Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಸ್ಲಿಮರಿಗೆ ಇದ್ದ 2B ಮೀಸಲಾತಿ...

ಮುಸ್ಲಿಮರಿಗೆ ಇದ್ದ 2B ಮೀಸಲಾತಿ ರದ್ದುಪಡಿಸಿದ ರಾಜ್ಯ ಸರಕಾರ

24 March 2023 8:05 PM IST
share
ಮುಸ್ಲಿಮರಿಗೆ ಇದ್ದ 2B ಮೀಸಲಾತಿ ರದ್ದುಪಡಿಸಿದ ರಾಜ್ಯ ಸರಕಾರ

ಬೆಂಗಳೂರು, ಮಾ.24: ರಾಜ್ಯ ವಿಧಾನಸಭಾ ಚುನಾವಣೆ ಹೊತ್ತಿನಲ್ಲಿಯೇ ವೀರಶೈವ ಲಿಂಗಾಯುತ ಹಾಗೂ ಒಕ್ಕಲಿಗರ ಮೀಸಲಾತಿ ಪ್ರಮಾಣ ತಲಾ ಶೇ.2 ರಷ್ಟು ಹೆಚ್ಚಳ ಮಾಡಿರುವ ರಾಜ್ಯ ಸರಕಾರ, ಹಿಂದುಳಿದ ವರ್ಗಗಳ ಪ್ರವರ್ಗ 2ಬಿ ಅಡಿಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿದೆ. 

ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಸ್ಲಿಮರಿಗೆ ಹಿಂದುಳಿದ ವರ್ಗದ ಪಟ್ಟಿಯಲ್ಲಿ 2 ಬಿ ಅಡಿಯಲ್ಲಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಲಾಗಿದೆ. ಈ ಮೀಸಲಾತಿ ಪ್ರಮಾಣವನ್ನು 2ಡಿ ವರ್ಗದಲ್ಲಿ ಬರುವ ವೀರಶೈವ ಲಿಂಗಾಯತರಿಗೆ ಶೇ.2ರಷ್ಟು ಹಾಗೂ 2ಸಿ ಅಡಿಯಲ್ಲಿರುವ ಒಕ್ಕಲಿಗ ಜನಾಂಗಗಕ್ಕೆ ಶೇ.2ರಷ್ಟು ಹಂಚಿಕೆ ಮಾಡಲಾಗಿದೆ ಎಂದರು.

ಇದರಿಂದಾಗಿ ಹೊಸದಾಗಿ ಸೃಜಿಸಲಾದ ಪ್ರವರ್ಗ 2ಡಿ ಅಡಿಯಲ್ಲಿ ಲಿಂಗಾಯತರಿಗೆ ಶೇ.5 ರಿಂದ ಶೇ.7ಕ್ಕೆ ಹಾಗೂ 2ಸಿ ಅಡಿಯಲ್ಲಿ ಒಕ್ಕಲಿಗರಿಗೆ ಶೇ.4ರಿಂದ 6ಕ್ಕೆ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಅದೇ ರೀತಿ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್) ನೀಡುವ ಮೀಸಲಾತಿಯಲ್ಲಿ ಮುಸ್ಲಿಮರನ್ನು ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಇನ್ನು ಮುಂದೆ 2ಬಿ ಪ್ರವರ್ಗ ಇರುವುದಿಲ್ಲ. 2ಬಿ ಎಂದರೆ ಇದುವರೆಗೆ ಧಾರ್ಮಿಕ ಅಲ್ಪಸಂಖ್ಯಾತರಿಗೆ(ಮುಸ್ಲಿಮರು) ಇದ್ದ ಮೀಸಲಾತಿ. ಮುಂದೆ ಪ್ರವರ್ಗ 2 (ಅತ್ಯಂತ ಹೆಚ್ಚು ಹಿಂದುಳಿದವರು), 2ಎ (ಹಿಂದುಳಿದವರು), 2ಬಿ (ಅಲ್ಪಸಂಖ್ಯಾತರು) ಹಾಗೂ 3ಎ (ಒಕ್ಕಲಿಗ ಮತ್ತು ಇತರರು) ಮತ್ತು 3 ಬಿ (ವೀರಶೈವ ಪಂಚಮಸಾಲಿ ಮತ್ತು ಇತರರು) ಇತ್ತು. ಈಗ 2, 2ಎ, 2ಸಿ (ಒಕ್ಕಲಿಗ ಮತ್ತು ಇತರರು) ಮತ್ತು 2 ಡಿ (ವೀರಶೈವ ಪಂಚಮಸಾಲಿ ಮತ್ತು ಇತರರು) ಎಂಬ ಮೀಸಲಾತಿಗಳು ಇರಲಿವೆ ಎಂದು ಅವರು ವಿವರಿಸಿದರು.

ಹೊಸ ಲೆಕ್ಕಾಚಾರ ಪ್ರಕಾರ, ಒಕ್ಕಲಿಗ ಮೀಸಲಾತಿ ಪ್ರಮಾಣ ಶೇ.4ರಿಂದ 6ಕ್ಕೇರಲಿದೆ. ವೀರಶೈವ ಪಂಚಮಸಾಲಿ ಮೀಸಲಾತಿ ಪ್ರಮಾಣ 5ರಿಂದ 7 ಶೇಕಡಾಕ್ಕೇರಲಿದೆ ಎಂದ ಅವರು, ಧಾರ್ಮಿಕ ಸಮುದಾಯದವರಿಗೆ ಹಿಂದುಳಿದ ವರ್ಗದ ಅಡಿಯಲ್ಲಿ ಮೀಸಲಾತಿ ನೀಡಲು ಅವಕಾಶವಿಲ್ಲ. ಹಾಗಾಗಿ 2 ಬಿ ಅನ್ನು ರದ್ದುಪಡಿಸಲಾಗಿದೆ. ಆದರೂ, ಅವರಿಗೆ ಅನ್ಯಾಯವಾಗಬಾರದು ಎಂದು ಇಡಬ್ಲ್ಯೂಎಸ್ ಕೋಟಾದ ಶೇಕಡ 10ರಷ್ಟು ಮೀಸಲಾತಿ ಗುಂಪಿಗೆ ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. 2ಬಿ ಅಡಿ ಮೀಸಲಾತಿಯೂ ನೀಡಿಲ್ಲ. ಸ್ವಾತಂತ್ರ್ಯ ನಂತರ ಇಂತಹ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಾಲ ಕಾಲಕ್ಕೆ ಹಲವು ನಿರ್ಣಯ ಕೈಗೊಂಡು ಹಲವು ಸಮಿತಿಗಳನ್ನು ರಚಿಸಲಾಗಿದೆ. ಆದರೆ ಸಮಿತಿಗಳ ಶಿಫಾರಸುಗಳನ್ನು ಜಾರಿ ಮಾಡಿರಲಿಲ್ಲ. ಇನ್ನೂ, ಹಿಂದುಳಿದ ವರ್ಗದಲ್ಲಿ ಒಂದೇ ವರ್ಗೀಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.

share
Next Story
X