Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು| ಸರ್ಕಾರಿ ಆಸ್ಪತ್ರೆಯಲ್ಲಿ ಮಗು...

ಸಿಂಧನೂರು| ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಅದಲು-ಬದಲು: ಆರೋಪ

ವಾರ್ತಾಭಾರತಿವಾರ್ತಾಭಾರತಿ6 July 2025 5:22 PM IST
share
ಸಿಂಧನೂರು| ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಅದಲು-ಬದಲು: ಆರೋಪ

ಸಿಂಧನೂರು: ಸಿಂಧನೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ರೇವತಿ ಎಂಬವರಿಗೆ ಗಂಡು ಮಗು ಜನಿಸಿದ್ದು, ಅವರಿಗೆ ಹೆಣ್ಣು ಮಗು ನೀಡಿದ ಆರೋಪ ಕೇಳಿ ಬಂದಿದೆ.

ನರ್ಸ್ ಸಿಬ್ಬಂದಿ ಮಗು ಬದಲಾಯಿಸಿದ್ದಾರೆ ಎಂದು ಹೆರಿಗೆಯಾದ ಮಹಿಳೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ತಾಲೂಕಿನ ಗಾಂಧಿನಗರದ ರೇವತಿ ಎಂಬ ಮಹಿಳೆಯು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಹೆರಿಗೆ ಆದನಂತರ ಆಸ್ಪತ್ರೆಯ ಸಿಬ್ಬಂದಿ ಪ್ರಾರಂಭದಲ್ಲಿ ಗಂಡು ಮಗುವನ್ನು ಹೆರಿಗೆಯಾದ ಮಹಿಳೆಗೆ ಕೊಟ್ಟು ತಾಯಿಯ ಎದೆಹಾಲುಣಿಸಿ ನಂತರ ನಮ್ಮಿಂದ ತಪ್ಪಾಗಿದೆ ನಿಮಗೆ ಹುಟ್ಟಿರುವುದು ಹೆಣ್ಣು ಮಗು, ಈ ಗಂಡು ಮಗು ನಿಮ್ಮದಲ್ಲ ಎಂದು ಹೇಳಿರುವುದು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೈಚಳಕದಿಂದ ʼಎಕ್ಸ್ ಚೇಂಜಿಂಗ್ʼ ನಡೆಯುತ್ತಿದ್ದು, ನನ್ನ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಆದರೆ ವೈದ್ಯಾಧಿಕಾರಿಗಳು ಮೊದಲಿಗೆ ಗಂಡು ಮಗುವನ್ನು ನೀಡಿ, ಈಗ ನಿಮಗೆ ಹುಟ್ಟಿರುವುದು ಹೆಣ್ಣು ಮಗು ಎಂದು ಹೇಳುತ್ತಿರುವುದು ನೋಡಿದರೆ, ಇವರು ಯಾರೊಂದಿಗೆ ಶಾಮೀಲಾಗಿ ನನ್ನ ಮಗುವನ್ನು ಬದಲಾಯಿಸುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗುತ್ತಿದ್ದು, ಜನಿಸಿದ ಗಂಡು ಮಗು ನಮ್ಮದೇ. ಬೇಕಿದ್ದರೆ ಡಿಎನ್ಎ ಪರೀಕ್ಷೆ ಮಾಡಿಕೊಳ್ಳಲಿ ಎಂದು ರೇವತಿಯ ಸಂಬಂಧಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ.ನಾಗರಾಜ ಕಾಟ್ವಾ, "ಅವರಿಗೆ ಸೀಸರಿಯನ್ ಮಾಡಿದ್ದು ನಾನೇ. ಅವರಿಗೆ ಹುಟ್ಟಿರುವುದು ಹೆಣ್ಣು ಮಗು ಆದರೆ ನರ್ಸ್ ಗಳ ಎಡವಟ್ಟಿನಿಂದ ಹೆಣ್ಣು ಮಗು ಕೊಡುವ ಬದಲು ಗಂಡು ಮಗು ಕೊಟ್ಟಿದ್ದೆ ಅವರಿಗೆ ಅನುಮಾನ ಮೂಡಲು ಕಾರಣ. ಅವರು ಬೇಕಾದರೆ ತಮ್ಮ ಇಚ್ಛೆ ಅನುಸಾರವಾಗಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬಹುದು" ಎಂದು ಅವರು ತಿಳಿಸಿದ್ದಾರೆ.

ಹೆರಿಗೆ ವೇಳೆಯಲ್ಲಿ ಮಕ್ಕಳ ವೈದ್ಯರಾದ ಡಾ.ಫರಹತ್ ತಬಸೂಮ್ ಬೇಗಂ ಹಾಗೂ ನರ್ಸ್ ಗಳಾದ ಮಮತಾ, ಸುಮಿತ್ರಾ, ತೇಜಸ್ವಿನಿ, ರೇಶ್ಮಾ, ಇದ್ದರು ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹುಲ್ಲಪ್ಪ ಅವರು ಸಿಂಧನೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

ದೂರಿನಲ್ಲೇನಿದೆ:

ಮದ್ಯಾಹ್ನ 12:00 ಕ್ಕೆ ಗಂಡು ಮಗು ಜನಿಸಿದೆ ಎಂದು ನಮಗೆ ಮಗುವನ್ನು ಹಸ್ತಾಂತರಿಸಿದ್ದಾರೆ. ಮಗುವು ಜನಿಸಿರುವುದನ್ನ ಆಶಾಕಾರ್ಯಕರ್ತೆಯವರು, ಮಗುವಿನ ಅಜ್ಜಿ, ಮಗುವಿನ ತಂದೆ ಸಹ ನೋಡಿದ್ದಾರೆ. ನಂತರ ಮಗುವನ್ನು ಐ.ಸಿ.ಯುಗೆ ಕರೆದುಕೊಂಡು ಹೋದ ನಂತರ ನಮಗೆ ಹೆಣ್ಣು ಮಗುವನ್ನು ಹಸ್ತಾಂತರಿಸಿದ್ದಾರೆ. ನಾವು ಅವರಿಗೆ ಮೊದಲು ನೀವು ನಮಗೆ ಗಂಡು ಮಗುವನ್ನು ನಮ್ಮ ಕೈಯಲ್ಲಿ ಕೊಟ್ಟಿದ್ದೀರಿ. ಐಸಿಯುಗೆ ಹೋದ ನಂತರ ನೀವು ಹೆಣ್ಣು ಮಗುವನ್ನು ನೀಡಿರುವುದನ್ನು ಪ್ರಶ್ನಿಸಿದಾಗ, ಆಸ್ಪತ್ರೆ ಸಿಬ್ಬಂದಿಯು ನಿಮಗೆ ಜನಿಸಿದ್ದು ಹೆಣ್ಣು ಮಗು. ಅವಾಗ ತರಾತುರಿಯಲ್ಲಿ ಬೇರೆ ಮಗುವನ್ನು ನಿಮಗೆ ಕೊಟ್ಟಿದ್ದೆವು ಎಂದು ಹೇಳಿದ್ದಾರೆ. ಕೂಡಲೇ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಮಗುವಿನ ಡಿ.ಎನ್.ಎ ಪರೀಕ್ಷೆ ಮಾಡಿಸಿ ನಂತರ ನಮಗೆ ಮಗುವನ್ನು ನಮಗೆ ನೀಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X