Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ದಸರಾ | ಕವಿಗೋಷ್ಠಿಗೆ ಮೃತಪಟ್ಟ...

ಮೈಸೂರು ದಸರಾ | ಕವಿಗೋಷ್ಠಿಗೆ ಮೃತಪಟ್ಟ ಕವಿಯ ಹೆಸರು!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಚಾಮರಾಜನಗರ ಸಂಸದರಾದ ಪ್ರತಾಪ್ ಸಿಂಹ! ► ಟೀಕೆ ವ್ಯಕ್ತವಾಗುತ್ತಲೇ ಆಹ್ವಾನ ಪತ್ರಿಕೆ ಮರು ಮುದ್ರಿಸಿದ ದಸರಾ ಕವಿಗೋಷ್ಠಿ ಉಪ ಸಮಿತಿ

ವಾರ್ತಾಭಾರತಿವಾರ್ತಾಭಾರತಿ27 Sept 2022 12:39 PM IST
share
ಮೈಸೂರು ದಸರಾ | ಕವಿಗೋಷ್ಠಿಗೆ ಮೃತಪಟ್ಟ ಕವಿಯ ಹೆಸರು!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್

ಮೈಸೂರು, ಸೆ.27: ಕೆಲ ದಿನಗಳ ಹಿಂದೆ ನಾಡಿನ ನಾನಾ ಟ್ರಸ್ಟ್ ಗಳಿಗೆ ನೇಮಕ ಮಾಡುವಾಗ ಕಳೆದ ವರ್ಷ ಮೃತಪಟ್ಟಿದ್ದ ರಾಜೇಶ್ವರಿ ತೇಜಸ್ವಿ ಅವರನ್ನೂ ನೇಮಿಸಿ ಎಡವಟ್ಟು ಮಾಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಬಾರಿ ದಸರಾ ಮುಖ್ಯ ಕವಿಗೋಷ್ಠಿಗೆ ಮೃತಪಟ್ಟ ಕವಿಯೊಬ್ಬರ ಹೆಸರನ್ನು ಸೆರಿಸಿ ಮತ್ತೊಂದು ಮಹಾ ಎಡವಟ್ಟು ಮಾಡಿದೆ. ಆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ತೀವ್ರ ಟ್ರೋಲ್ ಗೆ ಒಳಗಾಗಿದೆ.

ದಸರಾ ಪ್ರಯುಕ್ತ ಅಕ್ಟೋಬರ್ 3ರಂದು ಮೈಸೂರು ವಿವಿಯ ಸೆನೆಟ್ ಸಭಾಂಗಣದಲ್ಲಿ ಪ್ರಧಾನ ಕವಿಗೋಷ್ಠಿ ಆಯೋಜಿಸಲಾಗಿದೆ. ಈ ಕವಿಗೋಷ್ಠಿಯಲ್ಲಿ ಭಾಗವಹಿಸುವ 37 ಕವಿಗಳಲ್ಲಿ ಮೂರು ವರ್ಷಗಳ ಹಿಂದೆಯೇ ಮೃತಪಟ್ಟ ಹಿರಿಯ ಕವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರಾಗಿದ್ದ ಜಿ.ಕೆ.ರವೀಂದ್ರ ಕುಮಾರ್ ಅವರ ಹೆಸರು ಕೂಡಾ ಇದೆ! ಇದು ಆಹ್ವಾನ ಪತ್ರಿಕೆಯಲ್ಲೂ ಮುದ್ರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾಕಷ್ಟು ಟೀಕೆಗೆ ಗುರಿಯಾಗಿದೆ.

ಹಿರಿಯ ಪತ್ರಕರ್ತ, ಲೇಖಕ ಗಿರೀಶ್ ರಾವ್ ಹತ್ವಾರ್(ಜೋಗಿ) ಈ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ "ನಾಡಿದ್ದು ದಸರಾ ಕವಿಗೋಷ್ಠಿಯಲ್ಲಿ ಕವಿತೆ ಓದಲಿರುವ ಕವಿಗಳ ಪಟ್ಟಿಯಲ್ಲಿರುವ ಜಿಕೆ ರವೀಂದ್ರ ಕುಮಾರ್ ಯಾರು? ಕನ್ನಡದ ಅತ್ಯುತ್ತಮ ಕವಿ ಅವರು. ಅವರು ಈಗಿಲ್ಲ. ಕಣ್ಮರೆ ಅದವರನ್ನು ಎಲ್ಲರೂ ಮರೆಯುತ್ತಾರೆ. ಆದರೆ ಸರಕಾರ ಮರೆಯುವುದಿಲ್ಲ. ದತ್ತಿ ಸಂಸ್ಥೆ ಸದಸ್ಯರನ್ನೂ ಮಾಡುತ್ತದೆ. ಕವಿ ಗೋಷ್ಠಿಗೆ ಕರೆಯುತ್ತದೆ. ಅಯ್ಯೋ ಸುನೀಲ್. ಈರೆನ ಗತಿಯೇ!" ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಅವರನ್ನು ವ್ಯಂಗ್ಯವಾಡಿದ್ದಾರೆ.

"ಮೃತರಿಂದ ಕವಿತೆ ಓದಿಸುವುದೇ ಆಗಿದ್ದರೆ ಪಂಪ, ರನ್ನ, ಕುಮಾರವ್ಯಾಸರೂ ಬರಬಹುದಿತ್ತು!" ಎಂದು ಹಿರಿಯ ಪತ್ರಕರ್ತ ರಾಜರಾಮ ತಲ್ಲೂರು ಫೇಸ್ ಬುಕ್ ನಲ್ಲಿ ಟೀಕಿಸಿದ್ದಾರೆ. ಈ ರೀತಿ ತೀವ್ರ ಟೀಕೆ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡ ದಸರಾ ಕವಿಗೋಷ್ಠಿ ಉಪ ಸಮಿತಿ ಅವರ ಹೆಸರು ಬದಲಿಸಿ ಹೊಸ ಆಹ್ವಾನ ಪತ್ರಿಕೆ ಮುದ್ರಿಸಿ ರವಾನಿಸಿದೆ.

ಈ ನಡುವೆ ಮುಖ್ಯ ಕವಿಗೋಷ್ಠಿಗೆ ಕೆಲವರನ್ನು ಆಯ್ಕೆ ಮಾಡಿರುವುದು ಕೂಡಾ ಚರ್ಚೆಗೆ ಕಾರಣವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಅಕಾಡಮಿ ಸ್ಥಾನದಿಂದ ಬದಲಾಯಿಸಿದವರನ್ನು ಕವಿಗೋಷ್ಠಿಗೆ ಹಾಕಲಾಗಿದೆ. ಕೆಲವರ ಹೆಸರನ್ನು ತಪ್ಪಾಗಿ ಮುದ್ರಿಸಲಾಗಿದೆ. ಕವಿ ಎಚ್.ಎಂ.ನಾಗರಾಜರಾವ್ ಕಲ್ಕಟ್ಟೆಯವರು ಹೆಸರು ಎಚ್.ಎಂ.ನಾಗರಾಜರಾವ್ 'ಕಲ್ಕತ್ತೆ' ಎಂದು ಮುದ್ರಿತವಾಗಿದೆ.

2007ರಲ್ಲೂ ಕವಿಗೋಷ್ಠಿಗೆ ಆಯ್ಕೆ ಮಾಡುವಾಗ ಹೀಗೆಯೇ ಎಡವಟ್ಟು ಮಾಡಿ ಇಡೀ ಕವಿಗೋಷ್ಠಿಯೇ ಮಹತ್ವವನ್ನು ಕಳೆದುಕೊಂಡಿತ್ತು. ಆನಂತರ ಎಚ್ಚೆತ್ತ ಸರಕಾರ ಕವಿಗೋಷ್ಠಿ ಉಪಸಮಿತಿಗೆ ಅರ್ಹರು ಹಾಗೂ ಅನುಭವಿಗಳನ್ನು ನೇಮಿಸಿ ಸರಿಪಡಿಸಿತ್ತು. ಮತ್ತೆ ಈ ಬಾರಿ ಕವಿಗಳ ಆಯ್ಕೆಯಲ್ಲಿ ಆಗಿರುವ ಎಡವಟ್ಟು ಕವಿಗೋಷ್ಠಿ ಮತ್ತೆ ಹಳೆ ಹಾದಿ ಹಿಡಿಯಲಿದೆಯೇ ಎನ್ನುವ ಚರ್ಚೆಯನ್ನು ಹುಟ್ಟುಹಾಕಿದೆ.


ಚಾಮರಾಜನಗರ ಸಂಸದರಾದ ಪ್ರತಾಪ್ ಸಿಂಹ!

ಇದಲ್ಲದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಎಂದು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಭಾರೀ ಎಡವಟ್ಟು ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X