Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ | ಕಾಡಾನೆಗಳ ಬಗ್ಗೆ ಜನ...

ಮೂಡಿಗೆರೆ | ಕಾಡಾನೆಗಳ ಬಗ್ಗೆ ಜನ ಜಾಗೃತಿಗೆ Digital Display ಬೋರ್ಡ್‍ಗಳ ಅಳವಡಿಕೆ: ಶಾಸಕ ಎಂ.ಪಿ.ಕುಮಾರಸ್ವಾಮಿ

24 Dec 2022 6:11 PM IST
share
ಮೂಡಿಗೆರೆ | ಕಾಡಾನೆಗಳ ಬಗ್ಗೆ ಜನ ಜಾಗೃತಿಗೆ Digital Display ಬೋರ್ಡ್‍ಗಳ ಅಳವಡಿಕೆ: ಶಾಸಕ ಎಂ.ಪಿ.ಕುಮಾರಸ್ವಾಮಿ

ಮೂಡಿಗೆರೆ, ಡಿ.24: ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಎಚ್ಚರಿಸುವ ಸಲುವ ಹಾಗೂ ಮುನ್ನೆಚ್ಚರಿಕೆಯಿಂದ ತಿರುಗಾಡುವಂತಾಗಲು ಕಾಡಂಚಿನ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ನಾಮಫಲಕಗಳನ್ನು ಅಳವಡಿಸುವ ಕೆಲಸಕ್ಕೆ ಶನಿವಾರ ಶಾಸಕ ಎಂ.ಪಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಪಟ್ಟಣದ ಹೊರವಲಯದ ಹ್ಯಾಂಡ್‍ಪೋಸ್ಟ್ ಸರ್ಕಲ್ ಬಳಿ ಅರಣ್ಯ ಇಲಾಖೆ ವತಿಯಿಂದ ಕಾಡಾನೆಯಿಂದ ಅವಘಡ ತಪ್ಪಿಸುವ ಉದ್ದೇಶದಿಂದ ಅಳವಡಿಸಿರುವ ಕಾಡಾನೆಗಳ ಬಗ್ಗೆ ಮಾಹಿತಿ ನೀಡುವ ಡಿಜಿಟಲ್ ಡಿಸ್‍ಪ್ಲೇ ಬೋರ್ಡ್‍ಗಳ (Digital Display) ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರದ ಆದೇಶದಂತೆ ಅರಣ್ಯ ಇಲಾಖೆ ಹರಸಾಹಸಪಟ್ಟು ಭೈರಾಪುರದಲ್ಲಿ ಭೈರ ಎಂಬ ಕಾಡಾನೆಯನ್ನು ಸೆರೆ ಹಿಡಿದಿದೆ. ತಾಲೂಕಿನ ಕುಂದೂರು ಭಾಗದಲ್ಲಿ 2  ಕಾಡಾನೆಗಳನ್ನು ಇಲಾಖೆ ಅಧಿಕಾರಿ, ಸಿಬ್ಬಂದಿ ಶ್ರಮವಹಿಸಿ ಸೆರೆ ಹಿಡಿದು ಸ್ಥಳಾಂತರ ಮಾಡಿದ್ದಾರೆ. ಇದರಿಂದ ಕಾಡಂಚಿನ ಗ್ರಾಮಗಳ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಭೈರಾಪುರದಲ್ಲಿ ಸೆರೆ ಹಿಡಿದ ಕಾಡಾನೆಯ ಬಗ್ಗೆ ಗೊಂದಲ ಮೂಡಿಸುವ ಮಾತನಾಡುತ್ತಿದ್ದಾರೆ. ಆದರೆ ಸೆರೆ ಸಿಕ್ಕ ಆನೆ ಭೈರ ಎಂಬುದು ದೃಢಪಟ್ಟಿದೆ. ಗೂನು ಬೆನ್ನು ಹೊಂದಿದ್ದ ಆನೆಯೇ ಭೈರ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.

ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಜನರು ಎಚ್ಚರಿಕೆಯಿಂದ ತಿರುಗಾಡುವಂತಾಗಲು ಹಾಗೂ ಯಾವುದೇ ರೀತಿಯ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಹಿಸುವ ಉದ್ದೇಶದಿಂದ ಕಾಡಾನೆಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ನಿರ್ದಿಷ್ಟು ಪ್ರದೇಶಗಳಲ್ಲಿ ಡಿಜಿಟಲ್ ನಾಮಫಲಕಗಳನ್ನು ಅಳವಡಿಸಲಾಗುತ್ತಿದೆ. ಅರಣ್ಯ ಇಲಾಖೆ ವತಿಯಿಂದ ಡಿಜಿಟಲ್ ಡಿಸ್‍ಪ್ಲೇ ಬೋರ್ಡ್ ಅಳವಡಿಸುವ ಹಾಗೂ ಕಾಡಾನೆಗಳು ಕಂಡು ಬಂದಲ್ಲಿ ಶೀಘ್ರ  ಎಸ್‍ಎಂಎಸ್ ಕಳುಹಿಸುವಂತಹ ವಿನೂತನ ಸೇವೆಯನ್ನು ಪ್ರಾರಂಭಿಸಲಾಗಿದೆ ಎಂದ ಅವರು, ಡಿಸ್‍ಪ್ಲೇ ಬೋರ್ಡ್‍ಗಳಿಂದಾಗಿ ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ತಿರುಗಾಡಲು ಸಾಧ್ಯವಾಗಲಿದೆ ಎಂದರು.

ಡಿಸಿಎಫ್ ಕ್ರಾಂತಿ ಮಾತನಾಡಿ, ಕಾಡಾನೆ ಸಂಚರಿಸುವ ಬಗ್ಗೆ ಮಾಹಿತಿ ನೀಡಲು ಹ್ಯಾಂಡ್‍ಪೋಸ್ಟ್, ಬೈದುವಳ್ಳಿ, ಗೌಡಹಳ್ಳಿ, ಬೈರಾಪುರ, ಮೇಕನಗದ್ದೆ, ಗುತ್ತಿ, ಚೇಗು, ಗೋಣಿಬೀಡು, ಕುಂದೂರು, ಗಬ್ಗಲ್ ಸೇರಿದಂತೆ ಸುಮಾರು 10 ಗ್ರಾಮಗಳಲ್ಲಿ ಕಾಡಾನೆ ಇರುವ ಮಾಹಿತಿ ಬಗ್ಗೆ ಡಿಜಿಟಲ್ ಡಿಸ್‍ಪ್ಲೇ ಬೋರ್ಡ್ ಅಳವಡಿಸಲಾಗಿದೆ. ಸಂಜೆ 4ರಿಂದ ಬೆಳಗ್ಗೆ 10ರವರೆಗೆ ಈ ಬೋರ್ಡ್‍ಗಳು ಕಾರ್ಯನಿರ್ವಹಿಸುತ್ತವೆ. ಕಾಡಾನೆಗಳು ಕಂಡು ಬಂದರೆ 7204004261 ಸಂಖ್ಯೆಗೆ ಕರೆ ಮಾಡಿದರೆ ಕೂಡಲೇ ಇಟಿಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾಡಾನೆ ಓಡಿಸುವ ಕ್ರಮ ಕೈಗೊಳ್ಳುತ್ತಾರೆಂದು ಮಾಹಿತಿ ನೀಡಿದರು. 

ಎಸಿಎಪ್ ರಾಜೇಶ್ ನಾಯಕ್, ಆರ್ ಎಫ್‍ಒ ಮೋಹನ್‍ಕುಮಾರ್, ಎಟಿಎಫ್‍ನ ಆರ್‍ಎಫ್‍ಒ ಸಿ.ರಂಗನಾಥ್ ಹಾಗೂ ಇಟಿಎಫ್ ಮತ್ತು ಅರಣ್ಯ ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.

share
Next Story
X