Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸನದಲ್ಲಿ 'ಪ್ರಜಾಧ್ವನಿ ಯಾತ್ರೆ':...

ಹಾಸನದಲ್ಲಿ 'ಪ್ರಜಾಧ್ವನಿ ಯಾತ್ರೆ': ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ

''ಅಂದು ಜೆಡಿಎಸ್ ಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬಹುದಿತ್ತು...''

21 Jan 2023 7:46 PM IST
share
ಹಾಸನದಲ್ಲಿ ಪ್ರಜಾಧ್ವನಿ ಯಾತ್ರೆ: ಬಿಜೆಪಿ, ಜೆಡಿಎಸ್‌ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ
''ಅಂದು ಜೆಡಿಎಸ್ ಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬಹುದಿತ್ತು...''

ಹಾಸನ: 2023ರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೂರೂ ಪಕ್ಷಗಳಿಂದ ವಿವಿಧ ಯಾತ್ರೆಗಳು ಆರಂಭವಾಗಿದ್ದು, ಶನಿವಾರ ಹಾಸನಕ್ಕೆ ಬಂದ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಪ್ರಜಾಧ್ವನಿ ಯಾತ್ರೆಯನ್ನು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಬರಮಾಡಿಕೊಂಡರು.

ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾನು 40 ವರ್ಷದ ರಾಜಕೀಯದಲ್ಲಿ ಹಾಸನ ಜಿಲ್ಲೆಯ ಜನ ನಾನು ಬಂದಾಗ ಜನರು ತೋರಿದ ಸ್ವಾಗತ , ಪ್ರೀತಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತಂದಿದೆ. ಇಂತಹ ಸ್ವಾಗತ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಹೆಚ್ಚು ಸಿಕ್ಕಿದೆ ಎಂದು ಸಂತೋಷ ವ್ಯಕ್ತಪಡಿಸಿದ ಅವರು, ಜಿಲ್ಲೆಯಲ್ಲಿ 7ಕ್ಕೆ 7 ಸ್ಥಾನವನ್ನೂ ಗೆಲ್ಲಿಸಿ ಬದಲಾವಣೆ ತರಲು ಹೊರಟಿದ್ದೀರಿ ಎಂದರು.

ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್  80 ಸ್ಥಾನ ಗಳಿಸಿತ್ತು. ಜನತಾದಳ 38 ಸ್ಥಾನಗಳಲ್ಲಿ ಜಯಗಳಿಸಿತ್ತು. 104 ಸ್ಥಾನವನ್ನು ಬಿಜೆಪಿ ಜಯಗಳಿಸಿತ್ತು. ಬಿಜೆಪಿ ದೂರ ಇಡುವ ದೃಷ್ಟಿಯಿಂದ ನಮ್ಮ ಸ್ವಾಭಿಮಾನ ಬದಿಗಿಟ್ಟು ಎಲ್ಲಾ ವರ್ಗದ ರಕ್ಷಣೆಗಾಗಿ 5 ವರ್ಷದ ಅಧಿಕಾರವನ್ನು ಜನತಾದಳ ಪಕ್ಷಕ್ಕೆ ನೀಡಿದ್ದೆವು. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಎಲ್ಲರನ್ನೂ ಒಗ್ಗೂಡಿಸಿ ಕರೆದುಕೊಂಡು ಹೋಗಬೇಕಾಗಿತ್ತು. ನಾವೇ ಮುಖ್ಯಮಂತ್ರಿ ಸ್ಥಾನ ತೆಗೆದುಕೊಂಡು ಜೆಡಿಎಸ್ ಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬಹುದಿತ್ತು. ಆದರೆ ನಾವು ಸ್ವಾರ್ಥ ರಾಜಕೀಯ ಮಾಡಲಿಲ್ಲ. ಉಳಿಸಿ ಬೆಳಸಿಕೊಂಡು ಹೋಗುವುದು ಒಬ್ಬ ನಾಯಕನ ಕರ್ತವ್ಯ ಎಂದರು.

ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ. ಕೊವೀಡ್ ಹೆಸರಿನಲ್ಲಿ ಹಣ ಹೊಡೆದರು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ, ಇಂಜಿನಿಯರ್ ಹುದ್ದೆ ಸೇರಿದಂತೆ ಎಲ್ಲಾ ನೇಮಕಾತಿಯಲ್ಲಿ ಲೂಟಿ ಹೊಡೆದರು. ಈ ಸರ್ಕಾರ ಮಾಡಲು ಪರೋಕ್ಷವಾಗಿ ಕಾರಣ ಯಾರು ಎಂಬುದರ ಬಗ್ಗೆ ನಾವು ಯೋಚನೆ ಮಾಡಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಜನರ ನಂಬಿಕೆ ಕಳೆದಕೊಂಡಿದೆ. ಈಗ ಇರುವ ಬೊಮ್ಮಾಯಿ ನೇತೃತ್ವದ ಸರ್ಕಾರ ದಲಿತರು, ಮಹಿಳೆಯರು, ಹಿಂದುಳಿದಿರುವ ಯುವಕರ ವಿರೋಧಿ ಸರ್ಕಾರವಾಗಿದೆ ಎಂದು ಕಿಡಿಕಾರಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2016 ರಲ್ಲಿ 5 ವರ್ಷದಲ್ಲಿ 2022 ರೊಳಗೆ ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿ ರೈತರಿಗೆ ಭ್ರಮೆ ಹುಟ್ಟಿಸಿದರು. ಇದನ್ನು ಹೇಳಿ ರೈತ ವಿರೋಧಿ ಕಾಯ್ದೆ ಜಾರಿಗೆ ತಂದರು. ದೆಹಲಿಯಲ್ಲಿ ಇಡಿ ದೇಶದ ರೈತ ಸಂಘಟನೆ ರೈತರು ಕೇಂದ್ರ ಸರ್ಕಾರದ ವಿರುದ್ಧ ಅನೇಕ ತಿಂಗಳ ಕಾಲ ಹೋರಾಟ ನಡೆಸಿದರು. ರೈತರ ಹೋರಾಟ ಸಹಿಸಲಾಗದೆ ರೈತ ವಿರೋಧಿ ಕಾನೂನನ್ನು ವಾಪಸು ಪಡೆದರು. ಕರ್ನಾಟಕದಲ್ಲಿ ರೈತ ವಿರೋಧಿ ಕಾಯ್ದೆ ಜಾರಿಗೆ ತಂದಿದ್ದಾರೆ. ದೇವರಾಜು ಅರಸು ಜಾರಿಗೆ ತಂದ ಕಾನೂನು ಮಾರ್ಪಾಡು ಉಡುವವನೆ ಭೂಮಿ ಒಡೆಯ ತೆಗೆದು ಉಳ್ಳವನೆ ಭೂಮಿ ಒಡೆಯನ್ನಾಗಿ ಮಾಡಿದ್ದಾರೆ. ಬಿಜೆಪಿ 2018 ರ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ರೈತರು ಪಡೆದ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು.

 ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್, ಮುಖಂಡ ಬಿ.ಕೆ. ಹರಿಪ್ರಸಾದ್, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ, ರೋಹಿತ್, ಸಂಸದ ಜಿ.ಸಿ. ಚಂದ್ರಶೇಖರ್, ಜೆ.ಡಿ. ಶೀಲಂ, ನಲಪಾಡ್, ಹೆಚ್.ಎಂ. ರೇವಣ್ಣ, ಪುಷ್ಪ ಅಮರನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ, ಬಿ. ಶಿವರಾಂ, ಎಂ.ಎ. ಗೋಪಾಲಸ್ವಾಮಿ, ಧರ್ಮಸೇನ್, ಗೋವಿಂದಪ್ಪ, ಹೆಚ್.ಕೆ. ಮಹೇಶ್, ಬನವಾಸೆ ರಂಗಸ್ವಾಮಿ, ಬಿ.ಪಿ. ಮಂಜೇಗೌಡ, ಬಿ.ಕೆ. ರಂಗಸ್ವಾಮಿ, ಡಿ. ಮಲ್ಲೇಶ್, ರಂಜಿತ್ ಗೊರೂರು, ರಘು ಇತರರು ಉಪಸ್ಥಿತರಿದ್ದರು.

#PrajaDhwaniYatra ಯ ಆಧಾರಸ್ತಂಭವೇ ನಮ್ಮ ಜನರ ಬೆಂಬಲ. ಅವರ ಪ್ರೀತಿಯೇ ನಮ್ಮ ಕಾವಲು. ಇಂದು ಚಿಕ್ಕಮಗಳೂರಿಗೆ ನಮ್ಮ ಯಾತ್ರೆ ಕಾಲಿಟ್ಟಾಗ ಇಲ್ಲಿನ ಜನರು ಸ್ವಾಗತಿಸಿದ ಪರಿ ಅದ್ಭುತ.#KarnatakaWantsCongress pic.twitter.com/WggvIWMXHA

— DK Shivakumar (@DKShivakumar) January 21, 2023
share
Next Story
X