Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಹಟ್ಟಿ ಪಟ್ಟಣಕ್ಕೆ ರಾಷ್ಟ್ರೀಯ ಹೆದ್ದಾರಿ...

ಹಟ್ಟಿ ಪಟ್ಟಣಕ್ಕೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ನಿರ್ಮಿಸಲು ಸಂಸದರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ3 July 2026 2:45 PM IST
share
ಹಟ್ಟಿ ಪಟ್ಟಣಕ್ಕೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ನಿರ್ಮಿಸಲು ಸಂಸದರಿಗೆ ಮನವಿ

ಹಟ್ಟಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಹಟ್ಟಿ ಪಟ್ಟಣಕ್ಕೆ ಫೀಡರ್ ರಸ್ತೆ ನಿರ್ಮಿಸಿಕೊಡಬೇಕೆಂದು ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣ ನಾಗರಿಕ ಸಮಿತಿಯ ವತಿಯಿಂದ ರಾಯಚೂರು-ಯಾದಗಿರಿ ಲೋಕಸಭಾ ಸಂಸದರಾದ ಜಿ. ಕುಮಾರ್ ನಾಯಕ ಅವರಿಗೆ ಮನವಿ ಸಲ್ಲಿಸಲಾಯಿತು.

ಹಟ್ಟಿ ಪಟ್ಟಣವು ರಾಯಚೂರು ಜಿಲ್ಲೆಯಲ್ಲಿಯೇ ಮಹತ್ವಾಕಾಂಕ್ಷಿ ಪ್ರದೇಶವಾಗಿದ್ದು, ಈ ಪ್ರದೇಶ ಸರ್ಕಾರಕ್ಕೆ ನೂರಾರು ಕೋಟಿ ಲಾಭಾಂಶ ಹಾಗೂ ರಾಯಲ್ಟಿಯನ್ನು ಪಾವತಿಸುತ್ತದೆ. ದೇಶದಲ್ಲಿಯೇ ಅತಿ ಹೆಚ್ಚು ಚಿನ್ನ ಉತ್ಪಾದಿಸುವ ಗಣಿಗಾರಿಕೆಯ ಪ್ರದೇಶವಾಗಿದೆ. ಹಟ್ಟಿ ಹಾಗೂ ಹಟ್ಟಿ ಸುತ್ತಲಿನ ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಹೇರಳವಾಗಿದ್ದು, ಈಗಾಗಲೇ ಜಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ (Geological Survey of India) ಚಿನ್ನದ ಬ್ಲಾಕ್ಸ್‌ (Blocks)ಗಳನ್ನು ಗುರುತಿಸಿದೆ. ಮುಂದಿನ ದಿನಗಳಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ಹೆಚ್ಚಿನ ಗಣಿಗಾರಿಕೆ ಕಾರ್ಯಾರಂಭಗೊಳ್ಳಲಿದ್ದು, ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ. ಈಗಾಗಲೇ ಹಟ್ಟಿ ಕ್ಯಾಂಪ್ ಹಾಗೂ ಹಟ್ಟಿ ಪಟ್ಟಣದ ಜನಸಂಖ್ಯೆ 50 ಸಾವಿರ ಮೇಲ್ಪಟ್ಟಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ನಗರ ಪಟ್ಟಣವಾಗಿ ಬೆಳೆಯಲಿದೆ.

ಪಿಎಂ-ಗತಿ ಶಕ್ತಿ ಹಾಗೂ ನೇಷನಲ್ ಮಿನರಲ್ ಪಾಲಿಸಿ ನಿಯಮಗಳ ಪ್ರಕಾರ, ದೊಡ್ಡ ಪಟ್ಟಣ, ಬಂದರು, ಗಣಿಗಾರಿಕೆಯಂತಹ ಪ್ರದೇಶಗಳಿಗೆ ಉತ್ತಮ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸಬೇಕೆಂಬ ನಿಯಮವಿದೆ. ಹಟ್ಟಿ ಪಟ್ಟಣಕ್ಕೆ ರಾಷ್ಟ್ರೀಯ ಹೆದ್ದಾರಿ 150A (ಬೀದರ್-ಶ್ರೀರಂಗಪಟ್ಟಣ) ಹಾಗೂ ರಾಷ್ಟ್ರೀಯ ಹೆದ್ದಾರಿ 748A (ಬೆಳಗಾವಿ-ರಾಯಚೂರು) ಫೀಡರ್ ರಸ್ತೆ ಸಂಪರ್ಕಿಸುವುದರಿಂದ ಇಲ್ಲಿನ ಗಣಿಗಾರಿಕೆ ಹಾಗೂ ಸಾರಿಗೆ ಸಂಪರ್ಕಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ರಾಷ್ಟ್ರೀಯ ಹೆದ್ದಾರಿ 150A (ಬೀದರ್-ಶ್ರೀರಂಗಪಟ್ಟಣ) ಹಟ್ಟಿ ಪಟ್ಟಣಕ್ಕೆ 10 ಕಿ.ಮೀ. ಅಂತರದಲ್ಲಿ ಹಾದು ಹೋಗಿದೆ ಹಾಗೂ ರಾಷ್ಟ್ರೀಯ ಹೆದ್ದಾರಿ 748A (ಬೆಳಗಾವಿ-ರಾಯಚೂರು) 15 ಕಿ.ಮೀ. ಅಂತರದಲ್ಲಿ ಹಾದು ಹೋಗಿರುತ್ತದೆ. ಹಾಗಾಗಿ ಹಟ್ಟಿ ಪಟ್ಟಣವು ಇಡೀ ರಾಜ್ಯದಲ್ಲಿಯೇ ಮಹತ್ವಾಕಾಂಕ್ಷಿ ಪಟ್ಟಣವಾಗಿದ್ದು, ಹೆಚ್ಚಿನ ಚಿನ್ನದ ನಿಕ್ಷೇಪ ಹೊಂದಿರುವ ಪ್ರದೇಶವಾಗಿದೆ. ಈ ಎಲ್ಲ ಮಾನದಂಡಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಎರಡು ರಾಷ್ಟ್ರೀಯ ಹೆದ್ದಾರಿಗಳಿಗೆ ಹಟ್ಟಿ ಪಟ್ಟಣವನ್ನು ಸಂಪರ್ಕಿಸುವ ಫೀಡರ್ ರಸ್ತೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಲಾಯಿತು.

ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದು ಫೀಡರ್ ರಸ್ತೆ ನಿರ್ಮಿಸಲು ಒತ್ತಾಯಿಸುತ್ತೇನೆಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X