Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮಸೇತು ಕುರಿತು ಉಪಗ್ರಹ ಚಿತ್ರಗಳಿಂದ...

ರಾಮಸೇತು ಕುರಿತು ಉಪಗ್ರಹ ಚಿತ್ರಗಳಿಂದ ನಿಖರ ಪುರಾವೆ ದೊರಕಿಲ್ಲ: ಕೇಂದ್ರ ಸರ್ಕಾರ

23 Dec 2022 6:00 PM IST
share
ರಾಮಸೇತು ಕುರಿತು ಉಪಗ್ರಹ ಚಿತ್ರಗಳಿಂದ ನಿಖರ ಪುರಾವೆ ದೊರಕಿಲ್ಲ: ಕೇಂದ್ರ ಸರ್ಕಾರ

ಹೊಸದಿಲ್ಲಿ, ಡಿ.23: ರಾಮಸೇತುವಿನ ನೈಜ ರೂಪ ಈಗಲೂ ಅಲ್ಲಿದೆಯೆಂಬುದು ಹೇಳುವುದು ಕಷ್ಟ. ಆದರೆ ಅಲ್ಲಿ ರಚನೆಯೊಂದು ಇರುವ ಬಗ್ಗೆ ಕೆಲವು ಸುಳಿವುಗಳು ದೊರೆತಿವೆ ಎಂದು ಕೇಂದ್ರ ಸರಕಾರ ಶುಕ್ರವಾರ ರಾಜ್ಯಸಭೆಗೆ ತಿಳಿಸಿದೆ.

ಹರ್ಯಾಣದ ಪಕ್ಷೇತರ ಸಂಸದ ಕಾರ್ತಿಕೇಯ ರ್ಮಾ ಅವರು ರಾಜ್ಯಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ,ಭಾರತದ ರಾಮೇಶ್ವರಂ ಹಾಗೂ ಶ್ರೀಲಂಕಾ ಮಧ್ಯದ ಸಾಗರಪ್ರದೇಶದಲ್ಲಿ ಕಂಡುಬಂದಿದೆಯೆನ್ನಲಾದ ರಾಮಸೇತು ಸಂರಚನೆಯ ಕುರಿತು ವೈಜ್ಞಾನಿಕ ಸಂಶೋಧನೆಗಳು ನಡೆದಿವೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೇಂದ್ರ ಸಚಿವ ಜೀತೆಂದ್ರ ಶರ್ಮಾ ಅವರು  ‘‘ರಾಮಸೇತುವಿನ ಬಗ್ಗೆ ಮಾಹಿತಿ ನೀಡಲು ನಮಗೆ ಕೆಲವೊಂದು ಇತಿಮಿತಿಗಳಿವೆ. ಯಾಕೆಂದರೆ ಅದೊಂದು 18 ಸಾವಿರ ವರ್ಷಗಳ ಹಿಂದಿನ ಇತಿಹಾಸವಾಗಿದೆ. ಈಗ ನಾವು ಮಾತನಾಡುತ್ತಿರುವ ಸೇತುವೆಯು 56 ಕಿ.ಮೀ. ವಿಸ್ತೀರ್ಣದ್ದಾಗಿತ್ತು ಎಂದು ಅವರು ತಿಳಿಸಿದರು.

ಬಾಹ್ಯಾಕಾಶ ತಂತ್ರಜ್ಞಾನದ ಮೂಲಕ ರಾಮೇಶ್ವರದ ಸಮುದ್ರ ಪ್ರದೇಶದಲ್ಲಿ ಕಲ್ಲುಗಳ ಕೆಲವು ತುಂಡುಗಳನ್ನು ಪತ್ತೆಹಚ್ಚಲಾಗಿದೆ. ನಿರಂತರವಾಗಿರುವಂತಹ ರಚನೆಗಳು ಅಲ್ಲಿವೆ. ದ್ವೀಪಗಳು ಹಾಗೂ ಸೀಮೆಸುಣ್ಣದ ಕಲ್ಲಿನ ರಚನೆಗಳು ಕಂಡುಬರುತ್ತಿವೆ. ಆದರೆ ಸರಳವಾಗಿ ಹೇಳುವುದಾದರೆ, ರಾಮಸೇತುವಿನ ನೈಜ ಸಂರಚನೆ ಅಲ್ಲಿದೆಯೆಂಬುದು ಹೇಳುವುದು ಕಷ್ಟಕರವೆಂದವರು ತಿಳಿಸಿದರು. ಆದಾಗ್ಯೂ ಅಲ್ಲಿ ಸಂರಚನೆಯು ಇರುವ ಬಗ್ಗೆ ಕೆಲವೊಂದು ಸೂಚನೆಗಳು ದೊರೆತಿವೆ ಎಂದರು.

ಕೇಂದ್ರ ಸರಕಾರವು ಪುರಾತನ ನಗರ ದ್ವಾರಕಾ ಆಗೂ ರಾಮಸೇತುವಿನಂತಹ ಪ್ರಕರಣಗಳ ಬಗ್ಗೆಯೂ ಪರಿಶೀಲನೆ ನಡೆಸಲಿದೆಯೆಂದು ಜಿತೇಂದ್ರ ಪ್ರಸಾದ್ ತಿಳಿಸಿದರು.

ಕೇಂದ್ರ ಸಚಿವರ ಈ ಹೇಳಿಕೆಯನ್ನು ಬಿಜೆಪಿ ಸರಕಾರದ ವಿರುದ್ಧ ಟೀಕಾಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು, ‘‘ ಎಲ್ಲಾ ಭಕ್ತರೇ ನಿಮ್ಮ ಕಿವಿಗಳನ್ನು ಹಾಊ ಬಾಯಿಗಳನ್ನು ತೆರೆದಿಟ್ಚು ಆಲಿಸಿ. ರಾಮಸೇತುವೆ ಅಸ್ತಿತ್ವದಲ್ಲಿರುವುದಕ್ಕೆ ಯಾವುದೇ ಪುರಾವೆ ಇಲ್ಲವೆಂದು ಸಂಸತ್ನಲ್ಲಿ ಮೋದಿ ಸರಕಾರ ಹೇಳುತ್ತಿದೆ ಎಂದರು.

ಪುರಾತನ ಸಂಸೃತ ಮಹಾವ್ಯ ರಾಮಾಯಣದಲ್ಲಿ ಲಂಕೆಯನ್ನು ತಲುಪುವುದಕಾಗಿ ರಾಮಸೇತುವೆಯನ್ನು ಶ್ರೀರಾಮನು, ವಾನರ ಸೇನೆಯ ಜೊತೆಗೂಡಿ ನಿರ್ಮಿಸಿದನೆಂದು ಹೇಳಲಾಗಿದೆ.

share
Next Story
X