Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಬಂಧನ...

ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 Jun 2022 10:30 PM IST
share
ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು, ಜೂ. 26: ಸಾಮಾಜಿಕ ಕಾರ್ಯಕರ್ತೆ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ನಿವೃತ್ತ ಡಿಜಿಪಿ ಶ್ರೀಕುಮಾರ್ ಅವರನ್ನು ಗುರಿಯಾಗಿಸಿ ಕೊಂಡು ಬಂಧಿಸಿರುವ ಕೇಂದ್ರ ಸರಕಾರದ ಕ್ರಮ ಖಂಡಿಸಿ ರಾಜ್ಯದ ವಿವಿಧೆಡೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಧರಣಿ, ಪ್ರ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ರಾಜಧಾನಿ ಬೆಂಗಳೂರು, ಕಲುಬರ್ಗಿ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ಚಿಂತಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆ ಸಲ್ಲದು, ಹಲವು ಜನಪರ ಹೋರಾಟಗಾರರನ್ನು ಕಳೆದುಕೊಂಡಿದ್ದೇವೆ. ಆದರೆ, ಟೀಸ್ಟಾ ಸೆಟಲ್ವಾಡ್ ಅವರನ್ನು ಉಳಿಸಿಕೊಳ್ಳಲೇಬೇಕು ಎಂದು ಘೋಷಣೆ ಕೂಗಿದರು.

ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಬಳಗಕ್ಕೆ ಸುಪ್ರೀಂ ಕೋರ್ಟ್ ಕ್ಲೀನ್‍ಚಿಟ್ ಕೊಟ್ಟ ಬೆನ್ನಲ್ಲೇ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮತ್ತು ಅವರ ಬಳಗ ಸೇಡಿನ ರಾಜಕಾರಣ ಪ್ರಾರಂಭಿಸಿದೆ. ಸುಳ್ಳು ಆರೋಪದ ಮೇಲೆ ಟೀಸ್ಟಾ ಸೆಟಲ್ವಾಡ್ ಅವರನ್ನು ವಿಚಾರಣೆ ಹೆಸರಲ್ಲಿ ಕಸ್ಟಡಿಗೆ ತೆಗೆದುಕೊಂಡಿರುವುದು ಸರ್ವಾಧಿಕಾರಿ ದಬ್ಬಾಳಿಕೆ ಎಂದು ಹೋರಾಟಗಾರರು ಟೀಕಿಸಿದರು.

ಕಲಬುರ್ಗಿಯಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ್ತಿ ಕೆ.ನೀಲಾ, ‘2002ರಲ್ಲಿ ಗುಜರಾತ್‍ನಲ್ಲಿ ನಡೆದ ಕೋಮು ಹಿಂಸಾಚಾರದ ನರಮೇಧದಲ್ಲಿ ಆಗಿನ ಸರಕಾರದ ಪಾತ್ರ ಇದ್ದುದನ್ನು ಸತತವಾಗಿ ಬಹಿರಂಗಪಡಿಸುತ್ತಲೇ ಇರುವ ಟೀಸ್ಟಾ ಸೆಟಲ್ವಾಡ್ ವಿರುದ್ಧ ಫ್ಯಾಶಿಸ್ಟ್ ಸರಕಾರ ನಡೆಸಿರುವ ದಾಳಿ ಅತ್ಯಂತ ಹೇಯವಾದ ಕೃತ್ಯ' ಎಂದು ಕಟು ಶಬ್ದಗಳಲ್ಲಿ ಖಂಡಿಸಿದರು.

ಈಗಿನ ಕೇಂದ್ರದ ಬಿಜೆಪಿ ಸರಕಾರ ದ್ವೇಷದ, ಸೇಡಿನ ರಾಜಕೀಯವನ್ನು ದೇಶದ ತುಂಬೆಲ್ಲ ಹರಡಿಸುತ್ತಿದೆ. ಅದನ್ನು ಜನಮಾನಸದಲ್ಲಿ ಕಸಿ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದ ಅವರು, ಟೀಸ್ಟಾ ಸೆಟಲ್ವಾಡ್ ಹಾಗೂ ಶ್ರೀಕುಮಾರ್ ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕೆಂದು ಅವರು ಆಗ್ರಹಿಸಿದರು.

ಬೆಂಗಳೂರಿನ ಪುರಭವನದ ಮುಂಭಾಗ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹೋರಾಟಗಾರ್ತಿ ಗೌರಮ್ಮಾ, ವಿಚಾರಣೆ ನೆಪದಲ್ಲಿ ಟೀಸ್ಟಾ ಅವರನ್ನು ಕರೆದೊಯ್ದು ಏಕಾಏಕಿ ಬಂಧಿಸಲಾಗಿದೆ. ಅಲ್ಲದೆ, ಈಗಿನ ಕೇಂದ್ರ ಸರಕಾರ ಜನಪರ ಹೋರಾಟಗಾರರನ್ನು ಗುರಿಯಾಗಿಸಿಕೊಂಡು ಬಂಧಿಸುತ್ತಿದೆ. ಇಂತಹ ಬೆಳವಣಿಗೆ ಒಳ್ಳೆಯದಲ್ಲ, ಅವರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ಮುಖಂಡ ಆರ್.ಮೋಹನ್ ರಾಜ್, ಜನಶಕ್ತಿಯ ಗೌರಿ, ಎಸ್‍ಎಫ್‍ಐ ವಾಸುದೇವರೆಡ್ಡಿ, ನರಸಿಂಹಮೂರ್ತಿ, ಪ್ರಭಾ ಬೆಳವಂಗಲ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X