Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020ರ ಮಾರ್ಚ್ ಬಳಿಕ ಇದೇ ಮೊದಲು:...

2020ರ ಮಾರ್ಚ್ ಬಳಿಕ ಇದೇ ಮೊದಲು: ದಿನಕ್ಕೆ 100ಕ್ಕಿಂತ ಕೆಳಗಿಳಿದ ಕೋವಿಡ್ ಪ್ರಕರಣ

18 Jan 2023 8:50 AM IST
share
2020ರ ಮಾರ್ಚ್ ಬಳಿಕ ಇದೇ ಮೊದಲು: ದಿನಕ್ಕೆ 100ಕ್ಕಿಂತ ಕೆಳಗಿಳಿದ ಕೋವಿಡ್ ಪ್ರಕರಣ

ಹೊಸದಿಲ್ಲಿ: ದೇಶದಲ್ಲಿ ಮೊದಲ ಬಾರಿಗೆ ಕೋವಿಡ್-19 ಸೋಂಕು ಪ್ರಕರಣ ಹೆಚ್ಚಳ ಆರಂಭವಾದ 2020ರ ಮಾರ್ಚ್ ಬಳಿಕ ಇದೇ ಮೊದಲ ಬಾರಿಗೆ ದೈನಂದಿನ ಕೋವಿಡ್-19 ಸೋಂಕು ಪ್ರಕರಣಗಳ ಸಂಖ್ಯೆ 100ಕ್ಕಿಂತ ಕೆಳಗಿಳಿದಿದೆ. ಸೋಮವಾರ ದೇಶಾದ್ಯಂತ ದಾಖಲಾದ ಪ್ರಕರಣಗಳ ಸಂಖ್ಯೆ 100ಕ್ಕಿಂತ ಕಡಿಮೆ. ಸತತವಾಗಿ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಜೊತೆಗೆ ನಾಲ್ಕು ದಿನಗಳಲ್ಲಿ ಯಾವುದೇ ಕೋವಿಡ್ ಸಂಬಂಧಿತ ಸಾವು ಸಂಭವಿಸಿಲ್ಲ. ಸಾವಿನ ಸಂಖ್ಯೆ ಕೂಡಾ ಸತತ ನಾಲ್ಕು ದಿನಗಳಲ್ಲಿ ಶೂನ್ಯ ದಾಖಲಾಗಿರುವುದು 2020ರ ಮಾರ್ಚ್ ಬಳಿಕ ಇದೇ ಮೊದಲು.

ದೇಶದಲ್ಲಿ ಸೋಮವಾರ 83 ಹೊಸ ಪ್ರಕರಣಗಳು ವರದಿಯಾಗಿದ್ದು, ಇದು ಭಾನುವಾರ ದಾಖಲಾದ 114ಕ್ಕಿಂತ ಕಡಿಮೆ. ಇದಕ್ಕೂ ಮುನ್ನ 2020ರ ಮಾರ್ಚ್ 27ರಂದು 100ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಎಂದೂ ಹೊಸ ಪ್ರಕರಣಗಳು ಎರಡಂಕಿಗೆ ಇಳಿದ ನಿದರ್ಶನ ಇಲ್ಲ. ಚೀನಾದಲ್ಲಿ ಸತತವಾಗಿ ಪ್ರಕರಣಗಳು ಹೆಚ್ಚುತ್ತಿದ್ದು, ಭಾರತದಲ್ಲೂ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಭೀತಿಯ ನಡುವೆಯೇ ಪ್ರಕರಣಗಳು ಇಳಿಮುಖವಾಗುತ್ತಿವೆ. ಜನವರಿ 9 ರಿಂದ 15ರ ಅವಧಿಯಲ್ಲಿ ದೇಶದಲ್ಲಿ ಒಟ್ಟು 1062 ಪ್ರಕರಣಗಳು ದಾಖಲಾಗಿದ್ದು, ಇದು 2020ರ ಮಾರ್ಚ್ 23-29ರ ವಾರವನ್ನು ಹೊರತುಪಡಿಸಿದರೆ ಕನಿಷ್ಠ ಸಾಪ್ತಾಹಿಕ ಸಂಖ್ಯೆಯಾಗಿದೆ.

ಕಳೆದ ವಾರ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಕೂಡಾ 2020ರ ಮಾರ್ಚ್ ಬಳಿಕ ಅತ್ಯಂತ ಕನಿಷ್ಠ. ಇಡೀ ವಾರದಲ್ಲಿ ಕೇವಲ ನಾಲ್ಕು ಮಂದಿ ಕೋವಿಡ್ ಸಂಬಂಧಿ ಸಾವು ವರದಿಯಾಗಿದೆ. ಸೋಮವಾರದವರೆಗೆ ಸತತ ನಾಲ್ಕು ದಿನ ದೇಶದಲ್ಲಿ ಯಾವುದೇ ಕೋವಿಡ್ ಸಂಬಂಧಿ ಸಾವು ಸಂಭವಿಸಿಲ್ಲ. 2020ರ ಮಾರ್ಚ್ 25ರ ಬಳಿಕ ಶೂನ್ಯ ಸಾವು ವರದಿಯಾಗಿರುವುದು ಇದೇ ಮೊದಲು.

share
Next Story
X