Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪುಟಿನ್ ಗೆ ಉಸಿರಾಡಲು ಸ್ವಲ್ಪ ಅವಕಾಶ...

ಪುಟಿನ್ ಗೆ ಉಸಿರಾಡಲು ಸ್ವಲ್ಪ ಅವಕಾಶ ಸಿಕ್ಕಿದೆ: ಕದನ ವಿರಾಮ ಘೋಷಣೆಗೆ ಬೈಡನ್ ಪ್ರತಿಕ್ರಿಯೆ

6 Jan 2023 10:38 PM IST
share
ಪುಟಿನ್ ಗೆ ಉಸಿರಾಡಲು ಸ್ವಲ್ಪ ಅವಕಾಶ ಸಿಕ್ಕಿದೆ: ಕದನ ವಿರಾಮ ಘೋಷಣೆಗೆ ಬೈಡನ್ ಪ್ರತಿಕ್ರಿಯೆ

ವಾಷಿಂಗ್ಟನ್, ಜ.6: ಆರ್ಥೊಡಾಕ್ಸ್ ಕ್ರಿಸ್ಮಸ್ ಸಂದರ್ಭ 2 ದಿನ ಕದನ ವಿರಾಮ ಘೋಷಿಸುವ ಪುಟಿನ್ ಘೋಷಣೆ ರಶ್ಯ ಸೈನಿಕರಿಗೆ ಉಸಿರಾಡಲು ಸ್ವಲ್ಪ ಅವಕಾಶ ದೊರಕಿಸುವ ಪ್ರಯತ್ನವಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಟೀಕಿಸಿದ್ದಾರೆ.

ಡಿಸೆಂಬರ್ 25 ಮತ್ತು ಹೊಸ ವರ್ಷದಂದು ಅವರು ಆಸ್ಪತ್ರೆ, ಶಿಶುವಿಹಾರ ಮತ್ತು ಚರ್ಚ್ಗಳ ಮೇಲೆ ಬಾಂಬ್ ದಾಳಿಗೆ ಸಿದ್ಧವಿದ್ದರು. ಬಹುಷಃ ಈಗ ಅವರಿಗೆ ಉಸಿರಾಡಲು ಸ್ವಲ್ಪ ಅವಕಾಶದ ಅಗತ್ಯವಿದೆ’ ಎಂದು ಬೈಡನ್ ಹೇಳಿದ್ದಾರೆ. 

ಪುಟಿನ್ ಅವರ ಕದನವಿರಾಮ ಸಿನಿಕತನದ ಪ್ರಯತ್ನವಾಗಿದೆ. ಈ ಬಿಡುವನ್ನು ರಶ್ಯ ‘ವಿರಾಮ ಪಡೆದು, ಮರುಸಂಘಟಿತಗೊಂಡು ಅಂತಿಮವಾಗಿ ಮರುದಾಳಿಗೆ’ ಬಳಸಿಕೊಳ್ಳಲಿದೆ. ತಾನು ಶಾಂತಿಯನ್ನು ಬಯಸುತ್ತಿದ್ದೇನೆ ಎಂದು ತೋರಿಸಿಕೊಂಡು ಜಗತ್ತನ್ನು ಮರುಳುಗೊಳಿಸಲು ಪುಟಿನ್ ಬಯಸುತ್ತಿದ್ದಾರೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಹೇಳಿದ್ದಾರೆ.

ಕದನ ವಿರಾಮ ಘೋಷಣೆಯಿಂದ ಯುದ್ಧದ ಅಲೆಯಲ್ಲಿ ಬದಲಾವಣೆ ಕಂಡುಬರುವುದಿಲ್ಲ. ರಶ್ಯಕ್ಕೆ ಈ ಯುದ್ಧವನ್ನು ಅಂತ್ಯಗೊಳಿಸುವ, ಶಾಂತಿಗೆ ಆಸ್ಪದ ಮಾಡುವ ಬಗ್ಗೆ ನಿಜವಾಗಿಯೂ ಕಾಳಜಿಯಿದ್ದರೆ, ಅದು ಉಕ್ರೇನ್ನ ಸಾರ್ವಭೌಮ ಪ್ರದೇಶದಿಂದ ತನ್ನ ಪಡೆಯನ್ನು ಮೊದಲು ಹಿಂದಕ್ಕೆ ಪಡೆಯಲಿ ಎಂದು ಪ್ರೈಸ್ ಹೇಳಿದ್ದಾರೆ.

ಪುಟಿನ್ ಕದನವಿರಾಮ ಘೋಷಣೆಗೆ ಪ್ರತಿಕ್ರಿಯಿಸಿರುವ ಉಕ್ರೇನ್ ಅಧ್ಯಕ್ಷರ ಸಲಹೆಗಾರ ಮಿಖಾಯಿಲೊ ಪೊಡೊಲ್ಯಾಕ್ ‘ರಶ್ಯ ಪಡೆಗಳು ಮೊದಲು ಆಕ್ರಮಿತ ಉಕ್ರೇನ್ನಿಂದ ಹೊರನಡೆಯಲಿ, ಆ ಮೇಲೆ ತಾತ್ಕಾಲಿಕ ಕದನ ವಿರಾಮ ಘೋಷಿಸಲಿ’ ಎಂದಿದ್ದಾರೆ. ಉಕ್ರೇನ್ ಯಾವತ್ತೂ ವಿದೇಶಿ ನೆಲದ ಮೇಲೆ ದಾಳಿ ನಡೆಸಿಲ್ಲ ಮತ್ತು ನಾಗರಿಕರನ್ನು ಹತ್ಯೆಗೈದಿಲ್ಲ. 

ತನ್ನ ಭೂಪ್ರದೇಶದಲ್ಲಿ ಆಕ್ರಮಣಕಾರಿ ಸೈನ್ಯದ ಸದಸ್ಯರನ್ನು ಮಾತ್ರ ನಾಶಗೊಳಿಸಿದೆ. ನಿಮ್ಮ ಬೂಟಾಟಿಕೆ ನಿಮ್ಮಲ್ಲಿಯೇ ಇರಲಿ, ಮೊದಲು ಉಕ್ರೇನ್ನ ಭೂಪ್ರದೇಶದಿಂದ ಹೊರನಡೆಯಿರಿ ಮತ್ತು ಆ ಬಳಿಕ ತಾತ್ಕಾಲಿಕ ಕದನ ವಿರಾಮದ ಬಗ್ಗೆ ಮಾತನಾಡಿ’ ಎಂದವರು ಟ್ವೀಟ್ ಮಾಡಿದ್ದಾರೆ. ಈ ಮಧ್ಯೆ, ವ್ಲಾದಿಮಿರ್ ಪುಟಿನ್ ಘೋಷಿಸಿರುವ ಏಕಪಕ್ಷೀಯ ಕದನ ವಿರಾಮವು ಯುದ್ಧರಂಗದಲ್ಲಿ ಸಂಪೂರ್ಣವಾಗಿ ಜಾರಿಗೆ ಬಂದಿದೆ. ಜನವರಿ 7ರ ಮಧ್ಯರಾತ್ರಿವರೆಗೆ ಇದು ಜಾರಿಯಲ್ಲಿರುತ್ತದೆ ಎಂದು ರಶ್ಯದ ಟಿವಿ ವಾಹಿನಿ ವರದಿ ಮಾಡಿದೆ.

ರಶ್ಯದಿಂದ ಮತ್ತೆ ದಾಳಿ: ಉಕ್ರೇನ್ ವರದಿ

ರಶ್ಯ ಘೋಷಿಸಿದ ಏಕಪಕ್ಷೀಯ ಕದನವಿರಾಮ ಜಾರಿಗೆ ಬಂದಿದ್ದರೂ, ಶುಕ್ರವಾರ ರಶ್ಯ ಸೇನೆ ಪೂರ್ವ ಉಕ್ರೇನ್ನ ಕ್ರಮಟೋರ್ಸ್ಕ್ ನಗರದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ಪೂರ್ವ ಪ್ರಾಂತದ ಉಪಮುಖ್ಯಸ್ಥ ಕಿರಿಲೊ ಟಿಮೊಶೆಂಕೊ ಹೇಳಿದ್ದಾರೆ. 

ಅವರೇ ಘೋಷಿಸಿದ ಕದನವಿರಾಮವನ್ನು ಅವರೇ ಉಲ್ಲಂಘಿಸಿದ್ದಾರೆ. ಆಕ್ರಮಣಕಾರರ ಪಡೆ 2 ಬಾರಿ ನಡೆಸಿದ ಕ್ಷಿಪಣಿ ದಾಳಿಯಲ್ಲಿ ವಸತಿ ಕಟ್ಟಡಕ್ಕೆ ಹಾನಿಯಾಗಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದವರು ಟ್ವೀಟ್ ಮಾಡಿದ್ದಾರೆ.

share
Next Story
X