Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾತ್ಮ ಗಾಂಧಿ ಯಾವುದೇ ವಿಶ್ವವಿದ್ಯಾಲಯದ...

ಮಹಾತ್ಮ ಗಾಂಧಿ ಯಾವುದೇ ವಿಶ್ವವಿದ್ಯಾಲಯದ ಪದವಿ ಹೊಂದಿರಲಿಲ್ಲ ಎಂಬ ಸಿನ್ಹಾ ಹೇಳಿಕೆಯನ್ನು ಅಲ್ಲಗಳೆದ ತುಷಾರ್ ಗಾಂಧಿ

25 March 2023 2:44 PM IST
share
ಮಹಾತ್ಮ ಗಾಂಧಿ ಯಾವುದೇ ವಿಶ್ವವಿದ್ಯಾಲಯದ ಪದವಿ ಹೊಂದಿರಲಿಲ್ಲ ಎಂಬ ಸಿನ್ಹಾ ಹೇಳಿಕೆಯನ್ನು ಅಲ್ಲಗಳೆದ ತುಷಾರ್ ಗಾಂಧಿ

ಹೊಸ ದಿಲ್ಲಿ: ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿಯವರು ಯಾವುದೇ ವಿಶ್ವವಿದ್ಯಾಲಯದ ಪದವಿಯನ್ನು ಹೊಂದಿರಲಿಲ್ಲ ಎಂಬ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರ ಹೇಳಿಕೆಯನ್ನು ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅಲ್ಲಗಳೆದಿದ್ದಾರೆ ಎಂದು thehindu.com ವರದಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ತುಷಾರ್ ಗಾಂಧಿ, "ಮೋಹನ್ ದಾಸ್ ಕರಮ್‌ಚಂದ್ ಗಾಂಧಿ ಅವರು ಎರಡು ಮೆಟ್ರಿಕ್ಯುಲೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಮೊದಲನೆಯದು ರಾಜಕೋಟ್‌ನ ಆಲ್ಫ್ರೆಡ್ ಪ್ರೌಢಶಾಲೆಯಲ್ಲಾದರೆ, ಎರಡನೆಯದು ಅದಕ್ಕೆ ಸಮನಾದ ಬ್ರಿಟಿಷ್ ಮೆಟ್ರಿಕ್ಯುಲೇಶನ್ ಅನ್ನು ಲಂಡನ್‌ನಲ್ಲಿ ಪೂರೈಸಿದ್ದರು. ನಂತರ ಲಂಡನ್ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಇನ್ನರ್ ಟೆಂಪಲ್ ಕಾನೂನು ಕಾಲೇಜಿನಲ್ಲಿ ಪದವಿ ಪೂರೈಸಿದರು. ಇದೇ ಸಮಯದಲ್ಲಿ ಲ್ಯಾಟಿನ್ ಹಾಗೂ ಫ್ರೆಂಚ್ ಭಾಷೆಯಲ್ಲಿ ಎರಡು ಡಿಪ್ಲೊಮಾ ಪೂರೈಸಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಅವರಿಗೆ ತಿಳಿವಳಿಕೆ ನೀಡಲು ಈ ಮಾಹಿತಿಯನ್ನು ಹಂಚಲಾಗಿದೆ" ಎಂದು ಹೇಳಿದ್ದಾರೆ.

ಗುರುವಾರ ಗ್ವಾಲಿಯರ್‌ನ ಐಟಿಎಂನಲ್ಲಿರುವ ಡಾ. ರಾಮಮನೋಹರ ಲೋಹಿಯಾ ಸ್ಮಾರಕದಲ್ಲಿ ಮುಖ್ಯ ಭಾಷಣಕಾರರಾಗಿ ಉಪನ್ಯಾಸ ನೀಡಿದ್ದ ಮನೋಜ್ ಸಿನ್ಹಾ, ಮಹಾತ್ಮ ಗಾಂಧಿಯವರ ವಿದ್ಯಾರ್ಹತೆ ಕುರಿತು ಮಾತನಾಡಿದ್ದರು.

"ಗಾಂಧೀಜಿಯವರು ಯಾವುದೇ ವಿಶ್ವವಿದ್ಯಾಲಯದ ಪದವಿ ಪಡೆದಿರಲಿಲ್ಲ ಎಂಬ ಸಂಗತಿ ನಿಮಗೆ ಗೊತ್ತೆ? ನಮ್ಮಲ್ಲಿ ಬಹುತೇಕರು ಮಹಾತ್ಮ ಗಾಂಧಿ ಕಾನೂನು ಪದವಿ ಹೊಂದಿದ್ದರು ಎಂದು ಭಾವಿಸಿದ್ದೇವೆ. ಇಲ್ಲ, ಅವರು ಹೊಂದಿರಲಿಲ್ಲ. ಅವರ ಒಂದೇ ವಿದ್ಯಾರ್ಹತೆ ಪ್ರೌಢಶಾಲೆಯ ಡಿಪ್ಲೊಮಾ. ಅದರಿಂದ ಅವರು ವಕೀಲರಾಗಲು ಅರ್ಹತೆ ಪಡೆದರು. ಅವರು ಕಾನೂನು ಪದವಿ ಹೊಂದಿಲ್ಲ" ಎಂದು ಮನೋಜ್ ಸಿನ್ಹಾ ತಮ್ಮ ಉಪನ್ಯಾಸದಲ್ಲಿ ಪ್ರತಿಪಾದಿಸಿದ್ದರು.

ಮಹಾತ್ಮ ಗಾಂಧಿ ಕುರಿತ ಹೇಳಿಕೆಯನ್ನು ಟೀಕಿಸಿರುವ ತುಷಾರ್ ಗಾಂಧಿ, "ನಾನು ಜಮ್ಮು ಮತ್ತು ಕಾಶ್ಮೀರ ರಾಜಭವನಕ್ಕೆ ಬಾಪು ಅವರ ಆತ್ಮಕತೆಯ ಪ್ರತಿಯೊಂದನ್ನು ರವಾನಿಸಿದ್ದೇನೆ. ಅದನ್ನು ಉಪ ರಾಜ್ಯಪಾಲರು ಒಂದು ವೇಳೆ ಓದಿ, ತಮಗೆ ತಾವು ತಿಳಿವಳಿಕೆ ಮೂಡಿಸಿಕೊಳ್ಳಲಿ ಎಂಬ ಆಶಯದೊಂದಿಗೆ. ನಾನು ಒಪ್ಪುತ್ತೇನೆ, ಬಾಪು ಸಮಗ್ರ ಕಾನೂನಿನಲ್ಲಿ ಯಾವುದೇ ಪದವಿ ಹೊಂದಿಲ್ಲ ಎಂಬ ಸಂಗತಿಯನ್ನು!" ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

share
Next Story
X