Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ...

ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಪ್ರಶಾಂತ್ ಸಂಬರಗಿ ವಿರುದ್ಧ ದೂರು

25 March 2023 5:46 PM IST
share
ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಬೆಂಗಳೂರು:  ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಹಾಗೂ  ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಎಂಬಾತನ ವಿರುದ್ಧ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಕೆಯಾಗಿದೆ. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವನ್ನು ಇಟ್ಟುಕೊಂಡು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಗ್ಗೆ ಪ್ರಶಾಂತ್ ಸಂಬರಗಿ ಮಾನಹಾನಿಕರ ಪೋಸ್ಟ್ ಹಾಕಿ ತೇಜೋವಧೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜೆಡಿಎಸ್ ನಾಯಕರ ಬಗ್ಗೆ ಅವಹೇಳನಕರ ಪೋಸ್ಟ್ ಪ್ರಕಟಿಸುತ್ತಿದ್ದಾರೆ. ಮಾತ್ರವಲ್ಲದೆ ಧರ್ಮಗಳ ನಡುವೆ, ಜಾತಿಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆದುದರಿಂದ ಪ್ರಶಾಂತ್ ಸಂಬರಗಿಯನ್ನು ಗಡಿಪಾರು ಮಾಡಬೇಕು. ಜತೆಗೆ, ಸಾಮಾಜಿಕ ಜಾಲತಾಣದ ಖಾತೆಗಳನ್ನ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್ ನೇತೃತ್ವದ ನಿಯೋಗದ ದೂರು ಸಲ್ಲಿಸಿತು. ಈ ಸಂದರ್ಭದಲ್ಲಿ ವಕ್ತಾರ ಗಂಗಾಧರ್ ಮೂರ್ತಿ ಸೇರಿದಂತೆ ಪ್ರಮುಖರಿದ್ದರು.

ಸಂಬರಗಿ ಫೇಸ್ ಪೋಸ್ಟ್ ನಲ್ಲೇನಿದೆ?:  ʻʻದೇವೇ ಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೆ ಯಾಕಿರ್ತಾರೆ ಅನ್ನೋದಕ್ಕೂ ವ್ಯತ್ಯಾಸವಿದೆ. ಮೊದಲನೆಯದಕ್ಕೆ ದೇವೇ ಗೌಡ್ರು ಕೇಸ್ ಹಾಕಬೇಕು. ಎರಡನೆಯದಕ್ಕೆ ಅವನ ಮಗನೋ ಮೊಮ್ಮಗನೇ or any ಗೌಡ ಕೇಸು ಹಾಕಬಹುದು. ಸುಮ್ನೆ ಒಂದು ಉದಾಹರಣೆ ಕೊಟ್ಟೆ ಅಷ್ಟೇ ಸೀರಿಯಸ್ ಆಗಿ ತಗೋಬೇಡಿʼʼ ಎಂದು ಸಂಬರಗಿ ಫೇಸ್’ಬುಕ್’ನಲ್ಲಿ ಪ್ರಕಟಿಸಿದ್ದರು. 

ಮಾಜಿ ಪ್ರಧಾನಮಂತ್ರಿಗಳು ಮತ್ತು ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್ ಡಿ ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಅವರ ತೇಜೋವದೆಗೆ ಯತ್ನಿಸಿದ ಪ್ರಶಾಂತ್ ಸಂಬರಗಿ ವಿರುದ್ಧ ಪಕ್ಷವು ಪೊಲೀಸರಿಗೆ ದೂರು ನೀಡಿದೆ. pic.twitter.com/aHbjzymiOO

— Janata Dal Secular (@JanataDal_S) March 25, 2023
share
Next Story
X