Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಲಿಬಾನಿ ಆಡಳಿತದ ಅಫ್ಘಾನಿಸ್ತಾನಕ್ಕೆ...

ತಾಲಿಬಾನಿ ಆಡಳಿತದ ಅಫ್ಘಾನಿಸ್ತಾನಕ್ಕೆ ಮೊದಲ ಬಾರಿ ತೆರಳಲಿರುವ ಭಾರತದ ರಾಜತಾಂತ್ರಿಕ ನಿಯೋಗ

ವಿದೇಶಾಂಗ ಸಚಿವಾಲಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ2 Jun 2022 2:32 PM IST
share
ತಾಲಿಬಾನಿ ಆಡಳಿತದ ಅಫ್ಘಾನಿಸ್ತಾನಕ್ಕೆ ಮೊದಲ ಬಾರಿ ತೆರಳಲಿರುವ ಭಾರತದ ರಾಜತಾಂತ್ರಿಕ ನಿಯೋಗ

ಹೊಸದಿಲ್ಲಿ, ಜೂ.2: ಅಫ್ಘಾನಿಸ್ತಾನ ತಾಲಿಬಾನ್‌ನ ವಶಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಭಾರತದ ಉನ್ನತ ರಾಜತಾಂತ್ರಿಕರು ಆ ದೇಶಕ್ಕೆ ಭೇಟಿ ನೀಡಿ ಯುದ್ಧದಿಂದ ಜರ್ಝರಿತಗೊಂಡಿರುವ ಹಾಗೂ ಬರಗಾಲದ ಆಪತ್ತಿನಲ್ಲಿರುವ ಅಫ್ಘಾನ್‌ಗೆ ಮಾನವೀಯ ನೆರವು ಒದಗಿಸುವ ಬಗ್ಗೆ ತಾಲಿಬಾನ್ ಸರಕಾರದೊಂದಿಗೆ ಚರ್ಚಿಸಲಿದ್ದಾರೆ ಎಂದು ಭಾರತ ಘೋಷಿಸಿದೆ.

 2021ರ ಆಗಸ್ಟ್‌ನಲ್ಲಿ ಅಫ್ಘಾನ್‌ನ ಮೇಲೆ ತಾಲಿಬಾನ್ ನಿಯಂತ್ರಣ ಸಾಧಿಸಿದ ಬಳಿಕ ಆ ದೇಶದಲ್ಲಿನ ರಾಜತಾಂತ್ರಿಕರನ್ನು ಭಾರತ ವಾಪಾಸು ಕರೆಸಿಕೊಂಡಿದೆ. ಆ ಬಳಿಕ ಇತರ ದೇಶಗಳಲ್ಲಿ ಒಂದೆರೆಉ ಬಾರಿ ತಾಲಿಬಾನ್ ಮುಖಂಡರೊಂದಿಗೆ ಭಾರತದ ನಿಯೋಗ ಮಾತುಕತೆ ನಡೆಸಿದ್ದರೂ, ಆ ದೇಶಕ್ಕೆ ತನ್ನ ರಾಜತಾಂತ್ರಿಕರು ಭೇಟಿ ನೀಡುವ ಬಗ್ಗೆ ಇದೇ ಮೊದಲ ಬಾರಿಗೆ ಘೋಷಣೆ ಮಾಡಿದೆ.

ಅಫ್ಘಾನ್ಗೆ ನಾವು ಒದಗಿಸುವ ಮಾನವೀಯ ನೆರವಿನ ವಿತರಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ಮಾಡಲು ವಿದೇಶ ವ್ಯವಹಾರ ಇಲಾಖೆಯ ಜಂಟಿ ಕಾರ್ಯದರ್ಶಿ ನೇತೃತ್ವದ ತಂಡವೊಂದು ಕಾಬೂಲ್‌ಗೆ ಭೇಟಿ ನೀಡಿದ್ದು ಅಲ್ಲಿ ತಾಲಿಬಾನ್ನ ಹಿರಿಯ ಸದಸ್ಯರೊಂದಿಗೆ ಭಾರತ ರವಾನಿಸಿರುವ ಮಾನವೀಯ ನೆರವಿನ ಕುರಿತು ಮಾತುಕತೆ ನಡೆಸಲಿದೆ ಎಂದು ಭಾರತದ ವಿದೇಶಾಂಗ ಇಲಾಖೆ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿದೆ. ಅಫ್ಘಾನ್‌ಗೆ ರಾಜತಾಂತ್ರಿಕರ ನಿಯೋಗದ ಭೇಟಿ ತಾಲಿಬಾನ್ನೊಂದಿಗೆ ಸಂಪರ್ಕ ಮುಂದುವರಿಸುವಲ್ಲಿನ ಒಂದು ಉತ್ತಮ ಉಪಕ್ರಮವಾಗಿದೆ ಎಂದು ಭಾರತದ ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ, ಅಂತರಾಷ್ಟ್ರೀಯ ಸಂಘಟನೆಗಳ ಸದಸ್ಯರೊಂದಿಗೂ ಭಾರತದ ನಿಯೋಗ ಮಾತುಕತೆ ನಡೆಸಲಿದೆ ಹಾಗೂ ಆ ದೇಶದಲ್ಲಿ ಭಾರತದ ಯೋಜನೆ ಜಾರಿಯಲ್ಲಿರುವ ಪ್ರದೇಶಗಳಿಗೆ ಭೇಟಿ ನೀಡಲಿದೆ ಎಂದು ಹೇಳಿಕೆ ತಿಳಿಸಿದೆ.

ಅಫ್ಘಾನ್ ವಿರುದ್ಧ ಜಾರಿಯಲ್ಲಿರುವ ಆರ್ಥಿಕ ನಿರ್ಬಂಧ ಹಾಗೂ ಬರಗಾಲದ ಪರಿಸ್ಥಿತಿಯ ಕಾರಣ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಆ ದೇಶಕ್ಕೆ 50,000 ಮೆಟ್ರಿಕ್ ಟನ್‌ಗಳಷ್ಟು ಗೋಧಿ ರವಾನಿಸುವುದಾಗಿಯೂ ಭಾರತ ಸರಕಾರ ಘೋಷಿಸಿದೆ. ಇದುವರೆಗೆ ಪಾಕಿಸ್ತಾನದ ಪ್ರದೇಶದ ಮೂಲಕವಾಗಿ ಅಫ್ಘಾನ್‌ಗೆ ಭಾರತ 20,000 ಮೆಟ್ರಿಕ್ ಟನ್‌ಗಳಷ್ಟು ಗೋಧಿ ಒದಗಿಸಿದೆ, ಅಲ್ಲದೆ ಆ ದೇಶಕ್ಕೆ ಕೋವಿಡ್ ಲಸಿಕೆಗಳನ್ನೂ ಒದಗಿಸಿದೆ. ಆದರೆ ಲಸಿಕೆಗಳು ಹಾಗೂ ಇತರ ಔಷಧ ಸಾಮಾಗ್ರಿಗಳನ್ನು ನೇರವಾಗಿ ತಾಲಿಬಾನ್ ಸರಕಾರಕ್ಕೆ ನೀಡುವುದಿಲ್ಲ. ಬದಲಿಗೆ ವಿಶ್ವಸಂಸ್ಥೆಯ ಸಹಸಂಸ್ಥೆಗಳಾದ ವಿಶ್ವ ಆಹಾರ ಸಂಘಟನೆ, ವಿಶ್ವ ಆಹಾರ ಏಜೆನ್ಸಿಯಂತಹ ವಿಶ್ವಸಂಸ್ಥೆಯ ಯೋಜನೆಗಳಿಗೆ ಮತ್ತು ಕಾಬೂಲ್‌ನಲ್ಲಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಹಸ್ತಾಂತರಿಸಲಾಗುವುದು ಎಂದು ಭಾರತ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X