Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬಯಿಗರ ಕನಸುಗಳನ್ನು ನನಸಾಗಿಸಲು...

ಮುಂಬಯಿಗರ ಕನಸುಗಳನ್ನು ನನಸಾಗಿಸಲು ಶಿಂದೆ-ಫಡ್ನವೀಸ್ ಜೋಡಿ ನೆರವಾಗಲಿದೆ:‌ ಮೋದಿ

19 Jan 2023 9:26 PM IST
share
ಮುಂಬಯಿಗರ ಕನಸುಗಳನ್ನು ನನಸಾಗಿಸಲು ಶಿಂದೆ-ಫಡ್ನವೀಸ್ ಜೋಡಿ ನೆರವಾಗಲಿದೆ:‌ ಮೋದಿ

ಮುಂಬೈ,ಜ.19: ಮುಂಬೈ ಅಭಿವೃದ್ಧಿಗೆ ಹಣಕಾಸಿನ ಕೊರತೆಯಿಲ್ಲ ಮತ್ತು ಮುಂಬಯಿಗರ ಕನಸುಗಳನ್ನು ನನಸಾಗಿಸಲು ಮುಖ್ಯಮಂತ್ರಿ ಏಕನಾಥ ಶಿಂದೆ (
Eknath Shinde)ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್(Devendra Fadnavis) ಅವರ ಜೋಡಿಯು ನೆರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಗುರುವಾರ ಇಲ್ಲಿ ಹೇಳಿದರು.

‘ಮುಂಬೈ ಪರಿವರ್ತನೆಗೆ ಸ್ಥಳೀಯ ಆಡಳಿತವು ಬದ್ಧವಾಗಿದೆ. ಹಣಕಾಸನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು ಮತ್ತು ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಅಗತ್ಯವಾಗಿದೆ. ಮುಂಬೈನ ಅಭಿವೃದ್ಧಿಗಾಗಿ ನಾವೆಲ್ಲರೂ ಕೈಜೋಡಿಸೋಣ ’ಎಂದರು.

ವಿಶ್ವವು ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವಾಗ ಭಾರತವು ಸಬ್ಸಿಡಿಗಳನ್ನು ಒದಗಿಸುತ್ತಿದೆ ಎಂದ ಅವರು,ಕಡುಬಡವರಿಗೂ ಉತ್ತಮ ಸೌಲಭ್ಯಗಳನ್ನು ಒದಗಿಸಲು ಡಬಲ್ ಇಂಜಿನ್ ಸರಕಾರವು ಬದ್ಧವಾಗಿದೆ. ಆದ್ದರಿಂದ ರೈಲ್ವೆ ನಿಲ್ದಾಣಗಳನ್ನು ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಅತ್ಯಂತ ಹಳೆಯ ರೈಲುನಿಲ್ದಾಣಗಳಲ್ಲಿ ಒಂದಾಗಿರುವ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ (ಸಿಎಸ್ಎಂಟಿ) ಅನ್ನು ಪುನರ್ ಅಭಿವೃದ್ಧಿಗೊಳಿಸಲಾಗುತ್ತಿದೆ. ನಾವು ಬಹು ಮಾದರಿಯ ಸಂಪರ್ಕಕ್ಕೆ ಒತ್ತು ನೀಡುತ್ತಿದ್ದೇವೆ ಎಂದರು.

ಮುಂಬೈಗೆ ಒಂದು ದಿನದ ಭೇಟಿ ನೀಡಿದ ಸಂದರ್ಭ ಮೋದಿ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ ಎಂಎಂಆರ್ಡಿಎ ಮೈದಾನದಲ್ಲಿ ಎರಡು ನೂತನ ಮುಂಬೈ ಮೆಟ್ರೋ ಮಾರ್ಗಗಳು ಹಾಗೂ ರಸ್ತೆ ಕಾಂಕ್ರೀಟೀಕರಣ,ಒಳಚರಂಡಿ ಸಂಸ್ಕರಣೆ ಸ್ಥಾವರಗಳು ಮತ್ತು ಪಿಎಂ ಸ್ವನಿಧಿ ಸೇರಿದಂತೆ 38,000 ಕೋ.ರೂ.ಗೂ ಅಧಿಕ ವೆಚ್ಚದ ಹಲವಾರು ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸಗಳನ್ನು ನೆರವೇರಿಸಿ ಮಾತನಾಡುತ್ತಿದ್ದರು.

ಧಾರಾವಿ ಪುನರ್ಅಭಿವೃದ್ಧಿಯು ರಾಜ್ಯ ಸರಕಾರದ ಬದ್ಧತೆಯಾಗಿದೆ ಎಂದು ಒತ್ತಿ ಹೇಳಿದ ಅವರು,ಮುಂದಿನ ದಿನಗಳಲ್ಲಿ ಮುಂಬೈ ಹೊಸ ರೂಪವನ್ನು ತಳೆಯಲಿದೆ. ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ವಿದ್ಯುತ್ಚಾಲಿತ ವಾಹನಗಳಿಗೆ ಒತ್ತು ನೀಡಲಾಗುವುದು. ಜಲ ಸಂಸ್ಕರಣೆ ಸ್ಥಾವರಗಳ ಮೂಲಕ ಬೃಹತ್ ಪ್ರಮಾಣದಲ್ಲಿ ನದಿಗಳ ಶುದ್ಧೀಕರಣ ನಡೆಸಲಾಗುತ್ತಿದೆ ಎಂದರು. 2014ರಲ್ಲಿ ಮುಂಬೈ ಮೆಟ್ರೋ ಕೇವಲ 11 ಕಿ.ಮೀ.ದೂರದ ಮಾರ್ಗದಲ್ಲಿ ಸಂಚರಿಸುತ್ತಿತ್ತು,ಆದರೆ ಶಿಂದೆ ಮತ್ತು ಫಡ್ನವೀಸ್ ತಂಡವು ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡಿದೆ ಎಂದು ಪ್ರಧಾನಿ ಹೇಳಿದರು.

ಇಂದು ಚಾಲನೆ ನೀಡಲಾದ ಯೋಜನೆಗಳನ್ನು ಪ್ರಶಂಸಿಸಿದ ಮೋದಿ,ಇದೇ ಮೊದಲ ಬಾರಿಗೆ ಇಡೀ ವಿಶ್ವವು ಭಾರತವನ್ನು ಗಮನಿಸುತ್ತಿದೆ. ವಿಶ್ವಾದ್ಯಂತ ಭಾರತದ ಬಗ್ಗೆ ಸಾಕಷ್ಟು ಸಕಾರಾತ್ಮಕತೆಯಿದೆ. ತನ್ನ ದೂರದೃಷ್ಟಿಯ ಮತ್ತು ಆಧುನಿಕ ನಿಲುವುಗಳೊಂದಿಗೆ ಭಾರತವು ಮುನ್ನಡೆಯುತ್ತಿದೆ. ಇಂದು ನಾವು ಉತ್ತಮ ಸಂಪರ್ಕ ಮತ್ತು ಆರ್ಥಿಕ ಸಮದ್ಧಿಗಾಗಿ ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುತ್ತಿದ್ದೇವೆ ಎಂದು ಹೇಳಿದರು.

ಅಂಧೇರಿಯ ಗುಂಡಾವಳಿ ಮೆಟ್ರೋ ನಿಲ್ದಾಣದಲ್ಲಿ ಮುಂಬೈ ಮೆಟ್ರೋ 2ಎ ಮತ್ತು 7 ಮಾರ್ಗಗಳನ್ನು ಉದ್ಘಾಟಿಸಿದ ಮೋದಿ ಅಲ್ಲಿಂದ ಮೋಗ್ರಾವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಗುಂಡಾವಳಿಗೆ ಮರಳಿದರು.

share
Next Story
X