Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಬೀದಿ ರಂಪಾಟ ಟ್ರೇಲರ್ ಅಷ್ಟೇ,...

ಬಿಜೆಪಿ ಬೀದಿ ರಂಪಾಟ ಟ್ರೇಲರ್ ಅಷ್ಟೇ, ಪಿಚ್ಚರ್ ಅಭಿ ಬಾಕಿ ಹೈ..: ಬಿ.ಕೆ.ಹರಿಪ್ರಸಾದ್ ಲೇವಡಿ

15 Jan 2023 10:05 PM IST
share
ಬಿಜೆಪಿ ಬೀದಿ ರಂಪಾಟ ಟ್ರೇಲರ್ ಅಷ್ಟೇ, ಪಿಚ್ಚರ್ ಅಭಿ ಬಾಕಿ ಹೈ..: ಬಿ.ಕೆ.ಹರಿಪ್ರಸಾದ್ ಲೇವಡಿ

ಬೆಂಗಳೂರು, ಜ. 15: ‘ಸ್ವಯಂ ಘೋಷಿತ ಶಿಸ್ತಿನ ಪಕ್ಷದ ಬೀದಿ ರಂಪಾಟ ರಾಜ್ಯದ ಜನರಿಗೆ ಮನರಂಜನೆಯ ‘ಸಂತೋಷ’ ಕೂಟ ಏರ್ಪಡಿಸಿದೆ. ಸ್ವಪಕ್ಷದ ನಾಯಕರಿಗೆ ಬಿರುದು ಬಾವಲಿಗಳ ಸುರಿಮಳೆ ಆಗುತ್ತಿದೆ. ಇದೊಂದು ಟ್ರೇಲರ್ ಅಷ್ಟೇ, ಬತ್ತಳಿಕೆಯ ಬಾಣಗಳು ಮತ್ತಷ್ಟು ‘ಸಂತೋಷ’ ಪಡಿಸುತ್ತದೆ ಕಾದು ನೋಡಿ’ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸರ್ಕಸ್‍ನಲ್ಲಿ ಪ್ರಾಣಿಗಳನ್ನ ತರಬೇತಿ ನೀಡಿ ಮೂಗುದಾರ ಹಾಕಿ ಮನರಂಜನೆ ಮಾಡಬಹುದು, ಅಪ್ಪಿತಪ್ಪಿ ಬಿಟ್ರೆ ಎಲ್ಲರನ್ನೂ ತಿಂದು ಹಾಕುತ್ತದೆ. ಬಿಜೆಪಿಯಲ್ಲಿ ಈಗಾಗುತ್ತಿರುವುದು ಅದೇ. ಕೊಲೆಗಡುಕತನ, ಪಿಂಪ್ ದಂಧೆ, ಹಫ್ತಾ ವಸೂಲಿ ತನ್ನವರನ್ನೂ ಬಿಡದೆ ತಿನ್ನುತ್ತಿದೆ. ಮೂಗುದಾರ ತಪ್ಪಿಯಾಗಿದೆ, ಹತ್ತೋಟಿಯಲ್ಲಿಡಲು ಸಾಧ್ಯವೇ ಇಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಬಿಜೆಪಿಯಲ್ಲಿ ಮೇಲೆಲ್ಲಾ ತಳಕು-ಬಳಕು-ಕೊಳಕು ನಾರುತ್ತಿದೆ. ಕಾಂಗ್ರೆಸ್ ತಟ್ಟೆಯಲ್ಲಿ ನೊಣ ಹುಡುಕದೇ, ನಿಮ್ಮಲ್ಲಿ ಹೆಗ್ಗಣ ಬಿದ್ದು ವಿಲ ವಿಲ ಒದ್ದಾಡುತ್ತಿದೆ ಒಮ್ಮೆ ಕಣ್ಣಾಡಿಸಿ. ಸರಕಾರ ಮ್ಯಾನೇಜ್ ಮಾಡುವ ಸಿಎಂ, ಪಕ್ಷದ ಮೇಲೆ ಹಿಡಿತವಿಲ್ಲದ ಕಾಮಿಡಿಯನ್ ಅಧ್ಯಕ್ಷರಾಗಿರುವಾಗ ಹಾದಿ ಬೀದಿಯಲ್ಲಿ ಹೊಡೆದಾಡುವಂತಾಗಿದೆ’ ಎಂದು ಅವರು ಟೀಕಿಸಿದ್ದಾರೆ.

‘ಸಿಎಂ ಆಗಲು ಎರಡುವರೆ ಸಾವಿರ ಕೋಟಿ ರೂ.ಹಣದ ಬೇಡಿಕೆ, ಮಂತ್ರಿಯಾಗಲು ಪಿಂಪ್ ಕೆಲಸ, ಸಿಡಿ ಬಿಡುಗಡೆಯ ಬೆದರಿಕೆ. ಮಾಜಿ ಸಿಎಂ ಮಗನ ದೃಷ್ಠವತಾರಗಳು. ಈ ಆರೋಪಗಳು ಕೇಂದ್ರದ ಮಾಜಿ ಮಂತ್ರಿ ಯತ್ನಾಳ್ ಸ್ವಪಕ್ಷದವರ ಮೇಲೆ ಎಗರಿ ಬಿದ್ದ ಪರಿ. ಅಕ್ರಮ ಹಣ ದಂಧೆಗಳ ಬಗ್ಗೆ ಸಿಬಿಐ, ಇಡಿ, ಐಟಿ ಎಲ್ಲವೂ ದಿಲ್ಲಿಯ ಚಳಿಯಲ್ಲಿ ಬೆಚ್ಚಗೆ ಕಾವು ಪಡೆಯುತ್ತಿರಬೇಕು’ ಎಂದು ಹರಿಪ್ರಸಾದ್ ಟೀಕಿಸಿದ್ದಾರೆ.

‘ಬಿಜೆಪಿಯಲ್ಲಿ ಡ್ರೈವರ್ ಗಳನ್ನು ಕೊಲೆ ಮಾಡುವುದು ರೂಢಿಯಾಗುತ್ತಿದೆ. ಸಚಿವ ನಿರಾಣಿಯವರ ಮಾತಿನ ಮರ್ಮವೇನು? ಯತ್ನಾಳ್ ಅವರ ಡ್ರೈವರ್ ಕುಮಾರ್ ಕೊಲೆಯಾದದ್ದು ಹೇಗೆ? ಯಾವಾಗಾ? ಮುಚ್ಚಿಟ್ಟಿದ್ಯಾರು?, ಇದು ಮಂಗಳೂರಿನ ಪ್ರವೀಣ್ ನೆಟ್ಟಾರು ಕೊಲೆ ಮಾದರಿಯಂತಿದೆ. ಮಂಪರು ಪರೀಕ್ಷೆ ನಡೆದರೆ ಮಾತ್ರ ಸತ್ಯ ಬಹಿರಂಗವಾಗಲು ಸಾಧ್ಯ’ ಎಂದು ಅವರು ಆಗ್ರಹಿಸಿದ್ದಾರೆ.

‘ಶಾಸಕ ಯೋಗೇಶ್ವರ್ ಆಡಿಯೋದಲ್ಲಿ ವಿಶೇಷವೇನಿಲ್ಲ. ಕೊಲೆ ಪ್ರಕರಣದಲ್ಲಿ ನ್ಯಾಯಾಲಯವೇ ಛೀಮಾರಿ ಹಾಕಿ ಗಡಿ ಪಾರದ ಕೇಂದ್ರ ಗೃಹ ಸಚಿವರು ರೌಡಿಯಲ್ಲದೆ ಮತ್ತೇನು? ಅಧಿಕಾರಕ್ಕೇರಲು ಸಾಧ್ಯವಿಲ್ಲ ಎಂದು ಬಿಜೆಪಿ ಶಾಸಕರಿಗೆ ಮನದಟ್ಟಾಗಿದೆ. ಹೀಗಾಗಿ ಆಪರೇಷನ್ ಕಮಲಾಸೂರರು ರಾಜ್ಯಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕೆ ಜನ ಅವಕಾಶ ನೀಡುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

‘ಬಿಜೆಪಿಗೆ ಬಿಜೆಪಿಯೇ ಶತೃವಾಗಿದೆ. ಜನಾದೇಶ ಈಗಾಗಲೇ ಸ್ಪಷ್ಟವಾಗಿದೆ. ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿರುವಂತೆ ಬಿಜೆಪಿ ನಾಯಕರು ಟ್ರೇಲರ್‍ಗಳು ಬಿಡುಗಡೆ ಮಾಡುತ್ತಿದ್ದಾರೆ. ಕಾವು ಹೆಚ್ಚಾದಂತೆ ಸಿನಿಮಾ, ಸಿಡಿಗಳು ಬಿಡುಗಡೆ ಆಗಬಹುದು. ಪಿಚ್ಚರ್ ಅಭಿ ಬಾಕಿ ಹೈ..!’ ಎಂದು ಹರಿಪ್ರಸಾದ್ ಟೀಕಿಸಿದ್ದಾರೆ.

ಸ್ವಯಂ ಘೋಷಿತ ಶಿಸ್ತಿನ ಪಕ್ಷದ ಬೀದಿ ರಂಪಾಟ ರಾಜ್ಯದ ಜನರಿಗೆ ಮನರಂಜನೆಯ "ಸಂತೋಷ"ಕೂಟ ಏರ್ಪಡಿಸಿದೆ.

ಸ್ವ ಪಕ್ಷದ ನಾಯಕರಿಗೆ ಬಿರುದು ಬಾವಲಿಗಳ ಸುರಿಮಳೆ ಆಗುತ್ತಿದೆ.ಇದೊಂದು ಟ್ರೇಲರ್ ಅಷ್ಟೇ, ಬತ್ತಳಿಕೆಯ ಬಾಣಗಳು ಮತ್ತಷ್ಟು"ಸಂತೋಷ" ಪಡಿಸುತ್ತದೆ ಕಾದು ನೋಡಿ.
1/7
BJPv/sBJP

— Hariprasad.B.K. (@HariprasadBK2) January 15, 2023
share
Next Story
X