Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಳಚಿದ ಸಮಾಜವಾದದ ಕೊಂಡಿ ಶರದ್ ಯಾದವ್

ಕಳಚಿದ ಸಮಾಜವಾದದ ಕೊಂಡಿ ಶರದ್ ಯಾದವ್

ಆರ್. ಕುಮಾರ್ಆರ್. ಕುಮಾರ್14 Jan 2023 12:01 AM IST
share
ಕಳಚಿದ ಸಮಾಜವಾದದ ಕೊಂಡಿ ಶರದ್ ಯಾದವ್

ಸಮಾಜವಾದದ ಮತ್ತೊಂದು ಕೊಂಡಿ ಕಳಚಿದೆ. ಕೇಂದ್ರದ ಮಾಜಿ ಸಚಿವ, ಆರ್‌ಜೆಡಿ ಹಿರಿಯ ನಾಯಕ ಶರದ್ ಯಾದವ್ ನಿಧನರಾಗಿದ್ದಾರೆ. ನಾಲ್ಕು ದಶಕಗಳ ಅವರ ರಾಜಕೀಯ ಅಂತ್ಯ ಕಂಡಿದೆ.

ಕೃಷಿಕ ಕುಟುಂಬದ ಹಿನ್ನೆಲೆ. ವಿದ್ಯಾರ್ಥಿ ಬದುಕಿನಲ್ಲಿಯೇ ರಾಜಕೀಯದೆಡೆಗೆ ಒಲವು. ಪೂರಕವಾಗಿ ಸಮಾಜವಾದಿ ಚಿಂತಕ ರಾಮಮನೋಹರ ಲೋಹಿಯಾ ಅವರ ಪ್ರಭಾವ. ಶರದ್ ಯಾದವ್ ಒಬ್ಬನಾಯಕರಾಗಿ ರೂಪುಗೊಂಡಿದ್ದು ಹೋರಾಟದ ದಾರಿಯಲ್ಲಿ.

1947ರಲ್ಲಿ ಮಧ್ಯಪ್ರದೇಶದ ಹೋಶಂಗಾಬಾದ್‌ನ ಹಳ್ಳಿಯಲ್ಲಿ ಜನಿಸಿದ ಶರದ್ ಯಾದವ್, 1971ರಲ್ಲಿ ಇಂಜಿನಿಯರಿಂಗ್ ಅಧ್ಯಯನ ಪೂರ್ಣಗೊಳಿಸಿದರು. ಸಕ್ರಿಯ ಯುವ ನಾಯಕರಾಗಿ ಅವರು ಅನೇಕ ಚಳವಳಿಗಳಲ್ಲಿ ಭಾಗವಹಿಸಿದರು. ಸಕ್ರಿಯ ರಾಜಕಾರಣಕ್ಕೆ ಅವರ ಪ್ರವೇಶವಾದದ್ದು 1974ರಲ್ಲಿ. ಮೊದಲು ಮಧ್ಯಪ್ರದೇಶದ ಜಬಲ್‌ಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಅದು ಜೆಪಿ ಚಳವಳಿಯ ಸಮಯ ಮತ್ತು ಜೆಪಿ ಅವರು ಹಲ್ದಾರ್ ಕಿಸಾನ್ ಆಗಿ ಆಯ್ಕೆ ಮಾಡಿದ ಮೊದಲ ಅಭ್ಯರ್ಥಿಯಾಗಿದ್ದರು.

1979ರಲ್ಲಿ ಜನತಾ ದಳ ಇಬ್ಭಾಗವಾದಾಗ ಚರಣ್ ಸಿಂಗ್ ಬಣದ ಜತೆಗೆ ಗುರುತಿಸಿಕೊಂಡರು. 1981ರಲ್ಲಿ ಅಮೇಠಿ ಉಪಚುನಾವಣೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ವಿರುದ್ಧ ಸೋಲು ಕಂಡರು. 1989ರಲ್ಲಿ ವಿ.ಪಿ.ಸಿಂಗ್ ನೇತೃತ್ವದಲ್ಲಿ ಕೇಂದ್ರದಲ್ಲಿ ರಚನೆಯಾದ ಮೊದಲ ಮೈತ್ರಿ ಸರಕಾರದ ಭಾಗವಾಗಿದ್ದರು.

ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರಕಾರದಲ್ಲಿ 1999ರಿಂದ 2004ರವರೆಗೆ ವಿವಿಧ ಖಾತೆಗಳನ್ನು ನಿರ್ವಹಿಸಿದ್ದ ಶರದ್, 2003ರಲ್ಲಿ ನಿತೀಶ್ ಕುಮಾರ್ ಅವರನ್ನು ಒಳಗೊಂಡಿರುವ ಜನತಾ ದಳ ಯುನೈಟೆಡ್ (ಜೆಡಿಯು) ನ ಅಧ್ಯಕ್ಷರಾದರು. 2003 ರಿಂದ 2016ರವರೆಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ.

2004ರ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ನಿತೀಶ್ ಕುಮಾರ್ ಅವರಿಗೆ ರಾಜ್ಯಸಭಾ ಸ್ಥಾನ ಪಡೆಯಲು ನೆರವಾದರು. 2009ರಲ್ಲಿ, ಶರದ್ ಯಾದವ್ ಮತ್ತೆ ಮಾದೇಪುರದಿಂದ ಲೋಕಸಭೆಗೆ ಆಯ್ಕೆಯಾದರು. ಲೋಕಸಭೆಗೆ ಏಳು ಬಾರಿ ಹಾಗೂ ರಾಜ್ಯಸಭೆಗೆ ಮೂರು ಬಾರಿ ಜೆಡಿಯು ಮೂಲಕ ಆಯ್ಕೆಯಾಗಿದ್ದರು. ಮಧ್ಯ ಪ್ರದೇಶ (ಜಬಲ್ಪುರ್), ಬಿಹಾರ (ಮಾದೇಪುರ) ಹಾಗೂ ಉತ್ತರ ಪ್ರದೇಶ (ಬದಾಂಯು) ಹೀಗೆ ಮೂರು ರಾಜ್ಯಗಳಿಂದ ಸ್ಪರ್ಧಿಸಿದ್ದ ಹೆಚ್ಚುಗಾರಿಕೆ ಅವರದು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಯು ಸೋಲಿನ ನಂತರ, ನಿತೀಶ್ ಕುಮಾರ್ ಅವರೊಂದಿಗಿನ ಯಾದವ್ ಅವರ ಸಂಬಂಧ ಹದಗೆಟ್ಟಿತು. ನಿತೀಶ್ ಕುಮಾರ್ ಅವರು ಮಹಾಮೈತ್ರಿಕೂಟದ ಜೊತೆಗೆ ಮೈತ್ರಿ ಮುರಿದು ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ಪಕ್ಷವನ್ನು ತ್ಯಜಿಸಿದರು.

2018ರಿಂದ ರಾಜಕೀಯದಲ್ಲಿ ಅವರ ಮತ್ತೊಂದು ಇನಿಂಗ್ಸ್ ಶುರುವಾಯಿತು. ತಮ್ಮ ಸ್ವಂತ ಪಕ್ಷವಾದ ಲೋಕತಾಂತ್ರಿಕ ಜನತಾ ದಳವನ್ನು ಪ್ರಾರಂಭಿಸಿದರು, ಆದರೆ ಎರಡು ವರ್ಷಗಳ ನಂತರ ಅಂದರೆ 2020ರ ಮಾರ್ಚ್‌ನಲ್ಲಿ ಅದನ್ನು ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳದೊಂದಿಗೆ ವಿಲೀನಗೊಳಿಸಿದರು. ವಿರೋಧ ಪಕ್ಷಗಳ ಒಕ್ಕೂಟದ ಮೊದಲ ಹೆಜ್ಜೆ ಎಂದು ಆ ಬೆಳವಣಿಗೆಯನ್ನು ಅವರು ಬಣ್ಣಿಸಿದ್ದರು. ದೇಶದ ರಾಜಕಾರಣದಲ್ಲಿ ಸಮಾಜವಾದಿ ಹಿನ್ನೆಲೆಯ ನಾಯಕರೆಲ್ಲ ಮರೆಯಾಗುತ್ತಿದ್ದಾರೆ. ಆ ಸಾಲಿನ ಮತ್ತೊಬ್ಬ ಹಿರಿಯ ನಾಯಕ ಈಗ ಇನ್ನಿಲ್ಲ.

share
ಆರ್. ಕುಮಾರ್
ಆರ್. ಕುಮಾರ್
Next Story
X