Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಮುಸ್ಲಿಮರು, ಕ್ರೈಸ್ತರನ್ನು ಯಾವಾಗ...

ನೀವು ಮುಸ್ಲಿಮರು, ಕ್ರೈಸ್ತರನ್ನು ಯಾವಾಗ ಕೊಲ್ಲುತ್ತೀರಿ?: ಹಿಂದುಗಳಿಗೆ ಧಾರ್ಮಿಕ ನಾಯಕನ ಪ್ರಶ್ನೆ

► ಕಾರ್ಯಕ್ರಮಗಳ ಕುರಿತು ವರದಿ ಮಾಡಿದ್ದ ಆನ್ಲೈನ್ ಪೋರ್ಟಲ್ 'Molitics'ಗೆ ಪೊಲೀಸ್ ನೋಟಿಸ್ ► ದ್ವೇಷಭಾಷಣ ಮಾಡಿದವರ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರು

6 Feb 2023 7:17 PM IST
share
ನೀವು ಮುಸ್ಲಿಮರು, ಕ್ರೈಸ್ತರನ್ನು ಯಾವಾಗ ಕೊಲ್ಲುತ್ತೀರಿ?: ಹಿಂದುಗಳಿಗೆ ಧಾರ್ಮಿಕ ನಾಯಕನ ಪ್ರಶ್ನೆ
► ಕಾರ್ಯಕ್ರಮಗಳ ಕುರಿತು ವರದಿ ಮಾಡಿದ್ದ ಆನ್ಲೈನ್ ಪೋರ್ಟಲ್ 'Molitics'ಗೆ ಪೊಲೀಸ್ ನೋಟಿಸ್ ► ದ್ವೇಷಭಾಷಣ ಮಾಡಿದವರ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರು

ಹೊಸದಿಲ್ಲಿ: ಹಲವಾರು ಹಿಂದುತ್ವ ಗುಂಪುಗಳು ರವಿವಾರ ದಿಲ್ಲಿಯ ಜಂತರ್ ಮಂತರ್ ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಮುಸ್ಲಿಮರು ಮತ್ತು ಕ್ರೈಸ್ತರನ್ನು ಕೊಲ್ಲುವಂತೆ ಕರೆಗಳನ್ನು ನೀಡಲು ಈ ಕಾರ್ಯಕ್ರಮಗಳು ಬಳಕೆಯಾಗಿವೆ. ಹಲವಾರು ವೇದಿಕೆಗಳಿಂದ ಭಾಷಣಕಾರರು ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಮಾಡಿದ್ದರು ಎಂದು ಈ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದ ಹಲವರನ್ನು ಉಲ್ಲೇಖಿಸಿ scroll.in ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಶೇರ್ ಆಗಿರುವ ವೀಡಿಯೊಗಳಲ್ಲೊಂದರಲ್ಲಿ, ಓರ್ವ ಧಾರ್ಮಿಕ ನಾಯಕ ಮುಸ್ಲಿಮರು ಮತ್ತು ಕ್ರೈಸ್ತರನ್ನು ಕೊಲ್ಲಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಹಿಂದುಗಳಿಗೆ ಸೂಚಿಸಿದ್ದನ್ನು ಕಾಣಬಹುದು. ಇನ್ನೊಂದು ವೀಡಿಯೊದಲ್ಲಿ ಬಿಜೆಪಿ ನಾಯಕ ಸೂರಜಪಾಲ್ ಅಮು ಅವರು ಸುದರ್ಶನ ಟಿವಿಯ ಮುಖ್ಯ ಸಂಪಾದಕ ಸುರೇಶ್ ಚಾವಂಕೆಯನ್ನು ವಿರೋಧಿಸಲು ಲಾಬಿಯನ್ನು ರೂಪಿಸಿರುವವರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ.

ಬಾಗೇಶ್ವರ ಧಾಮದ ಧಾರ್ಮಿಕ ನಾಯಕ ಧೀರೇಂದ್ರ ಕೃಷ್ಣ ಶಾಸ್ತ್ರಿಯನ್ನು ಬೆಂಬಲಿಸಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಸರಿ ವಸ್ತ್ರಧಾರಿಯೋರ್ವರು, ‘ಒಡೆದು ಆಳಿ ಎಂದು ಬ್ರಿಟಿಷರು ಹೇಳಿದ್ದರು. ಒಡೆದು ಆಳಿ ಎಂದು ಕಾಂಗ್ರೆಸ್ ಹೇಳಿತ್ತು. ಕೈಸ್ತರೂ ಹಾಗೆಯೇ ಹೇಳಿದ್ದರು. ಕೊಲ್ಲಿ ಮತ್ತು ಆಳಿ ಎಂದು ಮುಸ್ಲಿಮರು ಹೇಳಿದ್ದರು. ನೀವು (ಹಿಂದುಗಳು) ಯಾವಾಗ ಕೊಲ್ಲುತ್ತೀರಿ? ನೀವೆಲ್ಲರೂ ಸತ್ತ ಬಳಿಕವೇ? ನೀವು ಅವರನ್ನು ಯಾವಾಗ ಕೊಲ್ಲುತ್ತೀರಿ? ನೀವು ಮುಸ್ಲಿಮರು ಮತ್ತು ಕ್ರೈಸ್ತರನ್ನು ಯಾವಾಗ ಕೊಲ್ಲುತ್ತೀರಿ’ ಎಂದು ಪ್ರಶ್ನಿಸಿದರು.

ತಮ್ಮ ಮನೆಗಳಲ್ಲಿ ಖಡ್ಗಗಳು ಮತ್ತು ಬಂದೂಕುಗಳನ್ನು ದಾಸ್ತಾನಿಟ್ಟುಕೊಳ್ಳುವಂತೆ ಹಿಂದುಗಳನ್ನು ಆಗ್ರಹಿಸಿದ ಅವರು, ‘ನಿಮ್ಮ ಒಂದು ಕೈಯಲ್ಲಿ ಶಸ್ತ್ರ ಮತ್ತು ಇನ್ನೊಂದು ಕೈಯಲ್ಲಿ ಶಾಸ್ತ್ರ (ಧರ್ಮಗ್ರಂಥ)ವಿರಲಿ. ನಮ್ಮ ಸಮುದಾಯ, ನಮ್ಮ ಧರ್ಮಗ್ರಂಥಗಳು, ನಮ್ಮ ತಾಯಂದಿರು ಮತ್ತು ಸೋದರಿಯರ ಮೇಲೆ ದಾಳಿ ನಡೆಸುವ ಯಾರನ್ನೇ ಆದರೂ ದೇಶದ್ರೋಹಿಗಳೆಂದು ನಿರ್ಧರಿಸಿ, ಅವರ ಮೇಲೆ ಗುಂಡು ಹಾರಿಸಿ, ನಡುರಸ್ತೆಗಳಲ್ಲಿಯೇ ಅವರನ್ನು ಕೊಲ್ಲಿ’ ಎಂದು ಹೇಳಿದರು.

ಶಾಸ್ತ್ರಿ ವ್ಯಾಪಕವಾಗಿ ಜನಪ್ರಿಯವಾಗಿರುವ ತನ್ನ ಯುಟ್ಯೂಬ್ ವಿಡಿಯೋಗಳ ಮೂಲಕ ಅಂಧಶ್ರದ್ಧೆ ಮತ್ತು ದ್ವೇಷಗಳನ್ನು ಹರಡುತ್ತಿದ್ದಾರೆ ಎಂಬ ಆರೋಪಗಳಿಂದಾಗಿ ಸುದ್ದಿಯಲ್ಲಿದ್ದಾರೆ.

ಹರ್ಯಾಣ ಬಿಜೆಪಿ ಘಟಕದ ಮಾಧ್ಯಮ ಸಂಯೋಜಕ ಮತ್ತು ಪ್ರಬಲ ಜಾತಿವಾದಿ ಗುಂಪು ಕರ್ಣಿಸೇನಾದ ಮುಖ್ಯಸ್ಥರಾಗಿರುವ ಅಮು ಚಾವಂಕೆಯವರ ಬೆಂಬಲಿಗರು ಭಾಗವಹಿಸಿದ್ದ ಪ್ರತ್ಯೇಕ ಕಾರ್ಯಕ್ರಮದಲ್ಲಿ ಅತ್ಯಂತ ಪ್ರಚೋದಕ ಹೇಳಿಕೆಗಳನ್ನು ನೀಡಿದ್ದಾರೆ.

2021, ಡಿ. 19ರಂದು ದಿಲ್ಲಿಯಲ್ಲಿ ಹಿಂದು ಯುವವಾಹಿನಿಯ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದಕ್ಕಾಗಿ ಈಗಾಗಲೇ ಚಾವಂಕೆ ವಿರುದ್ಧ ತನಿಖೆ ನಡೆಯುತ್ತಿದೆ.

ಭಾರತವನ್ನು ‘ಹಿಂದು ರಾಷ್ಟ್ರ’ವನ್ನಾಗಿ ಮಾಡಲು ಸಾಯುವಂತೆ ಅಥವಾ ಕೊಲ್ಲುವಂತೆ ಅವರು ಸಭಿಕರಿಗೆ ಶಪಥವನ್ನು ಬೋಧಿಸಿದ್ದರು. ಅಮು ರವಿವಾರ ಚಾವಂಕೆಯನ್ನು ಮತ್ತು ಹಿಂದು ರಾಷ್ಟ್ರ ಪರಿಕಲ್ಪನೆಯನ್ನು ವಿರೋಧಿಸುವವರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ.

ಸೋಮವಾರ ಮಧ್ಯಾಹ್ನದವರೆಗೆ ಈ ಕಾರ್ಯಕ್ರಮಗಳಲ್ಲಿ ದ್ವೇಷಭಾಷಣ ಮಾಡಿದವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿದ್ದು ವರದಿಯಾಗಿಲ್ಲ. ಆದರೆ ಕಾರ್ಯಕ್ರಮಗಳ ಕುರಿತು ವರದಿ ಮಾಡಿದ್ದ ಆನ್ಲೈನ್ ಪೋರ್ಟಲ್ ‘ಮಾಲಿಟಿಕ್ಸ್’ಗೆ ದಿಲ್ಲಿ ಪೊಲೀಸರು ನೋಟಿಸನ್ನು ಹೊರಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಮಾಲಿಟಿಕ್ಸ್ ನ ಸ್ಥಾಪಕ ಹಾಗೂ ನಿರ್ದೇಶಕ ಅನುದೀಪ ಜಗ್ಲಾನ್ ಅವರು,‘ನಾನು ಈಗಲೂ ಗೊಂದಲದಲ್ಲಿದ್ದೇನೆ, ನೀವು ನೋಟಿಸನ್ನು ನಮಗೆ ಕಳುಹಿಸಿದ್ದೇಕೆ? ಇಂತಹ ನೋಟಿಸ್ಗಳು ಕೇಸರಿ ವಸ್ತ್ರಧಾರಿ ಕ್ರಿಮಿನಲ್ಗಳಿಗೂ ಹೋಗಿರಬೇಕು ಎಂದು ನಾನು ಆಶಿಸಿದ್ದೇನೆ’ ಎಂದು ಟ್ವೀಟಿಸಿದ್ದಾರೆ.

"तुम कब काटोगे मुसलमानों,ईसाइयों को,घर मे हथियार रखो चाकू से काम नही चलेगा एक हाथ मे शस्त्र और दूसरे में शास्त्र होना चाहिए"

जंतर मंतर पर बालाजी धाम शिष्य मंडल दिल्ली के प्रदीप खटकड़ द्वारा आयोजित सभा में मुस्लिमों और ईसाइयों के नरसंहार की अपील! @HMOIndiahttps://t.co/LkIjXX14Z5 pic.twitter.com/DY0AT2MJiA

— Zakir Ali Tyagi (@ZakirAliTyagi) February 6, 2023

This is from #JantarMantar, #Delhi.#BJP's #Haryana Chief Media Coordinator #SurajPalAmu calls for using violence if any action (even by #SupremeCourt) is taken against #SudarshanNews channel owner #SureshChavhanke or if anyone stops them from turning India into a #HinduRashtra. pic.twitter.com/wNiFKiQNBn

— Hate Detector (@HateDetectors) February 5, 2023

pic.twitter.com/6kjSvAvnto

— DCP New Delhi (@DCPNewDelhi) February 6, 2023
share
Next Story
X