Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂಗ್ರೆಸ್ ಪಕ್ಷ ಮನಪಾ ವ್ಯಾಪ್ತಿಯಲ್ಲಿ...

ಕಾಂಗ್ರೆಸ್ ಪಕ್ಷ ಮನಪಾ ವ್ಯಾಪ್ತಿಯಲ್ಲಿ ಉಲ್ಭಣಿಸುತ್ತಿರುವ ಕಸದ ಸಮಸ್ಯೆ ಸುಧೀರ್ ಶೆಟ್ಟಿ ಕಣ್ಣೂರು ಆರೋಪಿಸಿದ್ದಾರೆ.

ವಾರ್ತಾಭಾರತಿವಾರ್ತಾಭಾರತಿ1 March 2016 10:58 PM IST
share

ಮಂಗಳೂರು, ಮಾ. 1: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಮನಪಾ ವ್ಯಾಪ್ತಿಯಲ್ಲಿ ಉಲ್ಭಣಿಸುತ್ತಿರುವ ಕಸದ ಸಮಸ್ಯೆ ಪರಿಹರಿಸಲು ಗಮನ ನೀಡುತ್ತಿಲ್ಲ ಎಂದು ಮಂಗಳೂರು ಪಾಲಿಕೆ ಪ್ರತಿಪಕ್ಷ ನಾಯಕ ಸುಧೀರ್ ಶೆಟ್ಟಿ ಕಣ್ಣೂರು ಆರೋಪಿಸಿದ್ದಾರೆ.
ಮನೆ ಮನೆಗಳಿಂದ ಕಸ ಸಂಗ್ರಹಣೆಯು ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿಲ್ಲ. ಶೇ.60ರಷ್ಟು ಮನೆಗಳಿಂದ ಕಸ ಸಂಗ್ರಹ ನಡೆಯುತ್ತಿದ್ದು, ಉಳಿದ ಮನೆಗಳ ಕಸ-ತ್ಯಾಜ್ಯ ಈ ಹಿಂದೆ ಇದ್ದ ಕಸದ ತೊಟ್ಟಿಯ ಜಾಗದಲ್ಲಿ ರಾಶಿ ಬೀಳುತ್ತಿದೆ. ಆದರೆ, ಮನಪಾ ಶೇ.100ರಷ್ಟು ಘನತ್ಯಾಜ್ಯ ವಿಲೇವಾರಿ ಕರವನ್ನು ಪಡೆದುಕೊಂಡು ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದೆ. ಟೆಂಡರ್ ನಿಯಮದ ಪ್ರಕಾರ ಗುತ್ತಿಗೆ ವಹಿಸಿಕೊಂಡವರು ನಗರದ ವಾಣಿಜ್ಯ ಸಂಕೀರ್ಣಗಳಿಂದ ಕಸ ಸಂಗ್ರಹ ಮಾಡಬೇಕು. ಆದರೆ ಗುತ್ತಿಗೆದಾರರು ಹೊಟೇಲ್, ಬಾರು, ರೆಸ್ಟೋರೆಂಟ್‌ಗಳಿಂದ ಕಸ ಸಂಗ್ರಹಕ್ಕೆ ಹೆಚ್ಚುವರಿಯಾಗಿ 5 ಸಾವಿರದಿಂದ 10 ಸಾವಿರದವರೆಗೆ ಹಣವನ್ನು ಅನಧಿಕೃತವಾಗಿ ವಸೂಲಿ ಮಾಡುತ್ತಿದ್ದಾರೆ. ಕಸ ಸಂಗ್ರಹಣೆಗೆ ನೀಡುವ ಮೊತ್ತವನ್ನು ಸಂಗ್ರಹವಾಗುವ ಕಸದ ತೂಕದ ಮೇಲೆ ನಿಗದಿ ಮಾಡಲಾಗುತ್ತದೆ. ಹೀಗಾಗಿ ಕಸದ ಸಂಗ್ರಹಗಾರರು ತೂಕ ಹೆಚ್ಚಿಸಲು ಕಲ್ಲು ಮಣ್ಣನ್ನು ಸೇರಿಸುತ್ತಿದ್ದಾರೆ. ಡಂಪಿಂಗ್ ಯಾರ್ಡ್‌ನಲ್ಲಿ ದೂರದವರೆಗೆ ದುರ್ವಾಸನೆ ಮತ್ತು ಕಸದ ರಾಶಿಗೆ ಬೆಂಕಿ ಬೀಳುವುದು ಸಾಮಾನ್ಯವಾಗಿದೆ. ಕಸ ವಿಲೇವಾರಿಯೊಂದಿಗೆ ರಸ್ತೆಗಳ ಹಾಗೂ ಚರಂಡಿಗಳ ಸ್ವಚ್ಚತೆ ಬಗ್ಗೆಯೂ ನಿಗಾವಹಿಸಬೇಕಾದದ್ದು ಟೆಂಡರ್‌ದಾರರು. ಆದರೆ, ಇದು ಕೂಡ ಪರಿಣಾಮಕಾರಿ ರೀತಿಯಲ್ಲಿ ನಡೆಯುತ್ತಿಲ್ಲ. ಇಂತಹ ಸಮಸ್ಯೆಗಳು ಇತ್ಯರ್ಥವಾಗದಿದ್ದರೆ ಜನಹಿತಕ್ಕಾಗಿ ಪ್ರತಿಭಟನೆ ನಡೆಸಬೇಕಾಗಬಹುದು ಎಂದು ಅವರು ಮನಪಾ ಮೇಯರ್ ಜೆಸಿಂತ ವಿಜಯ ಆಲ್ಪ್ರೆಡ್ ಅವರಿಗೆ ನೀಡಿದ ಮನವಿಯಲ್ಲಿ ಸುಧೀರ್ ಶೆಟ್ಟಿ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X