Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಮ್ಮತಿಯು ದ್ವೇಷ ಮತ್ತು ಹಿಂಸೆಗೆ...

ಅಸಮ್ಮತಿಯು ದ್ವೇಷ ಮತ್ತು ಹಿಂಸೆಗೆ ಕಾರಣವಾಗಬಾರದು: ಸಿಜೆಐ ಚಂದ್ರಚೂಡ್

23 March 2023 12:22 PM IST
share
ಅಸಮ್ಮತಿಯು ದ್ವೇಷ ಮತ್ತು ಹಿಂಸೆಗೆ ಕಾರಣವಾಗಬಾರದು: ಸಿಜೆಐ ಚಂದ್ರಚೂಡ್

ಹೊಸದಿಲ್ಲಿ: ವೈವಿಧ್ಯಮಯ ದೃಷ್ಟಿಕೋನಗಳಿಗೆ ಗೌರವ ನೀಡಬೇಕು ಎಂದು ಬುಧವಾರ ಒತ್ತಿ ಹೇಳಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ (CJI DY Chandrachud), "ಅಸಮ್ಮತಿಯು (Disagreement) ದ್ವೇಷಕ್ಕೆ ಕಾರಣವಾಗಬಾರದು ಮತ್ತು ದ್ವೇಷವು ಹಿಂಸೆಗೆ ರೂಪಾಂತರಗೊಳ್ಳಲು ಅನುಮತಿ ನೀಡಬಾರದು" ಎಂದು ಕಿವಿ ಮಾತು ಹೇಳಿದ್ದಾರೆ ಎಂದು indianexpress.com ವರದಿ ಮಾಡಿದೆ.

ಹೊಸ ದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕೋದ್ಯಮದಲ್ಲಿನ ಸಾಧನೆಗಾಗಿ ಪ್ರಧಾನ ಮಾಡುವ ರಮಾನಾಥ ಗೋಯೆಂಕಾ ಪ್ರಶಸ್ತಿಯ 16ನೇ ಆವೃತ್ತಿ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, "ನಮ್ಮ ದೇಶ ಹಾಗೂ ಜಗತ್ತಿನಾದ್ಯಂತ ಹಲವಾರು ಪತ್ರಕರ್ತರು ಕಠಿಣ ಮತ್ತು ಅನ್ಯೋನ್ಯವಿಲ್ಲದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಪ್ರತಿಕೂಲ ಹಾಗೂ ವಿರೋಧಿ ಪರಿಸ್ಥಿತಿಯನ್ನು ದಣಿವರಿಯದೆ ಎದುರಿಸುತ್ತಿದ್ದಾರೆ. ಈ ಗುಣವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂಬುದು ಮುಖ್ಯವಾಗಿದೆ" ಎಂದು ಅಭಿಪ್ರಾಯ ಪಟ್ಟಿದ್ದಾರೆ.

"ಪ್ರಜೆಗಳಾಗಿ ನಾವು ಪತ್ರಕರ್ತರು ಅಳವಡಿಸಿಕೊಂಡಿರುವ ಅಥವಾ ತಲುಪಿರುವ ನಿರ್ಣಯವನ್ನು ಒಪ್ಪದೇ ಇರಬಹುದು. ನಾನೂ ಕೂಡಾ ಹಲವಾರು ಪತ್ರಕರ್ತರೊಂದಿಗೆ ಅಸಮ್ಮತಿ ಹೊಂದಿದ್ದೇನೆ. ಇಷ್ಟಕ್ಕೂ ನಮ್ಮಲ್ಲಿ ಯಾರು ಇತರೆಲ್ಲರ ಮಾತುಗಳನ್ನು ಒಪ್ಪುತ್ತೇವೆ? ಆದರೆ, ಅಸಮ್ಮತಿಯು ದ್ವೇಷಕ್ಕೆ ದಾರಿಯಾಗಬಾರದು ಮತ್ತು ದ್ವೇಷವು ಹಿಂಸೆಯಾಗಿ ರೂಪಾಂತರಗೊಳ್ಳಲು ಅವಕಾಶ ನೀಡಬಾರದು" ಎಂದು ಅವರು ಕಿವಿ ಮಾತು ಹೇಳಿದ್ದಾರೆ.

ಪ್ರಜಾಪ್ರಭುತ್ವಕ್ಕೆ ಮುಕ್ತ ಪತ್ರಿಕೋದ್ಯಮದ ಅವಶ್ಯಕತೆಯನ್ನು ಎತ್ತಿ ಹಿಡಿದ ಅವರು, "ಸರ್ಕಾರದ ಜನನಕ್ಕೆ ಮಾಧ್ಯಮ ನಾಲ್ಕನೆ ಸ್ತಂಭವಾಗಿದ್ದು, ಹೀಗಾಗಿ ಅದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನೊಡ್ಡುವ ಸಾಂಸ್ಥಿಕ ಪತ್ರಿಕೋದ್ಯಮದ ಬೆಳವಣಿಗೆಯನ್ನು ಕಾರ್ಯನಿರ್ವಾಹಕ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವವು ಪ್ರೋತ್ಸಾಹಿಸಬೇಕು. ಅಥವಾ ಸಾಮಾನ್ಯವಾಗಿ ತಿಳಿದಿರುವಂತೆ, ಪ್ರಭುತ್ವಕ್ಕೆ ಸತ್ಯ ಹೇಳಬೇಕು. ಒಂದು ದೇಶ ಪ್ರಜಾಸತ್ತಾತ್ಮಕವಾಗಿ ಉಳಿಯಬೇಕಿದ್ದರೆ ಪತ್ರಿಕೋದ್ಯಮವು ಸ್ವತಂತ್ರವಾಗಿ ಉಳಿಯಲೇಬೇಕು" ಎಂದು ಪ್ರತಿಪಾದಿಸಿದ್ದಾರೆ.

ಸಮಾರಂಭದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಬಿಜೆಪಿ ಸಂಸದರಾದ ರವಿ ಶಂಕರ್ ಪ್ರಸಾದ್, ಸಂಜಯ್ ಜೈಸ್ವಾಲ್, ಮನೋಜ್ ತಿವಾರಿ, ಅನಿಲ್ ಬಲೂನಿ, ಟಿಎಂಸಿ ನಾಯಕ ಡೆರೆಕ್ ಓ'ಬ್ರಿಯೆನ್, ಆಪ್ ಸಂಸದ ಸಂಜಯ್ ಸಿಂಗ್, ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್, ಅರುಣ್ ಶೌರಿ, ಮನೀಶ್ ತಿವಾರಿ, ಕೆ.ಜೆ.ಅಲ್ಫೋನ್ಸ್, ಮಾಜಿ ಮುಖ್ಯ ಚುನಾವಣಾ ಆಯುಕ್ತರಾದ ನಸೀಂ ಝೈದಿ, ಸುನೀಲ್ ಅರೋರಾ, ಎಸ್.ವೈ.ಖುರೇಷಿ, ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ದೀಪಕ್ ಗುಪ್ತಾ, ದಿಲ್ಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ಎ.ಪಿ.ಶಾ, ಜಿ-20 ಶೆರ್ಪಾ ಅಮಿತಾಭ್ ಕಾಂತಾ, ಸಿಪಿಐ ನಾಯಕ ಡಿ.ರಾಜಾ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ದಯವಿಟ್ಟು ನೀವು ಈಗಲಾದರೂ ಕೇಳಿಸಿಕೊಳ್ಳುತ್ತೀರಾ?: ಡೆತ್ ನೋಟ್ ನಲ್ಲಿ 17 ವರ್ಷದ ಬಾಲಕಿಯ ಮನವಿ

share
Next Story
X