Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3-4 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ...

3-4 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

25 March 2023 8:08 PM IST
share
3-4 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ. 25: ‘ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರು ಅಥವಾ ನಾಲ್ಕು ದಿನಗಳಲ್ಲಿ ಎರಡನೆ ಪಟ್ಟಿ ಪ್ರಕಟಿಸಲಾಗುವುದು. ಆ ಮೂಲಕ ಚಂದ್ರನ ಹಿಂದೆ ಸೂರ್ಯನ ಬೆಳಕು ಆಗಮಿಸಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. 

ಶನಿವಾರ ಸದಾಶಿವನಗರದಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಹುತೇಕ ಶೇ.95ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ' ಎಂದು ತಿಳಿಸಿದರು.

‘ನಂಜನಗೂಡು ಕ್ಷೇತ್ರದಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಟಿಕೆಟ್ ನೀಡಿದ್ದೇವೆ’ ಎಂದು ವಿವರಣೆ ನೀಡಿದ ಶಿವಕುಮಾರ್, ಮಾಜಿ ಸದಸ್ಯ ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ' ಎಂದು ಸ್ಪಷ್ಟಪಡಿಸಿದರು.

‘ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಟಿಕೆಟ್ ಇನ್ನೂ ಪ್ರಕಟಿಸಿಲ್ಲ. ಎರಡನೇ ಪಟ್ಟಿಯಲ್ಲಿ ಎಲ್ಲವೂ ಸರಿ ಹೋಗಲಿದೆ’ ಎಂದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯನ್ನು ಅವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ' ಎಂದು ತಿಳಿಸಿದರು.

ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂಬ ಬಗ್ಗೆ ಹೈಕಮಾಂಡ್‍ಗೆ ಕೇಳಬೇಕು' ಎಂದ ಅವರು, ಬೆಂಗಳೂರು ಅಭಿವೃದ್ಧಿಯಾಗುತ್ತಿರುವ ಪ್ರದೇಶ. ಇಲ್ಲಿ ಸಂಚಾರ ದಟ್ಟಣೆ ಸೇರಿ ಅನೇಕ ಸಮಸ್ಯೆಗಳಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ರೂಪಿಸಲು ಪ್ರಯತ್ನ ಮಾಡುತ್ತಿದ್ದೇವೆ' ಎಂದು ತಿಳಿಸಿದರು.

share
Next Story
X