Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ವಿಚಾರದಲ್ಲಿ ಭಾವೋದ್ರೇಕದ ವರದಿ...

ಮಕ್ಕಳ ವಿಚಾರದಲ್ಲಿ ಭಾವೋದ್ರೇಕದ ವರದಿ ಸರಿಯಲ್ಲ: ಸಾಹಿತಿಗಳು, ಶಿಕ್ಷಣ ತಜ್ಞರ ಖಂಡನೆ

30 Nov 2022 8:50 PM IST
share
ಮಕ್ಕಳ ವಿಚಾರದಲ್ಲಿ ಭಾವೋದ್ರೇಕದ ವರದಿ ಸರಿಯಲ್ಲ: ಸಾಹಿತಿಗಳು, ಶಿಕ್ಷಣ ತಜ್ಞರ ಖಂಡನೆ

ಬೆಂಗಳೂರು, ನ.30: ಶಾಲಾ ಮಕ್ಕಳ ಬ್ಯಾಗ್‍ನಲ್ಲಿ ದೊರೆತ ವಸ್ತುಗಳ ಬಗ್ಗೆ ಪ್ರಕಟಿಸಿದ ವರದಿಯು, ಮಕ್ಕಳ ಶಿಕ್ಷಣದ ಕ್ರಮಗಳ ಬಗ್ಗೆ ಕುಟುಂಬ, ಸಮಾಜ ಹಾಗೂ ಸರಕಾರ ಗಂಭೀರವಾಗಿ ಯೋಚಿಸುವುದಕ್ಕೆ ಪ್ರಚೋದನೆ ನೀಡಿದರೂ, ಈ ಬಗ್ಗೆ ಭಾವೋದ್ರೇಕದಿಂದ ವರದಿ ಮಾಡುವುದು ಮತ್ತು ಮಕ್ಕಳನ್ನೇ ದೂಷಿಸುವುದು ಸರಿಯಲ್ಲ ಎಂದು ಸಾಹಿತಿಗಳು ಸೇರಿ ಶಿಕ್ಷಣ ತಜ್ಞರು ಟೀಕಿಸಿದ್ದಾರೆ. 

ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ ವಿ.ಪಿ., ಸಾಹಿತಿ ಡಾ. ಕೆ.ಮರುಳಸಿದ್ದಪ್ಪ, ಡಾ.ಶ್ರೀನಿವಾಸ ಕಕ್ಕಿಲ್ಲಾಯ, ಡಾ. ಜಿ. ರಾಮಕೃಷ್ಣ,  ಪ್ರೊ.  ಎಸ್.ಜಿ. ಸಿದ್ಧರಾಮಯ್ಯ,  ಪ್ರೊ. ಕಾಳೇಗೌಡ ನಾಗವಾರ, ಡಾ. ವಸುಂಧರಾ ಭೂಪತಿ, ಡಾ. ವಿಜಯ, ಸುರೇಂದ್ರ ರಾವ್ ಬುಧವಾರ ಈ ಕುರಿತು ಪ್ರಕಟನೆ ಹೊರಡಿಸಿದ್ದಾರೆ.

ಮಕ್ಕಳ ಶಾಲಾ ಬ್ಯಾಗ್‍ಗಳನ್ನು ಪರಿಶೀಲಿಸಿದಾಗ ಅವುಗಳಲ್ಲಿ ಕಾಂಡೋಮ್ಸ್, ಗರ್ಭಪಾತ ಗುಳಿಗೆ, ನೀರಿನ ಬಾಟಲ್‍ಗಳಲ್ಲಿ ಮದ್ಯ ಮಿಶ್ರಿತ ನೀರು ಇತ್ಯಾದಿಗಳು ಸಿಕ್ಕಿರುವ ವಿಷಯವನ್ನು ಮಾಧ್ಯಮಗಳು ಮುಖಪುಟದಲ್ಲಿ ಪ್ರಕಟಿಸಿವೆ. ಹಲವು ರೀತಿಯಲ್ಲಿ ಇಂಥಹ ಬೆಳವಣಿಗೆಗಳಿಗೆ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ಕಾರಣವಾಗಿರುವ ಸರಕಾರವೇ ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವುದು ಎಲ್ಲಕ್ಕಿಂತ ತುರ್ತು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳನ್ನು ಗುರುತಿಸಿ, ಅವರ ಗೌಪ್ಯತೆಯನ್ನು ಕಾಪಾಡಿ ತಜ್ಞರ ಸಹಾಯದಿಂದ ಅವರ ಸಮಸ್ಯೆಗಳನ್ನು ಅರ್ಥೈಸಿಕೊಳ್ಳಲು ನೆರವಾಗಬೇಕೇ ಹೊರತು, ಅದನ್ನು ಸಾರ್ವಜನಿಕವಾಗಿ ಚರ್ಚಿಸುವುದಾಗಲಿ ಅಥವಾ ಸುದ್ದಿಯಾಗಿ ವೈಭವೀಕರಿಸುವುದಾಗಲಿ ಮಕ್ಕಳ ಮಾನಸಿಕ ಆರೋಗ್ಯಕ್ಕೂ, ಜೀವಕ್ಕೂ ಅಪಾಯ ತಂದೊಡ್ಡುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಕಾಲದಲ್ಲಿ ಶಾಲೆಗಳನ್ನು ಅವೈಜ್ಞಾನಿಕವಾಗಿ ಮುಚ್ಚಿದ್ದರಿಂದ ಮಕ್ಕಳ ಮಾನಸಿಕ, ದೈಹಿಕ, ಬೌದ್ಧಿಕ ಆರೋಗ್ಯ ಹಾಗೂ ಬೆಳವಣಿಗೆಗಳ ಮೇಲೆ ಗಂಭೀರ ಪರಿಣಾಮಗಳಾಗುತ್ತವೆ. ಶಾಲೆಗಳಲ್ಲಿ ಮಕ್ಕಳ ಮೇಲೆ ನಿಗಾವಣೆಯಿಲ್ಲದೆ ಸಮಸ್ಯೆಗಳಾಗುತ್ತವೆ ಎಂದು ಕಳೆದ ವರ್ಷ ಜೂನ್‍ನಲ್ಲಿ ಎಚ್ಚರಿಕೆ ನೀಡಲಾಗಿತ್ತು. ಇದನ್ನು ಕಡೆಗಣಿಸಿದ ಕಾರಣ ಶಾಲೆಗಳಲ್ಲಿ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಹಲವು ಪ್ರಗತಿಪರರು, ಶಿಕ್ಷಣ ತಜ್ಞರು ಮತ್ತು ವೈದ್ಯಕೀಯ ಕ್ಷೇತ್ರದ ಗಣ್ಯರು ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡಬೇಕೆಂದು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ, ನಮ್ಮ ಸರಕಾರಗಳು ಲೈಂಗಿಕ ಶಿಕ್ಷಣವನ್ನು ಅವೈಜ್ಞಾನಿಕ ಹಾಗು ಮಡಿವಂತಿಕೆಯ ದೃಷ್ಟಿಯಿಂದ ನೋಡುವ ಮೂಲಕ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣವನ್ನು ವಿರೋಧಿಸಿವೆ. ಹೀಗಾಗಿ ಇಂದು ಮಕ್ಕಳು ಯಾವುದನ್ನು ಮಾಡಬೇಕು ಯಾವುದನ್ನು ಮಾಡಬಾರದು ಎಂಬ ಗೊಂದಲಕ್ಕೆ ಸಿಲುಕಿ, ಪ್ರಯೋಗಗಳಿಗೆ ಮುಂದಾಗುವಂತಾಗಿದೆ ಎಂದು ತಿಳಿಸಿದ್ದಾರೆ.

share
Next Story
X