Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದಿನ ವರ್ಷದ ಮಾ.31ರೊಳಗೆ ಆಧಾರ್...

ಮುಂದಿನ ವರ್ಷದ ಮಾ.31ರೊಳಗೆ ಆಧಾರ್ ನೊಂದಿಗೆ ಜೋಡಣೆಗೊಳ್ಳದ ಪಾನ್ ನಿಷ್ಕ್ರಿಯ

24 Dec 2022 10:21 PM IST
share
ಮುಂದಿನ ವರ್ಷದ ಮಾ.31ರೊಳಗೆ ಆಧಾರ್ ನೊಂದಿಗೆ ಜೋಡಣೆಗೊಳ್ಳದ ಪಾನ್ ನಿಷ್ಕ್ರಿಯ

ಹೊಸದಿಲ್ಲಿ: ಮುಂದಿನ ವರ್ಷದ ಮಾರ್ಚ್ 31ರೊಳಗೆ ಆಧಾರ್ನೊಂದಿಗೆ ಜೋಡಣೆಗೊಳ್ಳದ ಪಾನ್ ನಿಷ್ಕ್ರಿಯಗೊಳ್ಳಲಿದೆ ಎಂದು ಆದಾಯ ತೆರಿಗೆ ಇಲಾಖೆಯು ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.

1961ರ ಆದಾಯ ತೆರಿಗೆ ಕಾಯ್ದೆಯಂತೆ ವಿನಾಯಿತಿ ವರ್ಗದಡಿ ಬರದ, ಪಾನ್ ಕಾರ್ಡ್ ಹೊಂದಿರುವ ಎಲ್ಲರೂ 2023, ಮಾ.31ಕ್ಕೆ ಮೊದಲು ಆಧಾರ್ ಜೊತೆಗೆ ತಮ್ಮ ಪಾನ್ ಜೋಡಣೆಗೊಳಿಸುವುದು ಕಡ್ಡಾಯವಾಗಿದೆ. ಜೋಡಣೆಗೊಳ್ಳದ ಪಾನ್ 2023, ಎ.1ರಿಂದ ನಿಷ್ಕ್ರಿಯಗೊಳ್ಳುತ್ತದೆ ಎಂದು ಇಲಾಖೆಯು ಹೇಳಿದೆ.

ಮೇ, 2017ರಲ್ಲಿ ಕೇಂದ್ರ ವಿತ್ತ ಸಚಿವಾಲಯವು ಹೊರಡಿಸಿದ್ದ ಅಧಿಸೂಚನೆಯಂತೆ ಅಸ್ಸಾಂ, ಜಮ್ಮು-ಕಾಶ್ಮೀರ ಮತ್ತು ಮೇಘಾಲಯಗಳ ನಿವಾಸಿಗಳು, ಆದಾಯ ತೆರಿಗೆ ಕಾಯ್ದೆಯಂತೆ ಅನಿವಾಸಿ ಭಾರತೀಯರು, ಹಿಂದಿನ ವರ್ಷದ ಯಾವುದೇ ಸಮಯದಲ್ಲಿ 80 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸಾದವರು ಹಾಗೂ ಭಾರತದ ಪ್ರಜೆಯಲ್ಲದ ವ್ಯಕ್ತಿಗಳು ವಿನಾಯಿತಿ ವರ್ಗದಲ್ಲಿ ಸೇರಿದ್ದಾರೆ.

ಪಾನ್ ನಿಷ್ಕ್ರಿಯಗೊಂಡರೆ ವ್ಯಕ್ತಿಯು ಆದಾಯ ತೆರಿಗೆ ಕಾಯ್ದೆಯಡಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಮತ್ತು ಹಲವಾರು ತೊಂದರೆಗಳಿಗೆ ಸಿಲುಕಬೇಕಾಗುತ್ತದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯು ಮಾ.30ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ತಿಳಿಸಿತ್ತು. ನಿಷ್ಕ್ರಿಯ ಪಾನ್ ಬಳಸಿ ಐಟಿ ರಿಟರ್ನ್ ಸಲ್ಲಿಸಲು ವ್ಯಕ್ತಿಗೆ ಸಾಧ್ಯವಾಗುವುದಿಲ್ಲ, ಬಾಕಿಯಿರುವ ರಿಟರ್ನ್ಗಳು ಸಂಸ್ಕರಿಸಲ್ಪಡುವುದಿಲ್ಲ, ನಿಷ್ಕ್ರಿಯ ಪಾನ್ಗೆ ತೆರಿಗೆ ಮರುಪಾವತಿ ಸಾಧ್ಯವಾಗುವುದಿಲ್ಲ ಮತ್ತು ದೋಷಯುಕ್ತ ರಿಟರ್ನ್ ಗಳ ಪ್ರಕರಣದಲ್ಲಿ ಬಾಕಿಯಿರುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಮತ್ತು ಹೆಚ್ಚಿನ ದರದಲ್ಲಿ ತೆರಿಗೆಯನ್ನು ಕಡಿತಗೊಳಿಸಲಾಗುತ್ತದೆ.

ಅಲ್ಲದೆ ಎಲ್ಲ ರೀತಿಯ ಹಣಕಾಸು ವಹಿವಾಟುಗಳಲ್ಲಿ ಪಾನ್ ಪ್ರಮುಖ ಕೆವೈಸಿ ಮಾನದಂಡಗಳಲ್ಲಿ ಒಂದಾಗಿರುವುದರಿಂದ ತೆರಿಗೆದಾರರು ಬ್ಯಾಂಕುಗಳು ಮತ್ತು ಇತರ ಹಣಕಾಸು ಪೋರ್ಟಲ್ಗಳಂತಹ ವಿವಿಧ ವೇದಿಕೆಗಳಲ್ಲಿ ತೊಂದರೆಯನ್ನು ಎದುರಿಸಬೇಕಾಗಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

share
Next Story
X