Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಅನ್ನೇ ಅಲ್ಲಾಡಿಸಿದ ಅಮಿತ್ ಶಾ...

ಆರೆಸ್ಸೆಸ್ ಅನ್ನೇ ಅಲ್ಲಾಡಿಸಿದ ಅಮಿತ್ ಶಾ ಸರ್ವಾಧಿಕಾರ !

ಬಿಜೆಪಿ ಅಧ್ಯಕ್ಷರಿಗೆ ಕರಿಪತಾಕೆ ಪ್ರದರ್ಶಿಸಿದ ಸ್ವಯಂ ಸೇವಕರು

ವಾರ್ತಾಭಾರತಿವಾರ್ತಾಭಾರತಿ3 Sept 2016 12:36 PM IST
share
ಆರೆಸ್ಸೆಸ್ ಅನ್ನೇ ಅಲ್ಲಾಡಿಸಿದ ಅಮಿತ್ ಶಾ ಸರ್ವಾಧಿಕಾರ !

ಗೋವಾ, ಸೆ.3: ತನ್ನ ಗೋವಾ ಘಟಕದ ಮುಖ್ಯಸ್ಥ ಸುಭಾಶ್ ವೆಲಿಂಗ್ ಕರ್ ಅವರನ್ನು ಕಿತ್ತೊಗೆಯುವ ಆರೆಸ್ಸೆಸ್ ನಿರ್ಧಾರದ ಬಗ್ಗೆ ಸಂಘದಲ್ಲಿ ಒಮ್ಮತವಿಲ್ಲವೆಂಬುದು ಸ್ಪಷ್ಟವಾಗುತ್ತಿದೆ. ಸುಭಾಶ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಒತ್ತಡದಮೇರೆಗೆ ಹುದ್ದೆಯಿಂದ ಕೆಳಗಿಳಿಸಲಾಗಿದೆಯೆಂದು ಹಲವಾರು ಹಿರಿಯ ಆರೆಸ್ಸೆಸ್ ನಾಯಕರು ಅಭಿಪ್ರಾಯ ಪಡುತ್ತಾರೆ ಎಂದು ಸ್ಕ್ರೋಲ್.ಇನ್ ವರದಿಯೊಂದು ಹೇಳಿದೆ.

ಸುಭಾಶ್ ರಚಿಸಿರುವ ಭಾರತೀಯ ಭಾಷಾ ಸುರಕ್ಷಾ ಮಂಚ್ ಗೋವಾದ ಬಿಜೆಪಿ ಸರಕಾರಕ್ಕೆ ನಿರಂತರವಾಗಿ ಸವಾಲೊಡ್ಡುತ್ತಿದ್ದು, ಅಲ್ಲಿನ ಶಾಲೆಗಳಲ್ಲಿ ಕೊಂಕಣಿ ಮತ್ತು ಮರಾಠಿಯನ್ನು ಕಲಿಕಾ ಮಾಧ್ಯಮವಾಗಿಸಬೇಕೆಂಬ ಸುರಕ್ಷಾ ಮಂಚ್ ಬೇಡಿಕೆ ಸರಕಾರಕ್ಕೆ ಸರಿ ಕಂಡಿಲ್ಲವೆನ್ನುವುದು ಈಗಾಗಲೆ ತಿಳಿದಿರುವ ವಿಚಾರವಾಗಿದೆ.

ಮೇಲಾಗಿ ಅಮಿತ್ ಶಾ ಅವರು ಗೋವಾಗೆ ಆಗಸ್ಟ್ 21ರಂದು ಭೇಟಿ ನೀಡಿದಾಗ ಸಂಘ ಪರಿವಾರ ಕಾರ್ಯಕರ್ತರೂ ಸೇರಿದಂತೆ ಸುರಕ್ಷಾ ಮಂಚ್ ಕಾರ್ಯಕರ್ತರು ಅವರಿಗೆ ಕರಿ ಪತಾಕೆ ತೋರಿಸಿದ ಘಟನೆಯಿಂದ ಶಾ ಆಕ್ರೋಶಗೊಂಡಿದ್ದೇ ಸುಭಾಶ್ ವಿರುದ್ಧ ಕ್ರಮಕ್ಕೆ ಕಾರಣವೆಂದು ತಿಳಿಯಲಾಗಿದೆ.
ಸುಭಾಶ್ ಅವರು ತಮ್ಮ ವಿರುದ್ಧದ ಕ್ರಮಕ್ಕೆಕೇಂದ್ರ ಸಚಿವರಾದ ಮನೋಹರ್ ಪಾರಿಕ್ಕರ್ ಹಾಗೂ ನಿತಿನ್ ಗಡ್ಕರಿಯವರನ್ನು ದೂರಿದ್ದರೆ, ಆರೆಸ್ಸೆಸ್ ನ ಹಲವಾರು ನಾಯಕರ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾಆರೆಸ್ಸೆಸ್ ನಾಯಕತ್ವದ ಮೇಲೆ ಹೇರಿದ ಒತ್ತಡವೇ ಈ ಕ್ರಮಕ್ಕೆ ಕಾರಣ.
‘‘ಅಮಿತ್ ಶಾ ಬಿಜೆಪಿಯ ಸರ್ವಾಧಿಕಾರಿಯಾಗಿರಬಹುದು ಆದರೆ ಅವರು ಸಂಘದ ಮೇಲೆ ಸವಾರಿ ಮಾಡುವುದನ್ನು ಅನುಮತಿಸಲಾಗುವುದಿಲ್ಲ’’ ಎಂದು ರಾಜಸ್ಥಾನದ ಹಿರಿಯ ಆರೆಸ್ಸೆಸ್ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.
ಸುಭಾಶ್ ಅವರನ್ನು ಆರೆಸ್ಸೆಸ್ ಗೋವಾ ಘಟಕದ ಮುಖ್ಯಸ್ಥ ಹುದ್ದೆಯಿಂದ ಕಿತ್ತೊಗೆದಿರುವುದು ಸಂಘದ ಕಾರ್ಯಚಟುವಟಿಕೆಗಳಲ್ಲಿ ಬಿಜೆಪಿಯ ನೇರ ಹಸ್ತಕ್ಷೇಪವಿದೆಯೆಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಗೋವಾದ ಹಲವು ಆರೆಸ್ಸೆಸ್ ಪದಾಧಿಕಾರಿಗಳು ಆರೋಪಿಸುತ್ತಾರೆ.
ಈತನ್ಮಧ್ಯೆ ಗೋವಾದ ಆರೆಸ್ಸೆಸ್ ಘಟಕವು ಸ್ವತಂತ್ರ ಸಂಘಟನೆಯಾಗಿ ಕಾರ್ಯನಿರ್ವಹಿಸುವುದು ಎಂದು ಸುಭಾಶ್ ಹೇಳಿರುವುದು ಆರೆಸ್ಸೆಸ್ ನಾಯಕತ್ವಕ್ಕೆ ಅವರು ಸಡ್ಡು ಹೊಡೆದಿದ್ದಾರೆಂಬುದನ್ನು ಸೂಚಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X