Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೂ, ಸಾಕ್ಸ್ ಖರೀದಿ ಸಂಬಂಧ ಹೊರಡಿಸಿರುವ...

ಶೂ, ಸಾಕ್ಸ್ ಖರೀದಿ ಸಂಬಂಧ ಹೊರಡಿಸಿರುವ ಆದೇಶದಲ್ಲಿ ಗೊಂದಲ: ರಮೇಶ್ ಬಾಬು

ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಕೆಪಿಸಿಸಿ ವಕ್ತಾರ

ವಾರ್ತಾಭಾರತಿವಾರ್ತಾಭಾರತಿ22 July 2022 6:57 PM IST
share
ಶೂ, ಸಾಕ್ಸ್ ಖರೀದಿ ಸಂಬಂಧ ಹೊರಡಿಸಿರುವ ಆದೇಶದಲ್ಲಿ ಗೊಂದಲ: ರಮೇಶ್ ಬಾಬು

ಬೆಂಗಳೂರು, ಜು.22: 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹತ್ತನೇ ತರಗತಿಯವರೆಗಿನ 46.37 ಲಕ್ಷ ಮಕ್ಕಳಿಗೆ ಒಂದು ಜೊತೆ ಶೂ ಮತ್ತು ಸಾಕ್ಸ್ ಖರೀದಿಸಲು ನಿಬಂಧನೆಗಳಿಗೆ ಒಳಪಟ್ಟು ಜು.8ರಂದು ಹೊರಡಿಸಿರುವ ಸರಕಾರಿ ಆದೇಶದಲ್ಲಿ ಅನೇಕ ಗೊಂದಲಗಳಿವೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ತಿಳಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಮೂರು ತಿಂಗಳು ಕಳೆದಿದ್ದು, ವಿಳಂಬದ ಆದೇಶದಿಂದ ಮಕ್ಕಳು ಸಕಾಲದಲ್ಲಿ ಶೂ ಮತ್ತು ಸಾಕ್ಸ್ ಪಡೆಯಲು ವಿಫಲರಾಗಿದ್ದಾರೆ. ಕೇವಲ ಒಂದು ಜೊತೆ ಉಚಿತ ಶೂ ಮತ್ತು ಸಾಕ್ಸ್ ನೀಡುವ ಸರಕಾರದ ಆದೇಶದಿಂದ ಮಕ್ಕಳು ತಮ್ಮ ಆವಕಾಶ ಮತ್ತು ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಕೇವಲ ಸರಕಾರಿ ಶಾಲೆಯ ಮಕ್ಕಳಿಗೆ ಅವಕಾಶ ನೀಡಿದ್ದು, ರಾಜ್ಯದ ಅನುದಾನಿತ ಶಾಲಾ ಮಕ್ಕಳು ಉಚಿತ ಶೂ ಮತ್ತು ಸಾಕ್ಸ್ ಆವಕಾಶದಿಂದ ವಂಚಿತರಾಗಿದ್ದಾರೆ. ಇವರಿಗೆ ಬಿಸಿಯೂಟದ ಜೊತೆಗೆ ಉಚಿತ ಶೂ ಸಾಕ್ಸ್ ನೀಡಬೇಕು. ಕರಾವಳಿ ಮತ್ತು ಉತ್ತರ ಕರ್ನಾಟಕದ ಮಕ್ಕಳಿಗೆ ಶೂಗಳ ಬದಲಾಗಿ ಸ್ಯಾಂಡಲ್‍ಗಳನ್ನು ಕೊಳ್ಳುವ ತೀರ್ಮಾನವನ್ನು ಶಾಲಾಭಿವೃದ್ಧಿ ಸಮಿತಿಗೆ ನೀಡಲಾಗಿದೆ. ಆದರೆ ಇದಕ್ಕೆ ದರ ನಿಗದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಆದೇಶದಲ್ಲಿ 132 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿರುವುದಾಗಿ ತಿಳಿಸಲಾಗಿದೆ. ಆದರೆ ಈ ಅನುದಾನವನ್ನು ವಿದ್ಯಾವಿಕಾಸ ಯೋಜನೆಯ ಅನುದಾನದಿಂದ ಬಿಡುಗಡೆ ಮಾಡುವುದಾಗಿ ಷರತ್ತಿನಲ್ಲಿ ತಿಳಿಸಲಾಗಿದೆ. ಮಕ್ಕಳ ಒಂದು ಯೋಜನೆಯನ್ನು ಕಸಿದುಕೊಂಡು ಇನ್ನೊಂದು ಯೋಜನೆ ಜಾರಿ ಮಾಡುವ ವಿಪರ್ಯಾಸ ಏಕೆ? ಎಂದು ರಮೇಶ್ ಬಾಬು ಪ್ರಶ್ನಿಸಿದ್ದಾರೆ.

ಷರತ್ತಿನಲ್ಲಿ ಶೂ ಮತ್ತು ಸಾಕ್ಸ್‍ಗಳನ್ನು, ಸ್ಯಾಂಡಲ್‍ಗಳನ್ನು ಸ್ಥಳೀಯವಾಗಿ ಖರೀದಿಸಲು ಶಾಲಾಭಿವೃದ್ಧಿ ಸಮಿತಿಗೆ ವಹಿಸಲಾಗಿದೆ. ಆದರೆ ಮುಂದುವರೆದ ಷರತ್ತಿನಲ್ಲಿ ಪ್ರತಿಷ್ಠಿತ ಬ್ರಾಂಡೆಡ್ ಕಂಪನಿಗಳ ಸರಬರಾಜುದಾರರಿಂದ ಮತ್ತು ವಾಣಿಜ್ಯ ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಸರಬರಾಜುದಾರರಿಂದ ಖರೀದಿಸಲು ಸೂಚಿಸಲಾಗಿದೆ. ಇದರಿಂದ ಗೊಂದಲದ ಜೊತೆಗೆ ಅವ್ಯವಹಾರಗಳಿಗೆ ಆನುಕೂಲವಾಗುತ್ತದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಒಂದು ಲಕ್ಷ ರೂಪಾಯಿ ಮೌಲ್ಯಕ್ಕಿಂತ ಹೆಚ್ಚು ಮೌಲ್ಯದ ಖರೀದಿಗೆ ಪಾರದರ್ಶಕ ಆಧಿನಿಯಮ 4(2) ಆಡಿಯಲ್ಲಿ ವಿನಾಯಿತಿ ಪಡೆದುಕೊಳ್ಳಲು ಸೂಚಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಶಾಲಾ ಸಮಿತಿಗಳು ಅನುಮತಿ ಪಡೆದುಕೊಳ್ಳುವುದು ನಿಧಾನವಾದರೆ ಶೈಕ್ಷಣಿಕ ವರ್ಷವೇ ಪೂರ್ಣಗೊಳ್ಳುತ್ತದೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ. 

ಸರಕಾರದ ಒಟ್ಟಾರೆ ಆದೇಶ ಮಕ್ಕಳಿಗೆ ನಿಗದಿತ ಸಮಯದಲ್ಲಿ ಶೂ, ಸಾಕ್ಸ್ ನೀಡುವ ಬದಲು, ಕೆಲವೇ ಪೂರೈಕೆದಾರರು ಆದೇಶದ ಷರತ್ತುಗಳನ್ನು ಬಳಸಿಕೊಂಡು ಕಮಿಷನ್ ದಂಧೆಯ ಮೂಲಕ ವ್ಯವಹಾರ ಮಾಡಲು ಅನುಕೂಲವಾಗುವ ರೀತಿಯಲ್ಲಿ ಇರುತ್ತದೆ. ಆದುದರಿಂದ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ, ಈ ಆದೇಶದ ಷರತ್ತುಗಳನ್ನು ಸರಿಪಡಿಸಿ ಶಾಲಾ ಮಕ್ಕಳಿಗೆ ಅನುಕೂಲ ಮಾಡಬೇಕು ಎಂದು ಅವರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X