Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ದರೋಡೆ ತಪ್ಪಿಸಿದ ಇಬ್ಬರು ಮಹಿಳಾ...

ಬ್ಯಾಂಕ್ ದರೋಡೆ ತಪ್ಪಿಸಿದ ಇಬ್ಬರು ಮಹಿಳಾ ಪೊಲೀಸರು; ವಿಡಿಯೋ ವೈರಲ್

19 Jan 2023 4:09 PM IST
share
ಬ್ಯಾಂಕ್ ದರೋಡೆ ತಪ್ಪಿಸಿದ ಇಬ್ಬರು ಮಹಿಳಾ ಪೊಲೀಸರು; ವಿಡಿಯೋ ವೈರಲ್

ಪಾಟ್ನಾ: ಬಿಹಾರದ ಇಬ್ಬರು ಮಹಿಳಾ ಪೇದೆಗಳು ತಮ್ಮ ಸಮಯ ಪ್ರಜ್ಞೆಯಿಂದ ಸಂಭವನೀಯ ಬ್ಯಾಂಕ್ ದರೋಡೆಯನ್ನು ತಪ್ಪಿಸಿದ್ದು, ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಬುಧವಾರ ಜೂಹಿ ಕುಮಾರಿ ಹಾಗೂ ಶಾಂತಿ ಕುಮಾರಿ ಎಂಬ ಇಬ್ಬರು ಮಹಿಳಾ ಪೇದೆಗಳು ಬಿಹಾರದ ಹಾಜಿಪುರದಲ್ಲಿನ ಸರ್ದಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸೆಂದೂರಿ ಚೌಕದಲ್ಲಿರುವ ಉತ್ತರ ಬಿಹಾರ ಗ್ರಾಮೀಣ ಬ್ಯಾಂಕ್‌ನ ಪ್ರವೇಶ ದ್ವಾರದಲ್ಲಿ ಭದ್ರತಾ ಕಾರ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಮೂವರು ಸಶಸ್ತ್ರಧಾರಿ ದರೋಡೆಕೋರರು ಬ್ಯಾಂಕ್ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಆಗ ಆ ಮಹಿಳಾ ಪೊಲೀಸ್ ಪೇದೆಗಳು ಅವರ ಗುರುತಿನ ದಾಖಲೆಗಳನ್ನು ಕೇಳಿದ್ದಾರೆ. ಕೂಡಲೇ ಈ ಪೈಕಿ ಒಬ್ಬಾತ ಪಿಸ್ತೂಲ್ ಹೊರತೆಗೆದು ಅವರಿಗೆ ಗುರಿಯಿಟ್ಟಿದ್ದಾನೆ. ಕೂಡಲೇ ಸಮಯ ಪ್ರಜ್ಞೆ ಮೆರೆದ ಮಹಿಳಾ ಪೊಲೀಸ್ ಪೇದೆಗಳು ಕ್ಷಣಾರ್ಧದಲ್ಲಿ ಆ ಮೂವರು ಬ್ಯಾಂಕ್ ದರೋಡೆಕೋರರು ಹಿಮ್ಮೆಟ್ಟುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ದೃಶ್ಯವು ಬ್ಯಾಂಕ್‌ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಪೇದೆ ಜೂಹಿ, "ನಾನು ಆ ಮೂವರನ್ನೂ ನಿಮಗೇನಾದರೂ ಬ್ಯಾಂಕ್‌ನಲ್ಲಿ ಕೆಲಸವಿದೆಯಾ ಎಂದು ಪ್ರಶ್ನಿಸಿದಾಗ, ಅವರು 'ಹೌದು' ಎಂದು ಉತ್ತರಿಸಿದರು. ಪಾಸ್‌ಬುಕ್ ತೋರಿಸುವಂತೆ ಕೇಳಿದಾಗ ಪಿಸ್ತೂಲ್ ಹೊರತೆಗೆದರು" ಎಂದು ತಿಳಿಸಿದ್ದಾರೆ.

"ಅವರು ನಮ್ಮ ಬಂದೂಕುಗಳನ್ನು ಕಿತ್ತುಕೊಳ್ಳಲು ಯತ್ನಿಸಿದರಾದರೂ, ನಾವು ಮಾತ್ರ ಏನಾದರೂ ಸರಿಯೇ ಅವರಿಗೆ ಬ್ಯಾಂಕ್ ದರೋಡೆಗಾಗಲಿ ಅಥವಾ ನಮ್ಮ ಆಯುಧವನ್ನು ಕಿತ್ತುಕೊಳ್ಳಲಾಗಲಿ ಅವಕಾಶ ನೀಡಕೂಡದು ಎಂಬ ನಿರ್ಧಾರಕ್ಕೆ ಬಂದಿದ್ದೆವು. ಅವರು ಪರಾರಿಯಾಗುವ ಸಮಯದಲ್ಲಿ ಜೂಹಿ ತನ್ನ ಬಂದೂಕಿನ ಕೀಲಿ ತೆಗೆದು ಅವರ ವಿರುದ್ಧ ಗುಂಡು ಚಲಾಯಿಸಲು ಸಿದ್ಧವಾಗಿದ್ದಳು" ಎಂದು ಮತ್ತೊಬ್ಬ ಪೊಲೀಸ್ ಪೇದೆ ಶಾಂತಿ ತಿಳಿಸಿದ್ದಾರೆ.

ಪೊಲೀಸರೀಗ ಆ ದರೋಡೆಕೋರರಿಗಾಗಿ ಶೋಧ ಕೈಗೊಂಡಿದ್ದು, ಬ್ಯಾಂಕ್ ದರೋಡೆ ಪ್ರಯತ್ನ ಕುರಿತು ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಓಂ ಪ್ರಕಾಶ್, "ಸೆಂದೂರಿಯಲ್ಲಿ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ವ್ಯಕ್ತಿಗಳು ಬ್ಯಾಂಕ್ ದರೋಡೆಗೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಮಹಿಳಾ ಪೊಲೀಸ್ ಪೇದೆಗಳು ಅಸಾಧಾರಣ ಧೈರ್ಯ ಪ್ರದರ್ಶಿಸಿ, ಅವರು ದಿಗಿಲುಗೊಂಡು ಪರಾರಿಯಾಗುವಂತೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಗುಂಡಿನ ದಾಳಿ ಜರುಗಿಲ್ಲ. ಪೇದೆಗಳನ್ನು ಪುರಸ್ಕರಿಸಲಾಗುವುದು" ಎಂದು ತಿಳಿಸಿದ್ದಾರೆ.

Watch: How 2 Women Cops Stopped Bank Robbery In Bihar https://t.co/XxqXdbUyQj pic.twitter.com/GbfRmQIrO6

— NDTV (@ndtv) January 19, 2023
share
Next Story
X