Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವಕಪ್ ಹಾಕಿ: ಅರ್ಜೆಂಟೀನಾ ಜತೆ ಜಂಟಿ...

ವಿಶ್ವಕಪ್ ಹಾಕಿ: ಅರ್ಜೆಂಟೀನಾ ಜತೆ ಜಂಟಿ 9ನೇ ಸ್ಥಾನ ಗೆದ್ದ ಭಾರತ

29 Jan 2023 8:06 AM IST
share
ವಿಶ್ವಕಪ್ ಹಾಕಿ: ಅರ್ಜೆಂಟೀನಾ ಜತೆ ಜಂಟಿ 9ನೇ ಸ್ಥಾನ ಗೆದ್ದ ಭಾರತ

ಭುವನೇಶ್ವರ: ಸ್ಥಾನ ನಿರ್ಧರಿಸುವ ಪ್ಲೇಆಫ್ ಪಂದ್ಯದಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಭಾರತ ಪುರುಷರ ಹಾಕಿ ತಂಡ ವಿಶ್ವಕಪ್ ಪಂದ್ಯಾವಳಿಯಲ್ಲಿ ಅರ್ಜೆಂಟೀನಾ ಜತೆ ಜಂಟಿ ಒಂಬತ್ತನೇ ಸ್ಥಾನ ಗಳಿಸಿತು.

ಶನಿವಾರ ಇಲ್ಲಿನ ಬಿಸ್ರಾ ಮುಂಡಾ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ 20 ಸಾವಿರ ಅಭಿಮಾನಿಗಳ ಎದುರು ಭಾರತ ತಂಡ ದಕ್ಷಿಣ ಆಫ್ರಿಕಾವನ್ನು 5-2 ಗೋಲುಗಳಿಂದ ಮಣಿಸಿತು.

ಇದು ವಿಶ್ವಕಪ್ ಪುರುಷರ ಹಾಕಿ ಪಂದ್ಯಾವಳಿಯ ಇತಿಹಾಸದಲ್ಲೇ ಅತಿಥೇಯ ತಂಡದ ಅತ್ಯಂತ ಕಳಪೆ ಸಾಧನೆಯಾಗಿದೆ. 2010ರಲ್ಲಿ ದೆಹಲಿಯಲ್ಲಿ ಎಂಟನೇ ಸ್ಥಾನ ಗಳಿಸಿದ ಕಳಪೆ ದಾಖಲೆಯನ್ನು ಭಾರತ ಮುರಿದಂತಾಗಿದೆ. ಇದಕ್ಕೂ ಮುನ್ನ ಮಲೇಷ್ಯಾ (ಕೌಲಾಲಂಪುರ 2002) ಹಾಗೂ ಅರ್ಜೆಂಟೀನಾ (ಬ್ಯೂನಸ್ ಐರಿಸ್-1978) ಕೂಡಾ ಎಂಟನೇ ಸ್ಥಾನ ಪಡೆದಿದ್ದವು.

ಜಪಾನ್ ವಿರುದ್ಧದ ಪಂದ್ಯದಂತೆ ದಕ್ಷಿಣ ಆಫ್ರಿಕಾ ವಿರುದ್ಧ ಕೂಡಾ ಭಾರತ ತಂಡ ಪ್ರಾಬಲ್ಯ ಮೆರೆಯಿತು. ಆದರೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 49 ಹಾಗೂ 60ನೇ ನಿಮಿಷದಲ್ಲಿ ಸಮ್ಕೆಲೊ ವಿಂಬಿ ಹಾಗೂ ಮುಸ್ತಾಫಾ ಕ್ಯಾಸೀಮ್ ಮೂಲಕ ಸಮಾಧಾನಕರ ಗೋಲುಗಳನ್ನು ಗಳಿಸಿತು.

ಕಳೆದ ಪಂದ್ಯದ ಹೀರೊ ಅಭಿಷೇಕ್ ಈ ಪಂದ್ಯದಲ್ಲೂ ಭಾರತದ ಮೊದಲ ಗೋಲು ದಾಖಲಿಸಿದರು. ಜಪಾನ್ ವಿರುದ್ಧದ ಪಂದ್ಯದಲ್ಲಿ ಎರಡು ಗೋಲು ಗಳಿಸಿದ್ದ ಅಭಿಷೇಕ್ ಈ ಪಂದ್ಯದಲ್ಲೂ ಐದನೇ ನಿಮಿಷದಲ್ಲೇ ತಂಡಕ್ಕೆ ಮುನ್ನಡೆ ಒದಗಿಸಿದರು. ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಡ್ರ್ಯಾಗ್ ಫ್ಲಿಕ್ಸ್‌ನಿಂದ 12ನೇ ನಿಮಿಷದಲ್ಲಿ ಭಾರತದ ಮುನ್ನಡೆ ಹಿಗ್ಗಿತು. 45ನೇ ನಿಮಿಷದಲ್ಲಿ ಶಂಶೇರ್ ಸಿಂಗ್ ಅವರ ಗೋಲಿನ ಮೂಲಕ ಭಾರತ 3-0 ಮುನ್ನಡೆ ಸಾಧಿಸಿತು. ಆಕಾಶ್‌ದೀಪ್ ಸಿಂಗ್ 49ನೇ ನಿಮಿಷಲ್ಲಿ 4-0 ಮುನ್ನಡೆಗೆ ಕಾರಣರಾದರೆ ತಕ್ಷಣ ಎದುರಾಳಿಗಳು ಕೂಡಾ ಒಂದು ಗೋಲು ದಾಖಲಿಸಿ ಹಿನ್ನಡೆಯನ್ನು 1-4ಕ್ಕೆ ಕುಗ್ಗಿಸಿದರು. ಸುಖಜೀತ್ ಸಿಂಗ್ 59ನೇ ನಿಮಿಷದಲ್ಲಿ ಭಾರತದ ನಾಲ್ಕು ಗೋಲುಗಳ ಮುನ್ನಡೆಗೆ ಕಾರಣರಾದರು. ಕೊನೆಯ ನಿಮಿಷದಲ್ಲಿ ಕಾಸಿಂ ಗೋಲಿನೊಂದಿಗೆ ದಕ್ಷಿಣ ಆಫ್ರಿಕಾ ಸೋಲಿನ ಅಂತರ 2-5ಕ್ಕೆ ಇಳಿಯಿತು.

share
Next Story
X