Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೂನ್ 20ರಂದು ಪ್ರಧಾನಿಗಳಿಂದ ಸಬ್ ಅರ್ಬನ್...

ಜೂನ್ 20ರಂದು ಪ್ರಧಾನಿಗಳಿಂದ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ6 Jun 2022 11:00 PM IST
share
ಜೂನ್ 20ರಂದು ಪ್ರಧಾನಿಗಳಿಂದ ಸಬ್ ಅರ್ಬನ್ ರೈಲು ಯೋಜನೆಗೆ ಶಂಕುಸ್ಥಾಪನೆ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂನ್ 06: ಈ ಮಾಹೆಯ 20 ರಂದು ನಮ್ಮ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಆಗಮಿಸಿ, 15000 ಕೋಟಿ ರೂ.ಗಳ ಸಬ್ ಅರ್ಬನ್ ರೈಲಿಗೆ ಅಡಿಗಲ್ಲು ಹಾಕಲಿದ್ದಾರೆ ಈ ಮೂಲಕ ಬೆಂಗಳೂರಿನ ಬಹಳ ದಿನಗಳ  ಕನಸು ನನಸಾಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಬಿಬಿಎಂಪಿ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದರು.

ಬೃಹತ್ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಸೌಲಭ್ಯಗಳಿರುವ ನಗರವಾಗಿ ಅಭಿವೃದ್ಧಿಗೊಳಿಸಲಾಗುವುದು.  ಬೆಂಗಳೂರಿನ ಅಭಿವೃದ್ಧಿಗೆ ದಕ್ಷ ಮಂತ್ರಿಗಳ, ಶಾಸಕರ ದೊಡ್ಡ ತಂಡ ನಮ್ಮೊಂದಿಗಿದೆ. ಆಧುನಿಕವಾಗಿರುವ ಬೆಸ್ಟ್  ಬೆಂಗಳೂರನ್ನು ನಿರ್ಮಿಸಲಾಗುವುದು. ಶಿಕ್ಷಣ ಕ್ಷೇತ್ರಕ್ಕೆ  ಈ ಬಾರಿಯ ಆಯವ್ಯಯದಲ್ಲಿ  ದೊಡ್ಡ ಮೊತ್ತದ ಅನುದಾನವನ್ನು ಮೀಸಲಿರಿಸಿದೆ. 7000 ಶಾಲಾ ಕೊಠಡಿಗಳನ್ನು ಈ ವರ್ಷ ನಿರ್ಮಿಸಲಾಗುತ್ತಿದೆ. ಬೆಂಗಳೂರಿಗೆ 6000 ಕೋಟಿ  ರೂ.ಗಳ ನಗರೋತ್ಥಾನ ಯೋಜನೆಯ ಜೊತೆಜೊತೆಗೆ ಮಳೆ ಬಂದಾಗ ಸಮಸ್ಯೆಯಾಗುವ ಚರಂಡಿಗಳಿಗೆ 1600 ಕೋಟಿ ರೂ.ಗಳ ಅನುದಾನ ನೀಡಿದೆ. ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ. ಅದಲ್ಲದೆ, ವಿವಿಧ  ಕಾರ್ಯಕ್ರಮಗಳಡಿಯಲ್ಲಿ ಸುಮಾರು 1000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ.  ಪೆರಿಫೆರಲ್ ರಿಂಗ್  ರೋಡ್ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಜನರಿಗೆ ಅಗತ್ಯವಿರುವ ಯೋಜನೆಗಳ ಆದೇಶಗಳನ್ನು ಕೆಲವೇ ದಿನಗಳಲ್ಲಿ ನೀಡಲಾಗುವುದು.  ದೊಡ್ಡ ಪ್ರಮಾಣದಲ್ಲಿ ವಿದೇಶೀ ಹೂಡಿಕೆದಾರರು ಇಲ್ಲಿ ಹೂಡಿಕೆ ಮಾಡಲು ಉತ್ಸುಕರಾಗಿದ್ದಾರೆ.  ಇಂದು 52 ಸಾವಿರ ಕೋಟಿ ರೂ.ಗಳ ಯೋಜನೆಯ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಇದು ನಮ್ಮ ಕರ್ನಾಟಕ ಮತ್ತು ಬೆಂಗಳೂರಿನ ಶಕ್ತಿ ಎಂದರು.

ಬೆಂಗಳೂರಿನ ಅಭಿವೃದ್ಧಿ ನಮ್ಮ ಕರ್ತವ್ಯ. ಜನರ ಆಶೀರ್ವಾದದಿಂದ ಜನಸೇವೆ ಮಾಡುವ ಅವಕಾಶ ನಮಗೆ ದೊರೆತಿದೆ. ನಿರಂತರವಾಗಿ 40 ವರ್ಷಗಳ ಅಧಿಕಾರವನ್ನು ನಂಬದೇ ಜನರ ಸೇವೆಯೇ  ಅಧಿಕಾರ ಎಂದು ನಂಬಿ ಕೆಲಸ ಆಡುತ್ತಿರುವ ವಿ.ಸೋಮಣ್ಣ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ.  ಬಸ್ ನಿಲ್ದಾಣದಲ್ಲಿ  ಬಹುಪಯೋಗಿ ಕಟ್ಟಡವನ್ನು ನಿರ್ಮಿಸಲಾಗಿದೆ. ಇದು ಜನರ ಬಗ್ಗೆ ಕಳಕಳಿ ಇರುವ ವ್ಯಕ್ತಿಗೆ ಮಾತ್ರ ಸಾಧ್ಯ ಎಂದರು.  ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರವನ್ನು ನೀಡುವ ಕೆಲಸವಾಗಬೇಕು. 9000 ಮನೆಗಳಿಗೆ ನೇರವಾಗಿ ನೀರು ಕೊಡುವ ಕೆಲಸ ಸಚಿವ ಸೋಮಣ್ಣ ಮಾಡಿದ್ದಾರೆ ಎಂದರು.

ಸಮಸ್ಯೆಗಳಿಗೆ ಪರಿಹಾರ ನೀಡುವ ರಾಜಕಾರಣಿಯ ಆಯ್ಕೆ ಅಗತ್ಯ:

ಖಾಲಿ ಜಾಗವನ್ನು ಕಬಳಿಸುವ ರಾಜಕಾರಣಿಗಳು ಇದ್ದಾರೆ. ಆದರೆ ಸೋಮಣ್ಣನವರು ಜನರ ಅನುಕೂಲದ ಬಗ್ಗೆ ಚಿಂತಿಸುತ್ತಾರೆ. ಸಮಸ್ಯೆಗಳ ಬಗ್ಗೆ ಮಾತನಾಡುವವರು ಬೇಕೋ ಅಥವಾ ಸಮಸ್ಯೆಗಳಿಗೆ ಪರಿಹಾರ ನೀಡುವ ರಾಜಕಾರಣಿ ಬೇಕೋ ಎನ್ನುವ ಆಯ್ಕೆ ನಿಮ್ಮದು. ಸಾರ್ವಜನಿಕ ಆಸ್ತಿಯನ್ನು ಕಬಳಿಸುವವರು ಬೇಕೋ, ಆಸ್ತಿಯನ್ನು ರಕ್ಷಿಸುವವರು ಬೇಕೋ ಎಂದು ನೀವು ತೀರ್ಮಾನಿಸಬೇಕು. ಬೆಂಗಳೂರಿನಲ್ಲಿ 50 ಸಾವಿರಕ್ಕಿಂತಲೂ ಹೆಚ್ಚಿನ ಮನೆಗಳನ್ನು ನಿರ್ಮಿಸಿದ್ದಾರೆ, ಕೊಳಚೆ ಮಂಡಳಿ ವತಿಯಿಂದ ರಾಜ್ಯದಲ್ಲಿ 1 ಲಕ್ಷ ಮನೆಗಳ ನಿರ್ಮಾಣ, ಬಸವ ವಸತಿ ಯೋಜನೆಯಡಿ  5 ಲಕ್ಷ ಮನೆಗಳನ್ನು ಹಾಗೂ  ಪಿಎಂ ಆವಾಸ್ ಯೋಜನೆಯಡಿ 2.50 ಲಕ್ಷ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಡವರಿಗೆ ತಲೆಯ ಮೇಲೊಂದು ಸೂರಿ ಅಗತ್ಯವಿದೆ.ಅದು ಅವರ ಸ್ವಾಭಿಮಾನದ, ಗೌರವದ ಸಂಕೇತವೂ ಹೌದು ಎಂದರು.

ಬೆಂಗಳೂರಿನ ಯೋಜನಾಬದ್ಧ ಅಭಿವೃದ್ಧಿ:

ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡುವ ಸಂಕಲ್ಪವನ್ನು ನಾವು ಮಾಡಿದ್ದೇವೆ. ಬೃಹತ್ ಬೆಂಗಳೂರು ಅಂತರರಾಷ್ಟ್ರೀಯ ನಗರವಾಗಬೇಕು. ಅದಕ್ಕಾಗಿ 6000 ಕೋಟಿ ರೂ.ಗಳ ವೆಚ್ಚದಲ್ಲಿ ನಗರೋತ್ಥಾನ, 1500 ಕೋಟಿ ರೂ.ಗಳ ವೆಚ್ಚದಲ್ಲಿ  ರಾಜ ಕಾಲುವೆ ನಿರ್ಮಾಣ,  ಮೆಟ್ರೋ,  ಸಬ್ ಅರ್ಬನ್ ರೈಲು, 12 ಕಾರಿಡಾರ್‍ಗಳ ಅಭಿವೃದ್ಧಿ, ಅಮೃತ್ ಯೋಜನೆಗಳಡಿ 75 ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿ  ಸೇರಿದಂತೆ ಹಲವಾರು ಯೋಜನೆಗಳನ್ನು ಬೆಂಗಳೂರಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಆರ್ ಅಂಡ್ ಡಿ ಕೇಂದ್ರಗಳಿವೆ.  500 ಫಾರ್ಚೂನ್ ಕಂಪನಿಗಳ ಪೈಕಿ 400   ಇಲ್ಲಿವೆ.  ದಾವೋಸ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ 60 ಸಾವಿರ ಕೋಟಿ ರೂ.ಗಳಿಗಿಂತ ಹೆಚ್ಚು  ಕೈಗಾರಿಕೆಗಳಿಗೆ ಅನುಮೋದನೆ ನೀಡಲಾಗಿದೆ. ದೊಡ್ಡ ಪ್ರಮಾಣದಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಅಭಿವೃದ್ಧಿ ಆಗಲಿದೆ. ಆರು ಹೊಸ ಯೋಜನಾಬದ್ಧವಾಗಿ ಎಲ್ಲಾ ಸೌಲಭ್ಯಗಳಿರುವ ನಗರಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಹೊಸ ಕಲ್ಪನೆ ಇಟ್ಟುಕೊಂಡು ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಮಾಡಲಾಗುತ್ತಿದೆ. ಕರ್ನಾಟಕದ ಭವ್ಯ ಭವಿಷ್ಯ ಬರೆಯುವ ಶಕ್ತಿ, ನಿಮ್ಮ ಭಾಗ್ಯದ ಬಾಗಿಲನ್ನು ತೆರೆಯುವ ಶಕ್ತಿ ನಿಮ್ಮ ಆಶೀರ್ವಾದದಲ್ಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X