Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈಕೋರ್ಟ್ ‘ನಗರ ಯೋಜನಾ ಸಂಸ್ಥೆ’ಯಾಗಲು...

ಹೈಕೋರ್ಟ್ ‘ನಗರ ಯೋಜನಾ ಸಂಸ್ಥೆ’ಯಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

28 Nov 2022 9:20 PM IST
share
ಹೈಕೋರ್ಟ್ ‘ನಗರ ಯೋಜನಾ ಸಂಸ್ಥೆ’ಯಾಗಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ನ. 28: ಆಂಧ್ರಪ್ರದೇಶ ಹೈಕೋರ್ಟ್ ‘ನಗರ ಯೋಜನಾ ಸಂಸ್ಥೆ’ ('Urban Planning Agency')ಅಥವಾ ‘ಇಂಜಿನಿಯರ್’ ("Engineer")ಆಗಲು ಸಾಧ್ಯವಿಲ್ಲ ಹಾಗೂ ನೂತನ ರಾಜಧಾನಿಯು ಆರು ತಿಂಗಳಲ್ಲಿ ಸಿದ್ಧವಾಗಬೇಕು ಎಂದು ಸರಕಾರಕ್ಕೆ ಸೂಚನೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court)ಸೋಮವಾರ ಹೇಳಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರಕಾರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಸುಪ್ರೀಂ ಕೋರ್ಟ್, ಅರ್ಜಿಗೆ ರೈತರು, ರೈತ ಸಂಘಟನೆಗಳು ಮತ್ತು ಕೇಂದ್ರ ಸರಕಾರದಿಂದ ಪ್ರತಿಕ್ರಿಯೆಗಳನ್ನು ಕೋರಿದೆ. ರಾಜಧಾನಿಯನ್ನು ವರ್ಗಾಯಿಸುವುದು, ಇಬ್ಭಾಗಿಸುವುದು ಅಥವಾ ಮೂರು ಭಾಗ ಮಾಡುವುದಕ್ಕೆ ಸಂಬಂಧಿಸಿದ ಯಾವುದೇ ಕಾನೂನು ಮಾಡಲು ರಾಜ್ಯ ಶಾಸಕಾಂಗಕ್ಕೆ ‘ಯೋಗ್ಯತೆಯಿಲ್ಲ’ ('No Merit')ಎಂಬುದಾಗಿ ಆಂಧ್ರಪ್ರದೇಶ ಹೈಕೋರ್ಟ್ ಹೇಳಿದೆ. 

ರಾಜ್ಯ ಸರಕಾರವು ಅಮರಾವತಿ ರಾಜಧಾನಿ ನಗರ ಮತ್ತು ರಾಜಧಾನಿ ವಲಯವನ್ನು ಆರು ತಿಂಗಳಲ್ಲಿ ನಿರ್ಮಿಸಿ ಅಭಿವೃದ್ಧಿಪಡಿಸಬೇಕು ಎನ್ನುವ ನಿರ್ದೇಶನ ಸೇರಿದಂತೆ ಹೈಕೋರ್ಟ್ ನ ಕಾಲ-ಮಿತಿಗೆ ಸಂಬಂಧಿಸಿದ ನಿರ್ದೇಶನಗಳಿಗೂ ನ್ಯಾಯಮೂರ್ತಿಗಳಾದ ಕೆ.ಎಮ್. ಜೋಸೆಫ್(K.M. Joseph) ಮತ್ತು ಬಿ.ವಿ. ನಾಗರತ್ನ(B.V. Nagaratna) ಅವರನ್ನೊಳಗೊಂಡ ನ್ಯಾಯಪೀಠವು ತಡೆ ನೀಡಿದೆ.

ಅಮರಾವತಿ ರಾಜಧಾನಿ ನಗರ ಮತ್ತು ವಲಯದಲ್ಲಿನ ರಸ್ತೆ ಮತ್ತು ಚರಂಡಿ ನಿರ್ಮಾಣ, ವಿದ್ಯುತ್ ಮತ್ತು ಕುಡಿಯುವ ನೀರಿನ ಪೂರೈಕೆ ಮುಂತಾದ ಮೂಲಸೌಕರ್ಯ ಅಭಿವೃದ್ಧಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆಯೂ ಸರಕಾರ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಹೈಕೋರ್ಟ್ ಆದೇಶ ನೀಡಿತ್ತು.

ಈ ವಿಷಯವನ್ನು ವಿವರವಾಗಿ ಪರಿಶೀಲಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠವು, ರಾಜ್ಯ ಸರಕಾರ, ರೈತರು ಮತ್ತು ರೈತ ಸಂಘಟನೆಗಳು ಸಲ್ಲಿಸಿದ ಅರ್ಜಿಗಳ ಮುಂದಿನ ವಿಚಾರಣೆಯನ್ನು ಜನವರಿ 31ಕ್ಕೆ ನಿಗದಿಪಡಿಸಿದೆ. ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯನ್ನು ಡಿಸೆಂಬರ್ ಕೊನೆಯ ವೇಳೆಗೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈ ಅರ್ಜಿದಾರರಿಗೆ ಸೂಚಿಸಿತು.

ಅಭಿವೃದ್ಧಿ ಕರಾರು ಹಾಗೂ ವಾಪಸ್ ಪಡೆಯಲಾಗದ ಅಧಿಕಾರ ವರ್ಗಾವಣೆಯ ಶರತ್ತುಗಳಲ್ಲಿ ಒಪ್ಪಿಕೊಂಡಿರುವಂತೆ, ರಾಜಧಾನಿ ನಗರ ಮತ್ತು ರಾಜಧಾನಿ ವಲಯವನ್ನು ಅಭಿವೃದ್ಧಿಪಡಿಸುವಲ್ಲಿ ರಾಜ್ಯ ಸರಕಾರ ಮತ್ತು ಆಂಧ್ರಪ್ರದೇಶ ರಾಜಧಾನಿ ವಲಯ ಅಭಿವೃದ್ಧಿ ಪ್ರಾಧಿಕಾರ (ಎಪಿಸಿಆರ್ಡಿಎ) ವಿಫಲವಾಗಿದೆ ಹಾಗೂ ಇದು ರಾಜ್ಯ ಸರಕಾರ ನೀಡಿರುವ ಭರವಸೆಯ ಉಲ್ಲಂಘನೆಯಾಗಿದೆ ಎಂದು ಮಾರ್ಚ್ 3ರಂದು ಹೈಕೋರ್ಟ್ ಹೇಳಿತ್ತು.

ರೈತರು ತಮ್ಮ ಏಕೈಕ ಜೀವನಧಾರವಾಗಿದ್ದ 33,000 ಎಕರೆಗೂ ಅಧಿಕ ಫಲವತ್ತಾದ ಭೂಮಿಯನ್ನು ರಾಜಧಾನಿ ನಿರ್ಮಾಣಕ್ಕಾಗಿ ನೀಡಿದ್ದಾರೆ ಎಂದು ಹೇಳಿದ್ದ ಹೈಕೋರ್ಟ್, ರಾಜ್ಯ ಸರಕಾರ ಮತ್ತು ಎಪಿಸಿಆರ್ಡಿಎ ಅರ್ಜಿದಾರರ (ರೈತರ) ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಹೇಳಿತ್ತು.

share
Next Story
X