Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಲಾಲಾಬಾದ್ ಕೋಟೆಯನ್ನು 'ಮನ್ಹಾರ್‌ಖೇಡಾ'...

ಜಲಾಲಾಬಾದ್ ಕೋಟೆಯನ್ನು 'ಮನ್ಹಾರ್‌ಖೇಡಾ' ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸಿಎಂಗೆ ಮನವಿ

5 March 2023 12:44 PM IST
share
ಜಲಾಲಾಬಾದ್ ಕೋಟೆಯನ್ನು ಮನ್ಹಾರ್‌ಖೇಡಾ ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸಿಎಂಗೆ ಮನವಿ

ಶಾಮ್ಲಿ: ಪ್ರಸ್ತುತ ಆರ್‌ಎಲ್‌ಡಿ ಶಾಸಕ ಥಾನಾಭವಾನ್ ಅಶ್ರಪ್ ಅಲಿಯವರ ಸ್ವಾಧೀನದಲ್ಲಿರುವ ಜಿಲ್ಲೆಯ ಜಲಾಲಾಬಾದ್ ಕೋಟೆ ಮೂಲತಃ ಹಿಂದೂ ಅರಸರಿಗೆ ಸೇರಿದ್ದು ಎಂದು ಮನ್ಹಾರ್ ಖೇರಾ ದುರ್ಗ್ ಕಲ್ಯಾಣ್ ಸಮಿತಿ ಪ್ರತಿಪಾದಿಸಿದೆ. ಈ ಮೂಲಕ ಅಶ್ರಫ್ ಅಲಿ ಕುಟುಂಬ "ಶತಮಾನಗಳಿಂದ" ವಾಸ್ತವ್ಯ ಇರುವ ಈ ಕೋಟೆ ವಿವಾದದ ಕೇಂದ್ರಬಿಂದುವಾಗಿ ಪರಿಣಮಿಸಿದೆ ಎಂದು timesofindia ವರದಿ ಮಾಡಿದೆ.

ಸಮಿತಿಯ ಕಾರ್ಯದರ್ಶಿ ಭಾನುಪ್ರತಾಪ್ ಸಿಂಗ್ ಮತ್ತು ಹಲವು ಮಂದಿ ಸದಸ್ಯರು ವಿಶೇಷ ಜಿಲ್ಲಾಧಿಕಾರಿ ನಿಖಿತಾ ಶರ್ಮಾ ಅವರನ್ನು ಭೇಟಿ ಮಾಡಿ ಈ ಸಂಬಂಧ ಮುಖ್ಯಮಂತ್ರಿ  ಆದಿತ್ಯನಾಥ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಈ ಪ್ರತಿಪಾದನೆ ಮಾಡಲಾಗಿದೆ.

"ಶತಮಾನಗಳಷ್ಟು ಹಳೆಯದಾದ ಜಲಾಲಾಬಾದ್ ಕೋಟೆ ನೂರಾರು ಎಕರೆ ಪ್ರದೇಶದಲ್ಲಿ ಹರಡಿದೆ. ಇದನ್ನು ಔರಂಗಜೇಬನ ಕಮಾಂಡರ್‌ಗಳ ಪೈಕಿ ಒಬ್ಬರಾದ ಜಲಾಲ್ ಖಾನ್ ಎಂಬವರು ಮೂಲ ಮಾಲಕರಾದ ಹಿಂದೂ ಧರ್ಮಕ್ಕೆ ಸೇರಿದ ಒಬ್ಬರಿಂದ ವಶಪಡಿಸಿಕೊಂಡರು" ಎಂದು ಸಮಿತಿ ಪ್ರತಿಪಾದಿಸಿದೆ. "ಅಶ್ರಫ್ ಅಲಿಯವರು ಈ ಕೋಟೆ ತನ್ನ ಪಿತ್ರಾರ್ಜಿತ ಆಸ್ತಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮೂಲತಃ ಇದು ಹಿಂದೂ ಅರಸರಿಗೆ ಸೇರಿದ್ದು, ಜಲಾಲ್‌ಖಾನ್ ಈ ರಾಜನಿಗೆ ವಿಷಪ್ರಾಶನ ಮಾಡಿಸಿದ್ದ. ಜಲಾಲಾಬಾದ್ ಕೋಟೆಗೆ ’ಮನ್ಹಾರ್‌ಖೇಡಾ’ ಎಂದು ಮರು ನಾಮಕರಣ ಮಾಡುವ ಜತೆಗೆ ಅದನ್ನು ಭಾರತದ ಪ್ರಾಚ್ಯವಸ್ತು ಸರ್ವೇಕ್ಷಣಾಲಯದ ವಶಕ್ಕೆ ಒಪ್ಪಿಸಬೇಕು" ಎಂದು ಆಗ್ರಹಿಸಲಾಗಿದೆ.

ಈ ಕೋಟೆಯನ್ನು ಸೂರ್ಯವಂಶಿ ಕ್ಷತ್ರಿಯ ರಾಜರು ಕಟ್ಟಿದ್ದಾರೆ. ಇದಕ್ಕೆ ಮನ್ಹಾರ್ ಕೋಟೆ ಎಂದು ಹೆಸರಿಡಲಾಗಿತ್ತು. ಇದು 400 ವರ್ಷಕ್ಕೂ ಹೆಚ್ಚು ಹಳೆಯದು. ಜಲಾಲಾಬಾದ್ ಪಟ್ಟಣಕ್ಕೆ ಮನ್ಹಾರ್ ಖೇಡಾ ಎಂದು ಹೆಸರು. ಆದರೆ ಅದ ಹೆಸರನ್ನು ಜಲಾಲಾಬಾದ್ ಎಂದು ಬದಲಿಸಿ ವಶಪಡಿಸಿಕೊಳ್ಳಲಾಗಿದೆ ಎಂದು ಆಪಾದಿಸಲಾಗಿದೆ.

share
Next Story
X