Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಉದ್ವಿಗ್ನತೆಯ ನಡುವೆ ಭಾರತೀಯ ಯೋಧರು...

ಹೊಸ ಉದ್ವಿಗ್ನತೆಯ ನಡುವೆ ಭಾರತೀಯ ಯೋಧರು ಚೀನಿಯರನ್ನು ಹಿಮ್ಮೆಟ್ಟಿಸುವ ವಿಡಿಯೋ ವೈರಲ್: ವಾಸ್ತವಾಂಶ ಇಲ್ಲಿದೆ

14 Dec 2022 4:40 PM IST
share
ಹೊಸ ಉದ್ವಿಗ್ನತೆಯ ನಡುವೆ ಭಾರತೀಯ ಯೋಧರು ಚೀನಿಯರನ್ನು ಹಿಮ್ಮೆಟ್ಟಿಸುವ ವಿಡಿಯೋ ವೈರಲ್: ವಾಸ್ತವಾಂಶ ಇಲ್ಲಿದೆ

ಹೊಸದಿಲ್ಲಿ: ಅರುಣಾಚಲ ಪ್ರದೇಶದ ( Arunachal Pradesh) ತವಾಂಗ್‌ನ ಗಡಿಯಲ್ಲಿ ಡಿ.9ರಂದು ಭಾರತ (India) ಮತ್ತು ಚೀನಿ ಪಡೆಗಳ (China Troops) ನಡುವೆ ಘರ್ಷಣೆಗಳು ನಡೆದಿದ್ದನ್ನು ಕೇಂದ್ರ ಸರಕಾರವು ಮಂಗಳವಾರ ದೃಢಪಡಿಸಿದ ಬೆನ್ನಿಗೇ ಹಿಂದಿನ ಘರ್ಷಣೆಗಳ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಕಳೆದ ವರ್ಷದ ಈ ವೀಡಿಯೊ ಅರುಣಾಚಲ ಪ್ರದೇಶದ ತವಾಂಗ್‌ನ ಅದೇ ಪ್ರದೇಶದಲ್ಲಿ ನಡೆದಿದ್ದ ಭೀಷಣ ಘರ್ಷಣೆಗಳನ್ನು ತೋರಿಸುತ್ತಿದೆ.

ಈ ವೀಡಿಯೊಕ್ಕೂ ಡಿ.9ರಂದು ಸಂಭವಿಸಿದ್ದ ಘರ್ಷಣೆಗಳಿಗೂ ಸಂಬಂಧವಿಲ್ಲ ಎಂದು ಸೇನೆಯು ಸ್ಪಷ್ಟಪಡಿಸಿದೆ. ವೀಡಿಯೊದಲ್ಲಿ ತೋರಿಸಲಾಗಿರುವ ಘರ್ಷಣೆಗಳು 2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ನಡೆದಿದ್ದ ಘರ್ಷಣೆಗಳ ಸ್ವಲ್ಪ ಸಮಯದ ಬಳಿಕ ತವಾಂಗ್‌ನ ಯಾಂಗ್‌ತ್ಸೆ ಪ್ರದೇಶದಲ್ಲಿ ಸಂಭವಿಸಿದ್ದವು ಎಂದು ನಂಬಲಾಗಿದೆ. ಗಲ್ವಾನ್ ಕಣಿವೆ ಸಂಘರ್ಷಗಳಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು ಮತ್ತು 40ಕ್ಕೂ ಅಧಿಕ ಚೀನಿ ಸೈನಿಕರು ಮೃತಪಟ್ಟಿದ್ದರು ಅಥವಾ ಗಾಯಗೊಂಡಿದ್ದರು.

ಭಾರತೀಯ ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿ ತಳವೂರುವ ಚೀನಿಯರ ಪ್ರಯತ್ನಗಳನ್ನು ಭಾರತೀಯ ಯೋಧರು ಸಂಘಟಿತರಾಗಿ ಹಿಮ್ಮೆಟ್ಟಿಸುತ್ತಿರುವುದನ್ನು ವೀಡಿಯೊ ತೋರಿಸಿದೆ.

ಭಾರತೀಯ ಯೋಧರು ಘರ್ಷಣೆಯಲ್ಲಿ ತೊಡಗಿರುವುದನ್ನು ಮತ್ತು ಗಡಿ ದಾಟಲು ಪ್ರಯತ್ನಿಸುತ್ತಿದ್ದ ಚೀನಿಯರನ್ನು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

‘ಅವರನ್ನು ಬಲವಾಗಿ ಹೊಡೆಯಿರಿ, ಅವರಿನ್ನು ಇಲ್ಲಿಗೆ ಬರಬಾರದು’ ಎಂದು ಪಂಜಾಬಿಯಲ್ಲಿ ಕೂಗುತ್ತಿದ್ದ ಭಾರತೀಯ ಯೋಧರು ಚೀನಿ ಸೈನಿಕರನ್ನು ಲಾಠಿಗಳಿಂದ ಥಳಿಸುವುದನ್ನು ಮತ್ತು ಮುಷ್ಟಿಗಳಿಂದ ಗುದ್ದುವುದನ್ನು ವೀಡಿಯೊ ತೋರಿಸಿದೆ.

ಕಳೆದ ವಾರದ ಘಟನೆ ಬಹಿರಂಗಗೊಂಡ ಬಳಿಕ ಹಲವು ರಾಜಕೀಯ ನಾಯಕರು ಈ ವೀಡಿಯೊವನ್ನು ಶೇರ್ ಮಾಡಿಕೊಂಡಿದ್ದಾರೆ.

Amid New Tension, 2021 Video Shows Indian Soldiers Repelling China Troops https://t.co/U3e4oGsOsH pic.twitter.com/Dijgu1Gd6q

— NDTV (@ndtv) December 14, 2022
share
Next Story
X