Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಮಾನ್ವಿ | ಅವಕಾಶ ವಂಚಿತ ಸಮುದಾಯಗಳಿಗೆ...

ಮಾನ್ವಿ | ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ನೀಡುವ ಅಸ್ತ್ರವೇ ಅಂಬೇಡ್ಕರ್: ಉಮರ್ ದೇವರಮನಿ ಮಾನವಿ

ವಾರ್ತಾಭಾರತಿವಾರ್ತಾಭಾರತಿ11 Jun 2025 6:26 PM IST
share
ಮಾನ್ವಿ | ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ನೀಡುವ ಅಸ್ತ್ರವೇ ಅಂಬೇಡ್ಕರ್: ಉಮರ್ ದೇವರಮನಿ ಮಾನವಿ

ಮಾನ್ವಿ : ದೇಶದಲ್ಲಿ ಸಾವಿರಾರು ವರ್ಷಗಳಿಂದ ಅಕ್ಷರ, ಅರಿವು, ಅಧಿಕಾರವನ್ನು ಕೆಲವೇ ಸಮುದಾಯಗಳು ಅನುಭವಿಸಿದ್ದವು. ಆದರೆ ಬಹುಸಂಖ್ಯಾತರಾದ ಎಸ್ಸಿ, ಎಸ್ಟಿ, ಹಿಂದುಳಿದ ಸಮುದಾಯಗಳು ಮತ್ತು ಎಲ್ಲಾ ಜಾತಿಯ ಮಹಿಳೆಯರು ಸೇರಿದಂತೆ ಶೋಷಿತ, ಅವಕಾಶ ವಂಚಿತ ಸಮುದಾಯಗಳಿಗೆ ಸಂವಿಧಾನಬದ್ದವಾಗಿ ಮುಕ್ತ ಅವಕಾಶಗಳನ್ನು ನೀಡಿದವರು ಅಂಬೇಡ್ಕರ್ ರವರೇ ನ್ಯಾಯದ ಅಸ್ತ್ರವಾಗಿದ್ದಾರೆ ಎಂದು ಕವಿಗಳು ಮತ್ತು ಉಪನ್ಯಾಸಕರಾದ ಉಮರ್ ದೇವರಮನಿ ಮಾನವಿ ಅಭಿಮತ ವ್ಯಕ್ತಪಡಿಸಿದರು.

ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮದ ಬಸಲಿಂಗಮ್ - ಮೌನೇಶ ಇವರ ಮನೆಯಲ್ಲಿ ಬಹುಜನ ಸಂಘರ್ಷ ಸಮಿತಿಯಿಂದ ಸೋಮವಾರ ಆಯೋಜಿಸಿದ್ದ, 116ನೇ ಮನೆ-ಮನೆಗೆ ಅಂಬೇಡ್ಕರ್ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವದರೊಂದಿಗೆ ಉದ್ಘಾಟಿಸಿ ಮಾತನಾಡಿದರು.

ಮಾನ್ವಿ ತಾಲೂಕಿನ ಖಾಸಗಿ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಆಂಜಿನೆಯ್ಯ ನಸಲಾಪೂರ ಮುಖ್ಯಭಾಷಣಕಾರರಾಗಿ ಮಾತನಾಡಿ, ಸಂವಿಧಾನ ಜಾರಿ ಪೂರ್ವ ಭಾರತ ದೇಶದಲ್ಲಿ ಅಸಮಾನತೆ ತಾಂಡವಾಡುತ್ತಿತ್ತು. ದಲಿತರಿಗೆ, ಮಹಿಳೆಯರಿಗೆ, ಎಲ್ಲಾ ಜಾತಿಯ ಬಡವರಿಗೂ ಸೇರಿದಂತೆ ಸರ್ವರಿಗೂ ಸಮಾನತೆಯಿಂದ ಬದುಕುವಂತಹ ಸಮಾನವಾದ ಅವಕಾಶಗಳು ಮತ್ತು ಸಮಾನತೆಯ ಹಕ್ಕುಗಳನ್ನು ಸಂವಿಧಾನ ಬದ್ಧವಾಗಿ ಕಲ್ಪಿಸಿಕೊಟ್ಟವರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಎಂದು ಅಭಿಪ್ರಾಯಪಟ್ಟರು.

ಬಹುಜನ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಜೆ.ಶರಣಪ್ಪ ಬಲ್ಲಟಗಿ, ಗ್ರಂಥಾಪಾಲಕ ಹನುಮಂತ್ರಾಯ ದೊರೆ ನಕ್ಕುಂದಿ ಮಾತನಾಡಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ದಲಿತ ಮುಖಂಡ ಮೌನೇಶ ನಕ್ಕುಂದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಲಿತ ಸಂಘರ್ಷ ಸಮಿತಿ ಯುವನಾಯಕ ಜಗದೀಶ ಸಾಲ್ಮನಿ ಬಾಗಲವಾಡ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ನಕ್ಕುಂದಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಈರಮ್ಮ ಹನುಮಯ್ಯ ನಕ್ಕುಂದಿ, ದಸಂಸ ಜಿಲ್ಲಾ ಸಂಚಾಲಕ ಗಂಗಾಧರ ಹಿಂದಿನಮನೆ ಬಾಗಲವಾಡ, ಮಾನವಿ ಬಹುಜನ ಸಂಘರ್ಷ ಸಮಿತಿ ತಾಲೂಕಾಧ್ಯಕ್ಷ ಯಮುನಪ್ಪ ಜಾಗೀರಪನ್ನೂರು, ದಸಂಸ ಮುಖಂಡ ಮೌನೇಶ್ ಕೋರಿ ಬಾಗಲವಾಡ, ಶಿವರಾಜ ಮರಾಠ, ನಕ್ಕುಂದಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ವೀರೇಶ ನಕ್ಕುಂದಿ,ನಕ್ಕುಂದಿ ಗ್ರಾಮ ಪಂಚಾಯತ್‌ ಸದಸ್ಯ ಯಂಕಪ್ಪ ನಕ್ಕುಂದಿ, ಬುಡ್ಡಪ್ಪ ನಕ್ಕುಂದಿ, ಹನುಮಯ್ಯ ನಕ್ಕುಂದಿ, ಕಂಠಮ್ಮ ನಕ್ಕುಂದಿ, ದುರ್ಗಮ್ಮ, ಲಕ್ಷ್ಮಿ ಕುಟುಂಬಸ್ಥರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X