Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರೇ ದಿನದಲ್ಲಿ ಶೇಕಡ 29ರಷ್ಟು...

ಮೂರೇ ದಿನದಲ್ಲಿ ಶೇಕಡ 29ರಷ್ಟು ಮಾರುಕಟ್ಟೆ ಮೌಲ್ಯ ಕಳೆದುಕೊಂಡ ಅದಾನಿ ಸಮೂಹ

31 Jan 2023 8:08 AM IST
share
ಮೂರೇ ದಿನದಲ್ಲಿ ಶೇಕಡ 29ರಷ್ಟು ಮಾರುಕಟ್ಟೆ ಮೌಲ್ಯ ಕಳೆದುಕೊಂಡ ಅದಾನಿ ಸಮೂಹ

ಮುಂಬೈ: ಅದಾನಿ ಸಮೂಹ ಕಂಪನಿಗಳ ಶೇರುಗಳ ಮಾರಾಟಕ್ಕೆ ಜನ ಮುಗಿಬಿದ್ದ ಹಿನ್ನೆಲೆಯಲ್ಲಿ ಸತತ ಮೂರನೇ ದಿನ ಅಂದರೆ ಸೋಮವಾರ ಕೂಡಾ ಅದಾನಿ ಷೇರುಗಳ ಮೌಲ್ಯ ಕುಸಿತ ಮುಂದುವರಿದಿದೆ. ಕೇವಲ ಮೂರು ದಿನದಲ್ಲಿ ಹೂಡಿಕೆದಾರರ 1.4 ಲಕ್ಷ ಕೋಟಿ ರೂಪಾಯಿ ಸಂಪತ್ತು ನಷ್ಟವಾಗಿದೆ. ಅದಾನಿ ಸಮೂಹದ ಮಾರುಕಟ್ಟೆ ಬಂಡಾವಳ ಶೇಕಡ 29ರಷ್ಟು ಅಂದರೆ 5.6 ಲಕ್ಷ ಕೋಟಿ ರೂಪಾಯಿ ಸವೆದಿದೆ.

ಅಮೆರಿಕ ಮೂಲದ ಅಲ್ಪಾವಧಿ ಮಾರಾಟ ಸಂಸ್ಥೆಯಾದ ಹಿಂಡೆನ್‌ಬರ್ಗ್ ರೀಸರ್ಚ್, ಅದಾನಿ ಸಮೂಹವನ್ನು ಟೀಕಿಸಿದ ವರದಿಯನ್ನು ಬಿಡುಗಡೆ ಮಾಡಿದ ಬಳಿಕ ಕಳೆದ ಬುಧವಾರದಿಂದ ಕಂಪನಿಯ ಷೇರುಗಳು ಕುಸಿತದ ಹಾದಿಯಲ್ಲಿವೆ. ಅಂತೆಯೇ ಅದಾನಿ ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ. ಒಂದು ವಾರದ ಹಿಂದೆ ಮೂರನೇ ಸ್ಥಾನದಲ್ಲಿದ್ದ ಅದಾನಿ ಶುಕ್ರವಾರ ಏಳನೇ ಸ್ಥಾನಕ್ಕೆ ಕುಸಿದಿದ್ದರು. 88.2 ಶತಕೋಟಿ ಡಾಲರ್ (7.2 ಲಕ್ಷ ಕೋಟಿ ರೂಪಾಯಿ) ನಿವ್ವಳ ಸಂಪತ್ತಿನೊಂದಿಗೆ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿದ್ದ ಅದಾನಿ ಇದೀಗ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗಿಂತ ಕೇವಲ 4.1 ಶತಕೋಟಿ ಡಾಲರ್ (33 ಸಾವಿರ ಕೋಟಿ ರೂಪಾಯಿ)ನಷ್ಟು ಮುಂದಿದ್ದಾರೆ. ಫೋರ್ಬ್ಸ್ ರಿಯಲ್ ಟೈಮ್ ಬಿಲಿಯನೇರ್ ಇಂಡೆಕ್ಸ್ ಪ್ರಕಾರ ಅಂಬಾನಿ 10ನೇ ಸ್ಥಾನದಲ್ಲಿದ್ದಾರೆ.

ಹಿಂಡೆನ್‌ಬರ್ಗ್ ರೀಸರ್ಚ್ ಮುಂದಿಟ್ಟಿದ್ದ 88 ಪ್ರಶ್ನೆಗಳಿಗೆ ಅದಾನಿ ಸಮೂಹ ಭಾನುವಾರ ರಾತ್ರಿ 413 ಪುಟಗಳ ಸ್ಪಷ್ಟನೆಯ ದಾಖಲೆ ಬಿಡುಗಡೆ ಮಾಡಿದ್ದರೂ, ಸಮೂಹ ಕಂಪನಿಗಳ ಷೇರುಗಳ ಮಾರಾಟ ನಿರಂತರವಾಗಿ ಮುಂದುವರಿದಿದೆ.

ಅದಾನಿ ಎಂಟರ್‌ಪ್ರೈಸಸ್‌ನ 20 ಸಾವಿರ ಕೋಟಿ ರೂಪಾಯಿಗಳ ಫಾಲೋ ಆನ್ ಪಬ್ಲಿಕ್ ಆಫರಿಂಗ್ (ಎಫ್‌ಪಿಓ) ಎರಡನೇ ದಿನ ಕೇವಲ ಶೇಕಡ 3ರಷ್ಟು ಮಾತ್ರ ಮಾರಾಟವಾಗಿದೆ. ದುಬೈ ಮೂಲದ ಇಂಟರ್‌ನ್ಯಾಷನಲ್ ಹೋಲ್ಡಿಂಗ್ ಕಂಪನಿ ಈ ಎಫ್‌ಪಿಓದಲ್ಲಿ 400 ದಶಲಕ್ಷ ಡಾಲರ್ ಹೂಡಿಕೆ ಮಾಡುವ ಭರವಸೆ ನೀಡಿದ ಹೊರತಾಗಿಯೂ ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ಕಂಡುಬಂದಿದೆ.

ಸೋಮವಾರ ವಹಿವಾಟು ಮುಕ್ತಾಯದ ವೇಳೆಗೆ ಎಇಎಲ್ 14 ಲಕ್ಷ ಷೇರುಗಳಿಗೆ ಬಿಡ್‌ಗಳನ್ನು ಸ್ವೀಕರಿಸಿದೆ. ಒಟ್ಟು 4.6 ಕೋಟಿ ಷೇರುಗಳು ಮಾರಾಟಕ್ಕಿದ್ದು, ಕೇವಲ ಶೇಕಡ 3ರಷ್ಟಕ್ಕೆ ಬಿಡ್ ದೊರಕಿದೆ ಎನ್ನುವುದು ಬಿಎಸ್‌ಇ ವೆಬ್‌ಸೈಟ್‌ನಿಂದ ತಿಳಿದು ಬರುತ್ತದೆ.

share
Next Story
X