Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಾರಾಯಣಪುರ ಎಡದಂಡೆ ಕಾಲುವೆ: ಆರ್ಥಿಕ...

ನಾರಾಯಣಪುರ ಎಡದಂಡೆ ಕಾಲುವೆ: ಆರ್ಥಿಕ ಇಲಾಖೆಯ ಗಮನಕ್ಕೆ ತಾರದೆ ಕಾಮಗಾರಿ ಗುತ್ತಿಗೆ!

ಜಿ.ಮಹಾಂತೇಶ್ಜಿ.ಮಹಾಂತೇಶ್18 Jan 2023 8:43 AM IST
share
ನಾರಾಯಣಪುರ ಎಡದಂಡೆ ಕಾಲುವೆ: ಆರ್ಥಿಕ ಇಲಾಖೆಯ ಗಮನಕ್ಕೆ ತಾರದೆ ಕಾಮಗಾರಿ ಗುತ್ತಿಗೆ!

ಬೆಂಗಳೂರು: ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ, ವಿಸ್ತರಣೆ, ನವೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೂಲ ಯೋಜನಾ ಮೊತ್ತವಾದ 3,060 ಕೋಟಿ ರೂ. ನಿಂದ 4,233.98 ಕೋಟಿ ರೂ. ಪರಿಷ್ಕರಣೆಗೆ ಆಡಳಿತಾತ್ಮಕ ಅನುಮೋದನೆ ಪಡೆದ ನಂತರವೂ 465.02 ಕೋಟಿ ರೂ. ಮೊತ್ತದ ಹೆಚ್ಚಳ ಕಾಮಗಾರಿ ಗುತ್ತಿಗೆ ನೀಡಿರುವುದು ಆರ್ಥಿಕ ಇಲಾಖೆ ಗಮನಕ್ಕೇ ಬಂದಿಲ್ಲ ಎಂಬುದು ಆರ್‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ.

ಈ ಕುರಿತು ‘the-file.in’ 500ಕ್ಕೂ ಹೆಚ್ಚು ಪುಟಗಳನ್ನೊಳಗೊಂಡಿರುವ ಸಮಗ್ರ ಕಡತವನ್ನು ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

ಎನ್‌ಆರ್‌ಬಿಸಿ ಎಡದಂಡೆ ಕಾಲುವೆ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರದ ಅನುದಾನ ಹಂಚಿಕೆಯ ಅನುಪಾತದಲ್ಲಿನ ಇಳಿಕೆಯಿಂದಾಗಿ ಕಾಮಗಾರಿ ಮೊತ್ತ ಹೆಚ್ಚಳವಾಗಿದ್ದರೂ ಹೆಚ್ಚಳವಾಗಿರುವ ಮೊತ್ತಕ್ಕೆ ಅನುಮೋದನೆ ಪಡೆಯುವ ಮುನ್ನ ಆರ್ಥಿಕ ಇಲಾಖೆಗೆ ಕಡತ ಸಲ್ಲಿಸಬೇಕಿತ್ತು. ಆದರೆ ಆರ್ಥಿಕ ಇಲಾಖೆಯ ಗಮನಕ್ಕೆ ತಾರದೆಯೇ ಗುತ್ತಿಗೆ ನೀಡಿರುವುದು ಅಕ್ರಮಗಳಿಗೆ ದಾರಿಮಾಡಿಕೊಟ್ಟಂತಾಗಿದೆ.

ಕೃಷ್ಣಭಾಗ್ಯ ಜಲನಿಗಮ ಮತ್ತು ಜಲಸಂಪನ್ಮೂಲ ಇಲಾಖೆಯು ನಿಯಮಾವಳಿಗಳನ್ನು ಸ್ಪಷ್ಟ ವಾಗಿ ಉಲ್ಲಂಘಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಅವರು ಟಿಪ್ಪಣಿಯಲ್ಲಿ ಅಭಿಪ್ರಾಯ ದಾಖಲಿಸಿದ್ದಾರೆ.

ಏಕ್‌ರೂಪ್ ಕೌರ್ ನೀಡಿದ್ದ ಅಭಿಪ್ರಾ ಯವೇನು?

ಕರ್ನಾಟಕ ಸರಕಾರ(ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿಯ 15(iii)ನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಈ ನಿಯಮಗಳಂತೆ ಮೂಲ ಅಂದಾಜು 10.00 ಕೋಟಿ ರೂ. ಮೀರಿದಲ್ಲಿ ಮತ್ತು ಪರಿಷ್ಕೃತ ಅಂದಾಜುಗಳು ಮೂಲ ಅಂದಾಜುಗಳಿಗಿಂತ ಶೇ.25ರಷ್ಟು ಅಥವಾ 10.00 ಕೋಟಿ ರೂ.ಗಳಷ್ಟು ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟನ್ನು ಮೀರಿದರೆ ಅದನ್ನು ಮತ್ತೆ ಸಚಿವ ಸಂಪುಟದ ಮುಂದೆ ಮಂಡಿಸಿ ಆಡಳಿತಾತ್ಮಕ ಅನುಮೋದನೆ ಪಡೆಯಬೇಕು. ಆದರೆ, ಆಡಳಿತ ಇಲಾಖೆಯು ಅರ್ಥಿಕ ಇಲಾಖೆ ಗಮನಕ್ಕೆ ತಂದಿಲ್ಲ ಮತ್ತು ಸಚಿವ ಸಂಪುಟದ ಒಪ್ಪಿಗೆಯಿಲ್ಲದೆಯೇ ಕಾಮಗಾರಿ ಕೈಗೆತ್ತಿಕೊಂಡಿದೆ ಎಂದು ಟಿಪ್ಪಣಿ ಹಾಕಿದ್ದಾರೆ.

ನಾರಾಯಣಪುರ ಎಡದಂಡೆ ಕಾಲುವೆಯ ಇಆರ್‌ಎಂ ಕಾಮಗಾರಿಯ ಅಂದಾಜು ಮೊತ್ತದಲ್ಲಿ 465.02 ಕೋಟಿ ರೂ. ಹೆಚ್ಚು ವರಿಯಾಗಿದ್ದು ಮೂಲ ಅಂದಾಜು ಪಟ್ಟಿ ತಯಾರಿಕೆಯಲ್ಲಿ ಯಾವುದೇ ಲೋಪದೋಷ ವಾಗಿರುವುದಿಲ್ಲ ಎಂದು ಜಲಸಂಪನ್ಮೂಲ ಇಲಾಖೆಯು ಸಮಜಾಯಿಷಿ ನೀಡಿತ್ತು.

ಸರಕಾರದ ಅನುಮೋದನೆ ಪಡೆಯದೇ ಮತ್ತು ನಿಯಮ ಉಲ್ಲಂಘಿಸಿ 465 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಪಟ್ಟಿಯನ್ನು ಕೃಷ್ಣಭಾಗ್ಯ ಜಲನಿಗಮ ಒದಗಿಸಿಲ್ಲ. ಪಟ್ಟಿ ಒದಗಿಸಬೇಕು ಎಂದು ಆರ್ಥಿಕ ಇಲಾಖೆಯ ನಿರ್ದೇಶನವನ್ನೂ ನಿಗಮವು ಉಲ್ಲಂಘಿಸಿರುವುದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X