Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾವೋವಾದಿಗಳ ವಿರುದ್ಧ ಬೃಹತ್...

ಮಾವೋವಾದಿಗಳ ವಿರುದ್ಧ ಬೃಹತ್ ಕಾರ್ಯಾಚರಣೆ: ಉನ್ನತ ಬಂಡುಕೋರ ನಾಯಕ ಹಿದಿಮಗೆ ಗಾಯ?‌

12 Jan 2023 8:17 PM IST
share
ಮಾವೋವಾದಿಗಳ ವಿರುದ್ಧ ಬೃಹತ್ ಕಾರ್ಯಾಚರಣೆ: ಉನ್ನತ ಬಂಡುಕೋರ ನಾಯಕ ಹಿದಿಮಗೆ ಗಾಯ?‌

ಭೋಪಾಲ, ಜ. 12: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ಬುಧವಾರ ನಡೆಸಿದ ಸರ್ಜಿಕಲ್ ದಾಳಿಯಲ್ಲಿ ಮಾವೋವಾದಿ ಬಂಡುಕೋರರ ಉನ್ನತ ನಾಯಕ ಹಾಗೂ ಭದ್ರತಾ ಪಡೆಗಳ ಮೇಲೆ ನಡೆದ ಕೆಲವು ಬೃಹತ್ ದಾಳಿಗಳ ಸೂತ್ರಧಾರನೆನ್ನಲಾದ ಮಾದ್ವಿ ಹಿದಿಮ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ.

ಹಿದಿಮನ ಗುಂಪನ್ನು ಪತ್ತೆ ಹಚ್ಚುವುದಕ್ಕಾಗಿ ಹೆಲಿಕಾಪ್ಟರ್‌ಗಳು, ಡ್ರೋನ್ ಗಳು, ಸಿಆರ್‌ಪಿಎಫ್‌ನ ಕೋಬ್ರಾ ಘಟಕ, ಛತ್ತೀಸ್‌ಗಢ ಪೊಲೀಸ್ ಮತ್ತು ತೆಲಂಗಾಣ ಪೊಲೀಸ್ನ ಗ್ರೇಹೌಂಡ್ ವಿಶೇಷ ಪಡೆಗಳನ್ನು ಕಳುಹಿಸಲಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ನಡೆದ ಮಾವೋವಾದಿ ನಿಗ್ರಹ ಕಾರ್ಯಾಚರಣೆಗಳಲ್ಲೇ ಅತಿ ದೊಡ್ಡ ಕಾರ್ಯಾಚರಣೆ ಎಂಬುದಾಗಿ ಬಣ್ಣಿಸಲಾಗಿದೆ.

2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮಾವೋವಾದಿ ಬಂಡಾಯವನ್ನು ಸಂಪೂರ್ಣವಾಗಿ ನಿಲ್ಲಿಸಲಾಗುವುದು ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಛತ್ತೀಸ್‌ಗಢದಲ್ಲಿ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಛತ್ತೀಸ್‌ಗಢ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಗಡಿಗಳು ಪರಸ್ಪರ ಸಂಧಿಸುವ ಸ್ಥಳದ ಸಮೀಪವಿರುವ ಶಿಬಿರದಲ್ಲಿ ಕೋಬ್ರಾ ಪಡೆಗಳು ಹೆಲಿಕಾಪ್ಟರ್ನಿಂದ ಇಳಿಯುತ್ತಿರುವಾಗ ಅವರ ಮೇಲೆ ಮಾವೋವಾದಿಗಳು ಗುಂಡು ಹಾರಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

‘‘ಭದ್ರತಾ ಪಡೆಗಳು ತಮ್ಮತ್ತ ಮುನ್ನಗ್ಗುತ್ತಿರುವುದನ್ನು ಕಂಡ ಮಾವೋವಾದಿಗಳು ತಪ್ಪಿಸಿಕೊಂಡಿದ್ದಾರೆ. ಕೋಬ್ರಾ ಕಮಾಂಡೊಗಳಿಗೆ ಯಾವುದೇ ಅಪಾಯವಾಗಿಲ್ಲ. ಈ ದಾಳಿಯಲ್ಲಿ ಮಾವೋವಾದಿಗಳಿಗೆ ಆಗಿರಬಹುದಾದ ಹಾನಿಯ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ’’ ಎಂದು ಸಿಆರ್‌ಪಿಎಫ್‌ ಛತ್ತೀಸ್‌ಗಢ ವಲಯದ ಇನ್‌ಸ್ಪೆಕ್ಟರ್ ಜನರಲ್ ಕಚೇರಿಯಿಂದ ಹೊರಡಿಸಲಾಗಿರುವ ಹೇಳಿಕೆಯೊಂದು ತಿಳಿಸಿದೆ.

ಆದರೆ, ದಾಳಿಯಲ್ಲಿ 55 ವರ್ಷದ ಹಿದಿಮ ಗಾಯಗೊಂಡಿದ್ದಾರೆ ಎಂಬ ವರದಿಗಳನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ಅವನ ತಲೆಗೆ 45 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ. ಕಾರ್ಯಾಚರಣೆಯ ವೇಳೆ ಕೆಲವು ಸೈನಿಕರೂ ಗಾಯಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ, ಎಲ್ಲರೂ ಸುರಕ್ಷಿತರಾಗಿದ್ದಾರೆ.

share
Next Story
X