Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ. 6,7,8ಕ್ಕೆ ಅಂತರ್ ಜಿಲ್ಲಾ...

ಜ. 6,7,8ಕ್ಕೆ ಅಂತರ್ ಜಿಲ್ಲಾ ಹೊನಲುಬೆಳಕಿನ ಕಬಡ್ಡಿ ಪಂದ್ಯಾವಳಿ

ಆಕರ್ಷಕ ನಗದು ಬಹುಮಾನ ಹಾಗೂ ಟಿಪ್ಪು ಸುಲ್ತಾನ್ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ31 Dec 2016 5:09 PM IST
share
ಜ. 6,7,8ಕ್ಕೆ ಅಂತರ್ ಜಿಲ್ಲಾ ಹೊನಲುಬೆಳಕಿನ ಕಬಡ್ಡಿ ಪಂದ್ಯಾವಳಿ

ಭಟ್ಕಳ , ಡಿ. 31 :  ಜ.6,7,8 ರಂದು ಭಟ್ಕಳದ ಸುಲ್ತಾನ್ ಯೂತ್ ವೆಲ್ಫೇರ್ ಅಸೋಶಿಯೇಶನ್ ಅಂತರ್ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಿದ್ದು ,  ಟಿಪ್ಪು ಸುಲ್ತಾನ್ ಆಕರ್ಷಕ ಟ್ರೋಫಿ ಸೇರಿದಂತೆ ಲಕ್ಷಕ್ಕೂ ಅಧಿಕ ನಗದು ಬಹುಮಾನ ನೀಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಅಬ್ದುಸ್ಸಮಿ ಮೆಡಿಕಲ್ ಹೇಳಿದರು.

ಅವರು ಅಸೋಸಿಯೇಶನ್ ಕಾರ್ಯಾಲಯದಲ್ಲಿ ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದರು.

ಸುಲ್ತಾನ್ ವೆಲ್ಫೇರ್ ಅಸೋಸಿಯೇಶನ್ ಕಳೆದ 29 ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಯಾವುದೇ ಜಾತಿ, ಭಾಷೆ, ಧರ್ಮಭೇದ ಮಾಡದೆ ಎಲ್ಲರಿಗೂ ವೇದಿಕೆಯನ್ನು ನೀಡುತ್ತಿದೆ. ಈಗ ತಾಲೂಕಿನ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕಾಗಿದೆ ಎಂದರು.

ಬೆಂಗಳೂರು, ತುಮಕುರು, ಹಾವೇರಿ, ದಾವಣಗೆರೆ, ಶಿವಮೊಗ್ಗ, ಮಂಗಳುರು, ಉಡುಪಿ, ಕಾರವಾರ ಸೇರಿದಂತೆ ಇನ್ನಿತರ ಜಿಲ್ಲೆಗಳಿಂದ ಒಟ್ಟು 20ಕ್ಕೂ ಅಧಿತ ತಂಡಗಳು ಭಾಗವಹಿಸಲಿದ್ದು, ಇವುಗಳಲ್ಲಿ ಪ್ರಮುಖ ಆಕರ್ಷಣೆಯೆಂದರೆ ಪ್ರತಿಷ್ಠಿತ ಪ್ರೋ ಕಬಡ್ಡಿಯ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಅದೇ ರೀತಿ 3 ಜನ ಅಂತರ ರಾಜ್ಯ ಕಬಡ್ಡಿ ಆಟಗಾರರು ಈ ಕಬಡ್ಡಿ ಪಂದ್ಯದಲ್ಲಿ ಆಡಬಹುದು ಎಂದು ತಿಳಿಸಿದರು.

ಪಂದ್ಯಾವಳಿಯ ವಿಜೇತ ಪ್ರಥಮ ತಂಡಕ್ಕೆ 55555ರೂ ನಗದು ಹಾಗೂ ಒಂದು ಟ್ರೋಪಿ, ದ್ವೀತಿಯ ತಂಡಕ್ಕೆ 33333ರೂ ನಗದು ಸೇರಿ ಟ್ರೋಪಿ ನೀಡಲಾಗುವುದು.

ಈ ಸಂದರ್ಭದಲ್ಲಿ ಸುಲ್ತಾನ್ ಯೂಥ್ ವೇಲ್ಪೇರ್ ಅಸೋಶಿಯೇಶನ್ ಅಧ್ಯಕ್ಷ ಅಬ್ದುಲ್ ಅಝೀಮ್ ಮೊಹತೆಶಮ್, ಜಂಟಿ ಕಾರ್ಯದರ್ಶೀ ಅಂಬರ್ ಕೋಬಟ್ಟೆ, ಕ್ರೀಡಾ ಕಾರ್ಯದರ್ಶಿ ಮೌಲಾನಾ ಅಬ್ಬೂಬಕ್ಕರ್ ತೋನ್ಸೆ , ಜಿಲ್ಲಾ ಕಬಡ್ಡಿ ಅಸೋಶಿಯೇಶನ್ ಕೋಶಾಧ್ಯಕ್ಷ ರಾಜೇಶ ಮುಂಡಗೋಡ, ಭಟ್ಕಳ ತಾಲೂಕು ಕಬಡ್ಡಿ ಅಸೋಶಿಯೇಶನ್ ಅಧ್ಯಕ್ಷ ಶ್ರೀಧರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X