Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಕ್ರೇನ್, ಚೀನಾದಿಂದ ಮರಳಿದ ವೈದ್ಯಕೀಯ...

ಉಕ್ರೇನ್, ಚೀನಾದಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪರಿಹಾರ ಹುಡುಕುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

11 Dec 2022 3:26 PM IST
share
ಉಕ್ರೇನ್, ಚೀನಾದಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪರಿಹಾರ ಹುಡುಕುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ಉಕ್ರೇನ್ (Ukraine) ಮತ್ತು ಚೀನಾ (China) ದೇಶಗಳಿಂದ ಮರಳಿರುವ ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಮುಂದುವರಿಸಲು ಅನುವಾಗುವಂತೆ ಪರಿಹಾರವೊಂದನ್ನು ಕಂಡುಕೊಳ್ಳಬೇಕು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಹಂತದಲ್ಲಿ ಯಾವುದೇ ಪರಿಹಾರವನ್ನು ಕಂಡುಕೊಳ್ಳದಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಲಿದೆ ಎಂದು ಅಭಿಪ್ರಾಯ ಪಟ್ಟಿದೆ.

ನ್ಯಾ. ಬಿ.ಆರ್. ರವಿ ಹಾಗೂ  ನ್ಯಾ. ವಿಕ್ರಮ್ ನಾಥ್ ಅವರನ್ನೊಳಗೊಂಡಿದ್ದ ನ್ಯಾಯಪೀಠವು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರವು ಅಗತ್ಯ ಬಿದ್ದರೆ ತಜ್ಞರ ಸಮಿತಿಯೊಂದನ್ನು ನೇಮಿಸಬಹುದು ಎಂದು ಹೇಳಿದೆ.

ಕೇಂದ್ರ ಸರ್ಕಾರವು ದೇಶದ ಆಸ್ತಿಯಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರಕ್ಷಿಸಲು ತಾನು ನೀಡಿರುವ ಸಲಹೆಯನ್ನು ಪರಿಗಣಿಸುತ್ತದೆ ಮತ್ತು ಪರಿಹಾರ ಕಂಡುಕೊಳ್ಳುತ್ತದೆ ಎಂಬ ಆಶಾವಾದ ಹೊಂದಿದೆ ಎಂದು ನ್ಯಾಯಾಲಯ ಹೇಳಿತು. ಒಂದು ವೇಳೆ ಯಾವುದೇ ಪರಿಹಾರ ಕಂಡುಕೊಳ‍್ಳದಿದ್ದರೆ ವಿದ್ಯಾರ್ಥಿಗಳ ಕುಟುಂಬವು ಶೋಷಣೆಗೊಳಗಾಗುವುದಲ್ಲದೆ ಅವರ ಶೈಕ್ಷಣಿಕ ಬದುಕು ಸಂಪೂರ್ಣ ಅತಂ‍ತ್ರವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿತು.

 “ತಜ್ಞರಿಂದ ಪರಿಹಾರ ಪಡೆಯಲು ಈ ಪ್ರಕರಣವು ಸೂಕ್ತವಾಗಿದೆ ಎಂದು ನಾವು ಭಾವಿಸುತ್ತೇವೆ. ನಾವು ಆದೇಶ ನೀಡುವುದರಿಂದ ಹಿಂದೆ ಸರಿಯುತ್ತಿದ್ದೇವೆ. ಈ ಮಾನವೀಯ ಸಮಸ್ಯೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗದೊಂದಿಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು” ಎಂದು ಸೂಚಿಸಿತು.

ಬಹುತೇಕ ವಿದ್ಯಾರ್ಥಿಗಳು ತಮ್ಮ ಪದವಿ ಪೂರೈಸಿದ್ದರೂ, ಇನ್ನೂ ಚಿಕಿತ್ಸಾ ತರಬೇತಿ ಪಡೆಯಬೇಕಿರುವ ಸಂಗತಿಯನ್ನು ನ್ಯಾಯಾಲಯವು ಗಣನೆಗೆ ತೆಗೆದುಕೊಂಡಿತು. ಈ ಕುರಿತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ವೈದ್ಯಕೀಯ ಪದವಿಗಳಲ್ಲಿ ಪ್ರಾಯೋಗಿಕ ತರಬೇತಿ ಬಹು ಮುಖ್ಯವಾಗಿದೆ ಎಂದು ಪ್ರತಿಪಾದಿಸಿದರು.

ಕೇವಲ ಪಠ್ಯಪುಸ್ತಕ ಅಧ್ಯಯನಗಳು ಪ್ರಾಯೋಗಿಕ ತರಬೇತಿಗೆ ಸಮವಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡದಿರುವ ನಿರ್ಧಾರವನ್ನು ಆರೋಗ್ಯ ಸಚಿವಾಲಯ, ಗೃಹ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯಗಳೊಂದಿಗೆ ಸಮಾಲೋಚಿಸಿದ ನಂತರವೇ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

“ನ್ಯಾಯಾಲಯವು ತಜ್ಞರನ್ನು ಹೊಂದಿಲ್ಲದೆ ಇರುವುದರಿಂದ ನಿಮ್ಮ ವಾದವು ಸಮರ್ಥನೀಯವಾಗಿದೆ. ಹೀಗಿದ್ದೂ ಕೋವಿಡ್ ನಿಂದ ಉದ್ಭವಿಸಿದ ಅಸಂಖ್ಯಾತ ಪರಿಸ್ಥಿತಿಗಳು ನಿಯಂತ್ರಣ ಮೀರಿ ಘಟಿಸಿದ್ದು, ಅವು ಕಲ್ಪನೆಗೂ ನಿಲುಕದಾಗಿವೆ” ಎಂದು ನ್ಯಾಯಾಲಯವು ಅಭಿಪ್ರಾಯ ಪಟ್ಟಿತು.

 “ಒಂದು ಶತಮಾನದ ನಂತರ ಮಾನವೀಯತೆ ಇಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈಗಾಗಲೇ ಐದು ವರ್ಷ ವ್ಯಾಸಂಗ ಪೂರೈಸಿರುವ ಬಹುತೇಕ 500 ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಅತಂತ್ರಗೊಂಡಿರುವುದು ನಮ್ಮ ಗಮನಕ್ಕೆ ಬಂದಿದೆ. ಅವರೆಲ್ಲ ಈಗಾಗಲೇ ಏಳು ಸೆಮಿಸ್ಟರ್ ಗಳನ್ನು ಭೌತಿಕವಾಗಿ ಹಾಗೂ ಮೂರು ಸೆಮಿಸ್ಟರ್ ಗಳನ್ನು ಆನ್ ಲೈನ್ ‍ತರಗತಿಗಳಲ್ಲಿ ಪೂರೈಸಿದ್ದಾರೆ. ಹೀಗಿದ್ದೂ ಪಠ್ಯ ಕ್ರಮ ತರಬೇತಿಯು ಪ್ರಾಯೋಗಿಕ ತರಬೇತಿಗೆ ಸರಿಸಮವಾಗುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿಲುವಿಗೆ ತನ್ನ ಸಹಮತವಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

 “ಹೀಗಿದ್ದೂ ವಿದ್ಯಾರ್ಥಿಗಳ ಪೋಷಕರು ಅವರ ಶಿಕ್ಷಣಕ್ಕಾಗಿ ದೊಡ್ಡ ಮೊತ್ತವನ್ನು ವೆಚ್ಚ ಮಾಡಿದ್ದಾರೆ. ಸಮಸ್ಯೆಗೆ ಯಾವುದೇ ಪರಿಹಾರ ಕಂಡುಕೊಳ್ಳದಿದ್ದರೆ, ವಿದ್ಯಾರ್ಥಿಗಳ ಕುಟುಂಬಗಳು ಶೋಷಣೆಗೊಳಗಾಗುವುದಲ್ಲದೆ, ಅವರ ಶೈಕ್ಷಣಿಕ ಬದುಕು ಸಂಪೂರ್ಣ ಅತಂತ್ರವಾಗಲಿದೆ” ಎಂದು ಹೇಳಿತು.

ವೈದ್ಯಕೀಯ ಶಿಕ್ಷಣ ವ್ಯವಸ್ಥೆಯು ಏರುಪೇರಾಗುವ ಸಾಧ‍್ಯತೆ ಇರುವುದರಿಂದ ಯುದ್ಧದ ಕಾರಣಕ್ಕೆ ಉಕ್ರೇನ್ ನಿಂದ ದೇಶಕ್ಕೆ ಮರಳಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲು ಸಾಧ‍್ಯವಿಲ್ಲ ಎಂದು ಇದಕ್ಕೂ ಮುನ್ನ ಕೇಂದ್ರ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತ್ತು.

ವಿದೇಶಿ ವೈದ್ಯಕೀಯ ವಿದ್ಯಾಲಯಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕ್ರಮವಾಗಿ ಒಂದರಿಂದ ನಾಲ್ಕನೆ ವರ್ಷದ ಪದವಿಯಲ್ಲಿ ಕಲಿಯುತ್ತಿರುವ ಪದವಿ ಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ಸಲ್ಲಿಸಿರುವ ಮೊಕದ್ದಮೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಲಿಸುತ್ತಿದೆ.

share
Next Story
X