿ ನಡೆಯುತ್ತಿರುವ ಮೇ ಸಾಹಿತ್ಯ ಮೇಳದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಹುಬ್ಬಳ್ಳಿಯ ಕಲ್ಲಂಗಡಿ ವ್ಯಾಪಾರಿ  ನಬೀಸಾಬ್ ಅವರನ್ನು ಕರೆಯಿಸಿ ಘನತೆ ಮತ್ತು ಮಾನವತೆಯನ್ನು ಎತ್ತಿಹಿಡಿಯುವ ಮೂಲಕ ನಮ್ಮೆಲ್ಲರಿಗೂ ಗೌರವ ತಂದಿದ್ದೀರಿ ಎಂದು ಹೇಳಿದರು.

ಈಗ ಇತಿಹಾಸವನ್ನು ಕೋಟ್ಯಂತರ ರೂ.ಗಳನ್ನು ಖರ್ಚುಮಾಡಿ ಮರುಮುದ್ರಿಸಲಾಗುತ್ತಿದೆ. ಅವರ ಇತಿಹಾಸವನ್ನು ಬರೆಯಲಿಕ್ಕಾಗಿ ಪಠ್ಯಗಳನ್ನು ತಿರುಚಲಾಗುತ್ತಿದೆ. 1926ರಲ್ಲಿ ನಿಷೇಧಿಸಲ್ಪಟ್ಟು ನಂತರ 40ರಲ್ಲಿ ಮತ್ತೆ ಪ್ರಕಟಗೊಂಡು ಸಂಘಪರಿವಾರದಿಂದ ಮುಂದೊತ್ತಲ್ಪಟ್ಟ ಸಾವರ್ಕರ್ ಕುರಿತ ಪುಸ್ತಕವೊಂದನ್ನು ಚಿತ್ರಗುಪ್ತ ಎಂಬ ಬರಹಗಾರ ಬರೆದಿದ್ದರು. 1911ರ ವರೆಗೆ ಸಾವರ್ಕರ್ ಅವರು ಕ್ರಾಂತಿಕಾರಿಯಾಗಿದ್ದರು. ಆ ನಂತರ ಜೈಲಿಗೆ ಹೋದ ಮೇಲೆ ಅವರ ಧೋರಣೆ ಬದಲಾಯಿತು ಎಂದು ಹೇಳುತ್ತಾರೆ. ಸಾವರ್ಕರ್ ಬಗ್ಗೆ ಬರೆದಿದ್ದ ಚಿತ್ರಗುಪ್ತ ಎಂಬವರು ಬೇರೆ ಯಾರೂ ಅಲ್ಲ ಸ್ವತಃ ಸಾವರ್ಕರ್ ಅವರೇ ಎಂದು ಅವರ ಸಹೋದರನಿಂದ ನಂತರ ತಿಳಿಯಿತು ಎಂದು ಮಾಹಿತಿ ನೀಡಿದರು.

ಆದಿವಾಸಿ ಮತ್ತು ಗ್ರಾಮೀಣ ಶಿಕ್ಷಣದ ಕತೆ ಏನಾಯಿತು? ನಿಮಗೆ ತನ್ನದೇ ಆದ ಸ್ವಂತ ಸ್ಮಾರ್ಟ್ ಫೋನ್ ಇರುವ ಒಬ್ಬ ದಲಿತ ಆದಿವಾಸಿ ಹುಡುಗಿಯರು ಎಷ್ಟು ಮಂದಿ ಗೊತ್ತಿದಾರೆ? ಸಾಂಖ್ರಾಮಿಕದ 12 ತಿಂಗಳಿನಲ್ಲಿ 102ರಿಂದ 166ಕ್ಕೆ ಡಾಲರ್ ಕೋಟ್ಯಾಧಿಪತಿಗಳ ಸಂಖ್ಯೆ ಹೆಚ್ಚಿತು. ಜಿಡಿಪಿಯ ನಾಲ್ಕು ಪಟ್ಟು ಸಂಪತ್ತು ಜನಸಂಖ್ಯೆಯ ನಾಲಕ್ರಲ್ಲಿ ಒಂದು ಭಾಗ ಇರುವ ಕೋಟ್ಯಾಧಿಪತಿಗಳು ಪ್ರತಿನಿಧಿಸುತ್ತಾರೆ ಎಂದರು.

ಬಂಗಾಳದ ಬರದ ಸಮಯದಲ್ಲಿ, ಜಲಿಯನ್ ವಾಲಾ ಬಾಗ್ ಸಮಯದಲ್ಲಿ ಹೀಗೆ ಇತಿಹಾಸದಲ್ಲಿ ಅನೇಕ ಬಾರಿ ಸತ್ಯವನ್ನು ಹೊರತಂದವರು ಇಂತಹ ಬರಹಗಾರರೇ, ಅವರೇ ತಮ್ಮ ಪತ್ರಿಕೆಗಳನ್ನು ಆರಂಭಿಸಿದರು. ನಬೀಸಾಬ್ ಕಿಲ್ಲೇದಾರ್ ಕಥೆ ಏನು ಎಂಭುದನ್ನು ಹೊರತರಲು ನಿಮ್ಮ ಸೃಜನಶೀಲತೆಯನ್ನು ಬಳಸಬೇಕು. ಈ ಐತಿಹಾಸಿಕ ಜವಾಬ್ದಾರಿಯನ್ನು ಈಡೇರಿಸಲು ಮುಂದಾಗಬೇಕೆಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X