Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನಮ್ಮ ಮೇಲೆ ಜನ ದಾಳಿ ಮಾಡ್ತಿದ್ದಾರೆ,...

‘ನಮ್ಮ ಮೇಲೆ ಜನ ದಾಳಿ ಮಾಡ್ತಿದ್ದಾರೆ, ಆನೆಗಳ ಹಾವಳಿ ತಪ್ಪಿಸಿ': ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ

ಸರಕಾರದ ವಿರುದ್ಧ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ22 Sept 2022 7:10 PM IST
share
‘ನಮ್ಮ ಮೇಲೆ ಜನ ದಾಳಿ ಮಾಡ್ತಿದ್ದಾರೆ, ಆನೆಗಳ ಹಾವಳಿ ತಪ್ಪಿಸಿ: ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ

ಬೆಂಗಳೂರು, ಸೆ. 22: ‘ಪರಿಹಾರ ಕೊಡ್ತೀವಿ ನೀವು ಸಾಯಲು ಸಿದ್ಧರಾಗಿ ಎನ್ನುವಂತಿದೆ ಸರಕಾರದ ನಿಲುವು. ಸರಕಾರಕ್ಕೆ ಮತ್ತು ಕೋರ್ಟ್‍ಗಳಿಗೆ ಆನೆಗಳು ಬೇಕು. ಆದರೆ, ಜನರಿಗೆ ಆನೆಗಳಿಂದ ಆಗುವ ಉಪಟಳ ನಿಲ್ಲಬೇಕು. ಚುನಾವಣೆ ಹತ್ತಿರ ಬರುತ್ತಿದೆ. ಜನರ ನಮ್ಮ ಮೇಲೆ ದಾಳಿ ಮಾಡುತ್ತಿದ್ದು, ಛೀಮಾರಿ ಹಾಕುತ್ತಿದ್ದಾರೆ. ಆನೆಗಳ ನಿಯಂತ್ರಣಕ್ಕೆ ಏನ್ಮಾಡ್ತೀರಿ ಹೇಳಿ?' ಎಂದು ಆಡಳಿತ ಪಕ್ಷದ ಸದಸ್ಯ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ ಮಿತಿಮೀರಿದ್ದು, ನನ್ನ ಕ್ಷೇತ್ರದಲ್ಲಿ ಆರು ಮಂದಿ ಆನೆ ದಾಳಿಯಿಂದ ಮೃತಪಟ್ಟಿದ್ದಾರೆ. ಆನೆಗಳ ಸಂಖ್ಯೆ ಹೆಚ್ಚಾಗಿದ್ದು, ಸಾರ್ವಜನಿಕರ ಆಸ್ತಿ, ಬೆಳೆ ನಾಶ ಮಾಡುತ್ತಿವೆ. ಹೀಗಾಗಿ ಅವುಗಳ ಭ್ರೂಣ ಹತ್ಯೆಗೆ ಕ್ರಮ ಕೈಗೊಳ್ಳಬೇಕು. ಆನೆಗಳ ಕಾಡಿನಿಂದ ನಾಡಿಗೆ ಬರದಂತೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು' ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವ ಶಿವರಾಮ್ ಹೆಬ್ಬಾರ್, ‘ಮೂಡಿಗೆರೆ ಕ್ಷೇತ್ರದಲ್ಲಿನ ಪುಂಡಾನೆಗಳನ್ನು ಹಿಡಿದು ಬೇರೆ ಕಡೆಗೆ ಬಿಡಲಾಗಿದೆ. ಆನೆ ದಾಳಿಯಿಂದ ಮೃತಪಟ್ಟವರಿಗೆ 7.50 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಿದ್ದು, ಬೆಳೆ ಪರಿಹಾರವನ್ನು ದುಪ್ಪಟ್ಟು ಮಾಡಲಾಗಿದೆ. ಆನೆಗಳು ಕಾಡಿನಿಂದ ಹೊರಗೆ ಬರದಂತೆ ರೈಲ್ವೆ ಹಳಿಗಳ ಬೇಲಿ ನಿರ್ಮಿಸಲಾಗುತ್ತಿದೆ. ಅಲ್ಲದೆ, ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಭ್ರೂಣಹತ್ಯೆ ಮಾಡಲು ಸಾಧ್ಯವಿಲ್ಲ. ಆದರೆ, ಆನೆ ಉಪಟಳ ತಡೆಗಟ್ಟಲು ಸರಕಾರ ಕ್ರಮ ಕೈಗೊಳ್ಳಲಿದೆ' ಎಂದು ತಿಳಿಸಿದರು.

ಶ್ವಾನಗಳನ್ನೆ ಹಿಡಿಯಲು ಆಗುತ್ತಿಲ್ಲ: ಸರಕಾರದ ಉತ್ತರಕ್ಕೆ ಆಕ್ಷೇಪಿಸಿದ ಉಪನಾಯಕ ಯು.ಟಿ.ಖಾದರ್, ‘ಸರಕಾರಕ್ಕೆ ಶ್ವಾನಗಳನ್ನೇ ಹಿಡಿಯಲು ಸಾಧ್ಯವಿಲ್ಲ. ಇನ್ನು ಆನೆಗಳನ್ನು ಹಿಡಿಯುವುದು ಹೌದಾ? ನಾನು ಬಹಳ ದಿನಗಳಿಂದ ಶಾಸಕನಾಗಿದ್ದೇನೆ. ಪ್ರತೀ ಬಾರಿಯೂ ಆನೆ ಕಾಟದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಪರಿಹಾರ ಮಾತ್ರ ಸಿಗುತ್ತಿಲ್ಲ' ಎಂದು ಗಮನ ಸೆಳೆದರು.

‘ಆನೆಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆಗೆದುಕೊಂಡು ಹೋಗಿ ಬಿಡುವ ಬದಲು ಕಾಡಿನಲ್ಲಿ ಆನೆಗಳಿಗೆ ಅಗತ್ಯ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕು. ಹೀಗಾದರೆ ಮಾತ್ರ ಆನೆಗಳ ಉಪಟಳ ನಿಲ್ಲಲು ಸಾಧ್ಯ. ಆನೆ ದಾಳಿ ಹಿನ್ನೆಲೆಯಲ್ಲಿ ಕೃಷಿ ಮಾಡದೆ ಕೈಬಿಟ್ಟ ಭೂಮಿಗೂ ಪರಿಹಾರ ನೀಡಬೇಕು' ಎಂದು ಅಪ್ಪಚ್ಚು ರಂಜನ್, ನರೇಂದ್ರ ಸೇರಿದಂತೆ ಇನ್ನಿತರ ಸದಸ್ಯರು ಆಗ್ರಹಿಸಿದರು.

'ಶಾಶ್ವತ ಪರಿಹಾರಕ್ಕೆ ತಜ್ಞರ ಸಮಿತಿ ಅಗತ್ಯ':

‘ಕಾಡು ಪ್ರಾಣಿಗಳ ಹಾವಳಿಯಿಂದ ಪ್ರಾಣ ಹಾಗೂ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿಯಾಗುತ್ತಿರುವುದರಿಂದ ಸರಕಾರದ ಮಟ್ಟದಲ್ಲಿ ತಜ್ಞರ ಸಮಿತಿ ರಚಿಸಿ, ಪರಿಹಾರೋಪಾಯ ಕಂಡುಕೊಳ್ಳಬೇಕು. ಹಲವು ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಸಮಸ್ಯೆಯಾಗಿದೆ. ಕೆಲವು ಕಡೆ ಆನೆಗಳು, ಕಾಡುಕೋಣಗಳು, ಮಂಗಗಳು ಹೀಗೆ ಸಮಸ್ಯೆಗಳು ಮುಂದುವರಿಯುತ್ತಿದೆ. ಆನೆ ಹಾವಳಿಯಿಂದ ಮೃತಪಟ್ಟವರಿಗೆ ಪರಿಹಾರ, ಹಾನಿಯಾದ ಬೆಳೆಗಳಿಗೆ ದುಪ್ಪಟ್ಟು ಪರಿಹಾರ ನೀಡಲು ಸರಕಾರ ನಿರ್ಧರಿಸಿರುವುದು ಸರಿಯಾದ ನಿರ್ಧಾರ. ಆದರೆ, ಕಾಡುಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಸರಕಾರ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು'

-ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಸ್ಪೀಕರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X