Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ನೂತನ ಅಬಕಾರಿ ನೀತಿ ಕುರಿತು...

ದಿಲ್ಲಿ: ನೂತನ ಅಬಕಾರಿ ನೀತಿ ಕುರಿತು ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸಿನಲ್ಲಿ ಉಪಮುಖ್ಯಮಂತ್ರಿ ಹೆಸರು

ವಾರ್ತಾಭಾರತಿವಾರ್ತಾಭಾರತಿ22 July 2022 10:00 PM IST
share

ಹೊಸದಿಲ್ಲಿ,ಜು.22: ದಿಲ್ಲಿಯ ಲೆಫ್ಟಿನಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಸರಕಾರದ ವಿವಾದಾತ್ಮಕ ನೂತನ ಅಬಕಾರಿ ನೀತಿಯ ಕುರಿತು ಸಿಬಿಐ ತನಿಖೆಗೆ ಶುಕ್ರವಾರ ಶಿಫಾರಸು ಮಾಡಿದ್ದಾರೆ. ಇದರೊಂದಿಗೆ ಕೇಂದ್ರದ ಬಿಜೆಪಿ ಮತ್ತು ಆಪ್ ನಡುವೆ ಹೊಸ ಕಾಳಗಕ್ಕೆ ರಂಗ ಸಜ್ಜುಗೊಂಡಿದೆ.

ಮುಖ್ಯ ಕಾರ್ಯದರ್ಶಿಗಳು ಜು.8ರಂದು ಸಲ್ಲಿಸಿರುವ ವರದಿಯು ಮದ್ಯ ಪರವಾನಿಗೆದಾರರಿಗೆ ಟೆಂಡರ್ ಬಳಿಕ ಅನಗತ್ಯ ಲಾಭಗಳನ್ನು ಒದಗಿಸಲು ಉದ್ದೇಶಪೂರ್ವಕ ಮತ್ತು ಸಾರಾಸಗಟು ವಿಧಿವಿಧಾನ ಲೋಪಗಳ ಜೊತೆಗೆ ಸ್ಥಾಪಿತ ಕಾನೂನಿನ ಹಲವಾರು ಉಲ್ಲಂಘನೆಗಳನ್ನು ಬೆಟ್ಟು ಮಾಡಿದೆ ಎಂದು ಸಕ್ಸೇನಾರ ಕಚೇರಿಯು ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಿಲ್ಲಿಯ ಉಪಮುಖ್ಯಮಂತ್ರಿ ಮನೀಷ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಸಕ್ಸೇನಾ,ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ ‘ಗಣನೀಯ’ ಹಣಕಾಸು ಅನುಕೂಲಗಳನ್ನು ಸೂಚಿಸಿದೆ ಎಂದು ಹೇಳಿದ್ದಾರೆ. ಸಿಸೋದಿಯಾವರೆಗೆ ಸರಕಾರದ ಉನ್ನತ ಮಟ್ಟದ ವ್ಯಕ್ತಿಗಳಿಗೆ ಹಣಕಾಸು ಲಾಭಕ್ಕಾಗಿ ಖಾಸಗಿ ಮದ್ಯದ ದೊರೆಗಳಿಗೆ ಅನುಕೂಲಗಳನ್ನು ಒದಗಿಸುವ ಏಕೈಕ ಉದ್ದೇಶದಿಂದ ನೂತನ ಅಬಕಾರಿ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಅಬಕಾರಿ ಇಲಾಖೆಯ ಉಸ್ತುವಾರಿಯಾಗಿರುವ ಸಿಸೋದಿಯಾ ಶಾಸನಬದ್ಧ ನಿಬಂಧನೆಗಳು ಮತ್ತು ಅಧಿಸೂಚಿತ ಅಬಕಾರಿ ನೀತಿಯನ್ನು ಉಲ್ಲಂಘಿಸಿ ಭಾರೀ ಆರ್ಥಿಕ ಪರಿಣಾಮಗಳನ್ನು ಹೊಂದಿರುವ ಪ್ರಮುಖ ನಿರ್ಧಾರಗಳನ್ನು/ಕ್ರಮಗಳನ್ನು ಕೈಗೊಂಡಿದ್ದಾರೆ ಮತ್ತು ಅವುಗಳನ್ನು ಕಾರ್ಯಗತಗೊಳಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿರುವ ಸಕ್ಸೇನಾ,ಟೆಂಡರ್ಗಳ ಹಂಚಿಕೆಯ ಬಹಳ ಸಮಯದ ಬಳಿಕ ಪರವಾನಿಗೆದಾರರಿಗೆ ಅನಗತ್ಯ ಹಣಕಾಸು ಅನುಕೂಲಗಳನ್ನು ಒದಗಿಸುವ ಮೂಲಕ ಸಿಸೋದಿಯಾ ಸರಕಾರದ ಖಜಾನೆಗೆ ಭಾರೀ ನಷ್ಟವನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪಕ್ಷದ ಹೆಚ್ಚುತ್ತಿರುವ ಜನಪ್ರಿಯತೆಯನ್ನು ತಡೆಯಲು ಹತಾಶಗೊಂಡಿರುವ ಕೇಂದ್ರದ ನಿರ್ದೇಶದ ಮೇರೆಗೆ ಲೆ.ಗ.ಕಾರ್ಯಾಚರಿಸುತ್ತಿದ್ದಾರೆ ಎಂದು ಆಪ್ ಪ್ರತಿಪಾದಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಪಕ್ಷ ಕೇಜ್ರಿವಾಲ್ ಮತ್ತು ಆಪ್ನ ಇತ್ತೀಚಿನ ಚುನಾವಣಾ ಯಶಸ್ಸಿನ ಬಗ್ಗೆ ಅಸೂಯೆ ಹೊಂದಿದ್ದಾರೆ ಮತ್ತು ಅವರನ್ನು ತಡೆಯಲು ಏನು ಬೇಕಾದರೂ ಮಾಡುತ್ತಾರೆ ಎಂದು ಆಪ್ನ ವಕ್ತಾರ ಸೌರಭ ಭಾರದ್ವಾಜ್ ಹೇಳಿದರು.

ನೂತನ ಅಬಕಾರಿ ನೀತಿ 2021-22ನ್ನು ಕಳೆದ ವರ್ಷದ ನ.17ರಿಂದ ಜಾರಿಗೊಳಿಸಿದ್ದು,ಇದರಡಿ ದಿಲ್ಲಿಯ 32 ವಲಯಗಳಲ್ಲಿ 849 ಮದ್ಯದಂಗಡಿಗಳನ್ನು ತೆರೆಯಲು ಖಾಸಗಿ ಬಿಡ್ಡರ್ಗಳಿಗೆ ಚಿಲ್ಲರೆ ಪರವಾನಿಗೆಗಳನ್ನು ನೀಡಲಾಗಿತ್ತು.

ನೂತನ ಅಬಕಾರಿ ನೀತಿಯನ್ನು ಬಲವಾಗಿ ವಿರೋಧಿಸಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಈ ಕುರಿತು ತನಿಖೆಗಾಗಿ ಲೆ.ಗ. ಮತ್ತು ಕೇಂದ್ರೀಯ ಸಂಸ್ಥೆಗಳಿಗೆ ದೂರು ಸಲ್ಲಿಸಿದ್ದವು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X