Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಯಾಚೆನ್ ಬಳಿ ಪಾಕ್ ಯುದ್ಧವಿಮಾನಗಳ...

ಸಿಯಾಚೆನ್ ಬಳಿ ಪಾಕ್ ಯುದ್ಧವಿಮಾನಗಳ ಹಾರಾಟ

ಭಾರತೀಯ ವಾಯುಪ್ರದೇಶ ಉಲ್ಲಂಘನೆಯಾಗಿಲ್ಲ:ಐಎಎಫ್

ವಾರ್ತಾಭಾರತಿವಾರ್ತಾಭಾರತಿ24 May 2017 4:04 PM IST
share
ಸಿಯಾಚೆನ್ ಬಳಿ ಪಾಕ್ ಯುದ್ಧವಿಮಾನಗಳ ಹಾರಾಟ

ಹೊಸದಿಲ್ಲಿ,ಮೇ 24: ಪಾಕಿಸ್ತಾನದ ಯುದ್ಧವಿಮಾನಗಳು ಬುಧವಾರ ಸಿಯಾಚೆನ್ ನೀರ್ಗಲ್ಲು ಪ್ರದೇಶದ ಬಳಿ ಹಾರಾಟ ನಡೆಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆಯಾದರೂ, ಭಾರತದ ವಾಯುಪ್ರದೇಶದ ಉಲ್ಲಂಘನೆಯಾಗಿಲ್ಲ ಎಂದು ಭಾರತೀಯ ವಾಯುಪಡೆಯು ಹೇಳಿದೆ.

ಪಾಕಿಸ್ತಾನಿ ವಾಯುಪಡೆ (ಪಿಎಎಫ್)ಯ ಯುದ್ಧವಿಮಾನಗಳು ಬುಧವಾರ ಬೆಳಿಗ್ಗೆ ಸಿಯಾಚೆನ್ ಗ್ಲೇಸಿಯರ್ ಬಳಿ ಹಾರಾಟ ನಡೆಸಿವೆ ಎಂದು ವರದಿ ಮಾಡಿರುವ ಪಾಕ್‌ನ ಸಮಾ ಟಿವಿಯು, ಪಿಎಎಫ್‌ನ ಎಲ್ಲ ಮುಂಚೂಣಿ ನೆಲೆಗಳನ್ನು ಸಂಪೂರ್ಣ ಕಾರ್ಯಸನ್ನದ್ಧ ಗೊಳಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹೇಳಿದೆ.

ಪಿಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಸೊಹೈಲ್ ಅಮಾನ್ ಅವರು ಬುಧವಾರ ಸ್ಕರ್ಡು ವಾಯುನೆಲೆಗೆ ಭೇಟಿ ನೀಡಿದ್ದು, ಮಿರಾಜ್ ಯುದ್ಧವಿಮಾನವನ್ನು ಸ್ವತಃ ಅವರೇ ಚಾಲನೆ ಮಾಡಿದ್ದರು ಎಂದು ವರದಿಯು ತಿಳಿಸಿದೆ.

 ಅಮಾನ್ ವಾಯುಪಡೆಯ ಪೈಲಟ್‌ಗಳು ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ಭೇಟಿಯಾಗಿದ್ದರು ಎಂದು ಪಿಎಎಫ್ ತಿಳಿಸಿದೆ. ಈ ವೇಳೆ ಪಾಕ್ ಯುದ್ಧವಿಮಾನಗಳ ಗುಂಪೊಂದು ಹೆಚ್ಚಿನ ಎತ್ತರದಲ್ಲಿ ಮತ್ತು ಕೆಳಮಟ್ಟದಲ್ಲಿ ಹಾರಾಟ ನಡೆಸಿತ್ತು.

ಸಿಯಾಚೆನ್ ಗ್ಲೇಸಿಯರ್ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿಯಾಗಿದೆ. ಹಿಮಾಲಯ ಪರ್ವತಗಳ ಪೂರ್ವ ಕಾರಾಕೋರಂ ಪ್ರದೇಶದಲ್ಲಿರುವ ಸಿಯಾಚೆನ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಯು ಅಂತ್ಯಗೊಳ್ಳುತ್ತದೆ.

 ಪಾಕಿಸ್ತಾನದ ವಿಮಾನಗಳು ಸಿಯಾಚೆನ್ ಸಮೀಪ ಭಾರತೀಯ ಪ್ರದೇಶದಲ್ಲಿ ಹಾರಾಟ ನಡೆಸಿವೆ ಎಂಬ ಪಾಕ್ ಮಾಧ್ಯಮಗಳ ವರದಿಯನ್ನು ಇಲ್ಲಿಯ ಭಾರತೀಯ ವಾಯುಪಡೆ ಮೂಲಗಳು ನಿರಾಕರಿಸಿದ್ದು, ಭಾರತೀಯ ವಾಯುಪ್ರದೇಶದ ಉಲ್ಲಂಘನೆ ಯಾಗಿಲ್ಲ ಎಂದು ಸ್ಪಷ್ಟಪಡಿಸಿವೆ.

 ಭಯೋತ್ಪಾದಕ ಕೃತ್ಯಗಳಿಗೆ ಪ್ರತೀಕಾರವಾಗಿ ತಾನು ಈ ತಿಂಗಳು ನಿಯಂತ್ರಣ ರೇಖೆಯಲ್ಲಿನ ಪಾಕಿಸ್ತಾನಿ ನೆಲೆಗಳ ಮೇಲೆ ದಾಳಿ ನಡೆಸಿ ಹಾನಿಯನ್ನುಂಟು ಮಾಡಿದ್ದೇನೆ ಎಂದು ಭಾರತೀಯ ಸೇನೆಯು ಪ್ರಕಟಿಸಿದ ಮರುದಿನವೇ ಪಾಕ್ ಯುದ್ಧವಿಮಾನಗಳು ಸಿಯಾಚೆನ್ ಸಮೀಪ ಹಾರಾಟ ನಡೆಸಿದ ವರದಿಗಳು ಹೊರಬಿದ್ದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X