Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಮರುಳು ಕಾರ್ಯಕ್ರಮಗಳಿಂದ ದೇಶದ...

ಜನಮರುಳು ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ : ಪ್ರಧಾನಿ ಮೋದಿ

11 Dec 2022 10:23 PM IST
share
ಜನಮರುಳು ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿ ಸಾಧ್ಯವಿಲ್ಲ : ಪ್ರಧಾನಿ ಮೋದಿ

ನಾಗಪುರ,ಡಿ.11:ದೇಶಕ್ಕೆ ಸುಸ್ಥಿರವಾದ ಅಭಿವೃದ್ಧಿಯ ಅಗತ್ಯವಿದೆಯೇ ಹೊರತು ಜನಮರುಳು ಕಾರ್ಯಕ್ರಮಗಳಿಂದ ಅಧಿಕಾರ ಹಿಡಿಯಲು ಯತ್ನಿಸುವ ಶಾರ್ಟ್‌ಕಟ್ ರಾಜಕಾರಣವಲ್ಲವೆಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಪ್ರತಿಪಾದಿಸಿದ್ದಾರೆ. ಕೆಲವು ರಾಜಕೀಯ ಪಕ್ಷಗಳು ದೇಶದ ಆರ್ಥಿಕತೆಯನ್ನು ನಾಶಪಡಿಸಲು ಯತ್ನಿಸುತ್ತಿವೆಯೆಂದು ಅವರು ಆರೋಪಿಸಿದ್ದಾರೆ.

ಈ ಹಿಂದೆ ತೆರಿಗೆ ಪಾವತಿದಾರರ ಅಪಾರ ಹಣವು ಭ್ರಷ್ಟಾಚಾರ ಹಾಗೂ ವೋಟ್‌ಬ್ಯಾಂಕ್ ರಾಜಕೀಯದಲ್ಲಿ ವ್ಯರ್ಥವಾಗುತ್ತಿತ್ತೆಂದು ಅವರು ತಿಳಿಸಿದ್ದಾರೆ. 75 ಸಾವಿರ ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆಯ ಬಳಿಕ ಸುದ್ದಿಗಾರರ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಲ್ಲಿ ನಡೆಸಲಾದ ಮೂಲಸೌಕರ್ಯ ಅಭಿವೃದ್ಧಿಗಳನ್ನು ಮಾನವೀಯ ಸಂವೇದನೆಯೊಂದಿಗೆ ಮಾಡಲಾಗಿದೆಯೆಂದು ಹೇಳಿದರು.

 ಸಂಘಟಿತ ಶಕ್ತಿ,ಪ್ರಗತಿ ಹಾಗೂ ಎಲ್ಲಾ ರಾಜ್ಯಗಳ ವಿಕಸನದ ಮೂಲಕ ‘ಅಭಿವೃದ್ಧಿ ಹೊಂದಿದ ಭಾರತ’ ಸಾಕಾರಗೊಂಡಿದೆ. ಪ್ರಗತಿಯ ಬಗ್ಗೆ ನಾವು ಸಂಕುಚಿತ ನಿಲುವನ್ನು ತಾಳಿದಲ್ಲಿ, ಅವಕಾಶಗಳು ಕೂಡಾ ಸೀಮಿತವಾಗಿರುತ್ತವೆಯೆಂದು ಅವರು ಹೇಳಿದರು.

ಕಳೆದ ಎಂಟು ವರ್ಷಗಳಲ್ಲಿ ‘ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಹಾಗೂ ಸಬ್ ಕಾ ಪ್ರಯಾಸ್ ’(ಎಲ್ಲರ ಜೊತೆಗೂಡಿ, ಎಲ್ಲಾ ವಿಶ್ವಾಸ ಹಾಗೂ ಪ್ರಯತ್ನದೊಂದಿಗೆ) ಎಂಬ ಧೋರಣೆಯ ಮೂಲಕ ನಾವು ಜನರ ಮನಸ್ಥಿತಿಯನ್ನು ಬದಲಾಯಿಸಿದ್ದೇವೆಎಂದು ಮೋದಿ ತಿಳಿಸಿದರು.

 ನಾಗಪುರದಲ್ಲಿ ಇಂದು ಚಾಲನೆ ನೀಡಲಾದ ಹಾಗೂ ಉದ್ಘಾಟಿಸಲಾದ ಯೋಜನೆಗಳು ಅಬಿವೃದ್ಧಿಯ ಸಮಗ್ರ ದೃಷ್ಟಿಕೋನವನ್ನು ನೀಡಿವೆ ಎಂದು ಪ್ರಧಾನಿ ತಿಳಿಸಿದರು.

 ಶಾರ್ಟ್‌ಕಟ್ ರಾಜಕೀಯ, ತೆರಿಗೆ ಪಾವತಿದಾರರ ಹಣ ಲೂಟಿ ಮಾಡುವ ಹಾಗೂ ಸುಳ್ಳು ಭರವಸೆಗಳ ಮೂಲಕ ಅಧಿಕಾರವನ್ನು ಕಬಳಿಸಲು ಯತ್ನಿಸುವ ರಾಜಕಾರಣಿಗಳ ಬಗ್ಗೆ ಜನತೆ ಎಚ್ಚರವಹಿಸಬೇಕೆಂದು ಅವರು ಕೆ ನೀಡಿದರು. ಶಾರ್ಟ್‌ಕಟ್ ರಾಜಕಾರಣದ ಮೂಲಕ ದೇಶ ಅಭಿವೃದ್ಧಿಯಾಗಲಾರದೆಂದವರು ಪ್ರತಿಪಾದಿಸಿದರು.

‘‘ ಕೆಲವು ರಾಜಕೀಯ ಪಕ್ಷಗಳು ದೇಶದ ಆರ್ಥಿಕತೆಯನ್ನು ನಾಶಪಡಿಸಲು ಯತ್ನಿಸುತ್ತಿವೆ ಹಾಗೂ ಜನರು ಇಂತಹ ರಾಜಕಾರಣಿಗಳು ಹಾಗೂ ಪಕ್ಷಗಳನ್ನು ಬಯಲಿಗೆಳೆಯಬೇಕು. ಶಾರ್ಟ್‌ಕಟ್ ನೀತಿಗಳನ್ನು ಅನುಸರಿಸುವ ಬದಲು ಸುಸ್ಥಿರವಾದ ಅಭಿವೃದ್ಧಿಯ ಬಗ್ಗೆ ಗಮನಹರಿಸಬೇಕೆಂದು ನಾನು ಎಲ್ಲಾ ರಾಜಕೀಯ ಮುಖಂಡರುಗಳಿಗೆ ಮನವಿ ಮಾಡುತ್ತೇನೆ. ಸುಸ್ಥಿರವಾದ ಅಭಿವೃದ್ಧಿಯಿಂದ ಮಾತ್ರವೇ ನೀವು ಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯ’’ ಎಂದು ಪ್ರಧಾನಿ ರಾಜಕೀಯ ಪಕ್ಷಗಳಿಗೆ ಕಿವಮಾತು ಹೇಳಿದರು.

share
Next Story
X