Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳಕ್ಕೆ ಶಿಲ್ಪಕಲಾ ಕ್ಲಸ್ಟರ್,...

ಕಾರ್ಕಳಕ್ಕೆ ಶಿಲ್ಪಕಲಾ ಕ್ಲಸ್ಟರ್, ಮಂಗಳೂರಿಗೆ ಫರ್ನಿಚರ್ ಕ್ಲಸ್ಟರ್ : ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Jun 2022 3:25 PM IST
share
ಕಾರ್ಕಳಕ್ಕೆ ಶಿಲ್ಪಕಲಾ ಕ್ಲಸ್ಟರ್, ಮಂಗಳೂರಿಗೆ ಫರ್ನಿಚರ್ ಕ್ಲಸ್ಟರ್ : ಸಿಎಂ ಬೊಮ್ಮಾಯಿ

ಕಾರ್ಕಳ: ಕಾರ್ಕಳ ಶಿಲ್ಪಕಲೆ, ಕೆತ್ತನೆ ಹಾಗೂ ಕುಸುರಿ ಕೆಲಸದಿಂದ ಜಗತ್ಪ್ರಸಿದ್ಧವಾಗಿದೆ.  ಕಾರ್ಕಳದ ಕಲ್ಲು ಮತ್ತು ಮರದ ಶಿಲ್ಪಕಲೆ ಹಾಗೂ ಕಾರ್ಮಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕಾರ್ಕಳದಲ್ಲಿ ಶಿಲ್ಪಕಲಾ ಕ್ಲಸ್ಟರ್ ಸ್ಥಾಪಿಸುವ ಹಾಗೂ ಮಂಗಳೂರು ಬಳಿ ಬೃಹತ್ ಫರ್ನಿಚರ್ ಕ್ಲಸ್ಟರನ್ನು ಉದ್ಯಮಿಗಳ ಸಹಯೋಗದೊಂದಿಗೆ ಇದೇ ವರ್ಷದಿಂದ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.

ಅವರು ಕಾರ್ಕಳ ತಾಲೂಕಿನ  ನದಿಗೆ 108 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯನ್ನು ನದಿಗೆ ಬಾಗಿನ ಅರ್ಪಿಸಿ , ಆರತಿ ಎತ್ತಿ , ಸ್ವಿಚ್ ಒತ್ತಿ ಚಾಲನೆ ನೀಡಿದ ನಂತರ ರಾಧ ನಾಯಕ್ ಹೈಸ್ಕೂಲಿನಲ್ಲಿ ನಡೆದ ಸಮಾರಂಭದಲ್ಲಿ ಹೇಳಿದರು.

ಎಣ್ಣಿಹೊಳೆ ಏತ ನೀರಾವರಿ ಯೋಜನೆಯ ತಡೆಗೋಡೆ ನಿರ್ಮಾಣಕ್ಕೆ ಸಚಿವ ಸುನೀಲ್ ಕುಮಾರ್ ಅವರ ಬೇಡಿಕೆಯ ಮೇರೆಗೆ ಹೆಚ್ಚುವರಿ 40 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಕರಾವಳಿ ಭಾಗದಲ್ಲಿ ಹಸಿರು ಇಂಧನ ತಯಾರಿಕೆಯ ಕೈಗಾರಿಕಾ ಹಬ್ ನಿರ್ಮಾಣದ ಇಂಗಿತವನ್ನು ವ್ಯಕ್ತಪಡಿಸಿದರು.

ರಾಜ್ಯದ ಕರಾವಳಿ ಜಿಲ್ಲೆಗಳನ್ನು ಅತ್ಯಂತ ಆಧುನಿಕ ಅಭಿವೃದ್ಧಿ ಜಿಲ್ಲೆಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕಾರವಾರ ಮಂಗಳೂರು ಬಂದರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಂದರು ಅಭಿವೃದ್ಧಿಗಾಗಿ ಹೆಚ್ಚಿನ ಭೂಮಿಯನ್ನು ನೀಡಲಾಗಿದೆ. ಇದರಿಂದಾಗಿ ಕರಾವಳಿ ಜೊತೆಗೆ ಇತರ ಪ್ರದೇಶದ ಮೇಲೆ ಪೂರಕ ಪರಿಣಾಮ ಬೀರುತ್ತದೆ. ಹೆಚ್ಚು ಉದ್ಯೋಗ ಸ್ರಷ್ಟಿಯಾಗುತ್ತದೆ ಇತರ 8 ಮೀನುಗಾರಿಕಾ ಬಂದರುಗಳ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ. ಹೈಸ್ಪಿಡ್ ಬೋಟುಗಳ ಬಳಕೆಗೆ ಆದ್ಯತೆ ನೀಡಲಾಗುತ್ತದೆ ಎಂದರು. 

ಈ ಭಾಗದಲ್ಲಿ ಟ್ಯೂರಿಸಂಗೆ ಹೆಚ್ಚಿನ ಅವಕಾಶವಿರುವುದರಿಂದ ಟ್ಯೂರಿಸಂ ಸರ್ಕ್ಯೂಟ್, ಬೀಚ್  ಟ್ಯೂರಿಸಂ , ಬುಲೆಟ್ ಟ್ರೈನ್ ಟ್ಯೂರಿಸಂ ನಡೆಸುವ ಮೂಲಕ ಅಭಿವೃದ್ಧಿ ಹಾಗೂ ಉದ್ಯೋಗ ಅವಕಾಶವನ್ನು ಹೆಚ್ಚಿಸಬಹುದಾಗಿದೆ ಎಂದರು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಚಿವರು ಹಾಗೂ ಶಾಸಕರ ಕಾರ್ಯವೈಖರಿ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅವರು ಸುನೀಲ್ ಕುಮಾರ್ ಗೆ ನಿಮ್ಮ ಮೇಲಿನ ಕಳಕಳಿ, ನಮ್ಮ ಸ್ನೇಹದ ಶಕ್ತಿ ಅಭಿವೃದ್ಧಿಗೆ ಪೂರಕವಾಗಿದೆ ಜನಪ್ರತಿನಿಧಿಗಳು ಜನರಿಗೆ ಉಪಯೋಗವಾಗಬೇಕು ಅಂತಹ ವ್ಯಕ್ತಿ ಸಿಕ್ಕಿರುವುದು ನಿಮ್ಮ ಪುಣ್ಯ ಎಂದರು.

ಡೀಮ್ಡ್ ಫಾರೆಸ್ಟ್ ಸಮಸ್ಯೆ ಪರಿಹಾರವಾಗಿರುವುದರಿಂದ ಸುಮಾರು ‌643000 ಎಕ್ರೆ ಭೂಮಿಯಲ್ಲಿ ತಲೆಮಾರುಗಳಿಂದ ಹಕ್ಕು ಪತ್ರ ಸಿಗದ ಬಡ ಕುಟುಂಬ ಹಾಗೂ ಕೃಷಿ ಕುಟುಂಬಕ್ಕೆ ಲಾಭವಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X