Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಹಟ್ಟಿ ಚಿನ್ನದ ಗಣಿಯಲ್ಲಿ ಕಪ್ಪು ಬಾವುಟ...

ಹಟ್ಟಿ ಚಿನ್ನದ ಗಣಿಯಲ್ಲಿ ಕಪ್ಪು ಬಾವುಟ ಪ್ರತಿಭಟನೆ 11ನೇ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ13 Jun 2026 1:17 PM IST
share
ಹಟ್ಟಿ ಚಿನ್ನದ ಗಣಿಯಲ್ಲಿ ಕಪ್ಪು ಬಾವುಟ ಪ್ರತಿಭಟನೆ 11ನೇ ದಿನಕ್ಕೆ
ಆಡಳಿತ ಮತ್ತು ಸರ್ಕಾರದ ವಿಳಂಬ ನೀತಿಗೆ ಖಂಡನೆ

ಹಟ್ಟಿ, ಜೂನ್ 13: ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಪ್ರಮುಖ ಬೇಡಿಕೆಗಳಾದ ಮೆಡಿಕಲ್ ಅನ್‌ಫಿಟ್ ಯೋಜನೆಯನ್ನು ಕೂಡಲೇ ಜಾರಿಗೊಳಿಸುವುದು, ಹೊಸ ವೇತನ ಒಪ್ಪಂದವನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಕಪ್ಪು ಬಾವುಟ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ.

ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ ಕಪ್ಪು ಬಾವುಟಗಳನ್ನು ಹಿಡಿದು ಪ್ರತಿಭಟಿಸುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದ ಕಾರ್ಮಿಕರು, ಆಡಳಿತ ಮಂಡಳಿ ಮತ್ತು ಸರ್ಕಾರದ ವಿಳಂಬ ನೀತಿಯನ್ನು ತೀವ್ರವಾಗಿ ಖಂಡಿಸಿದರು.

ಬಾಕಿ ಇರುವ ಆಹಾರ ಪೊಟ್ಟಣ (ಫುಡ್ ಕಿಟ್) ವಿತರಣೆ, ಮನೆ ಬಾಡಿಗೆ ಭತ್ಯೆ (HRA), ಉತ್ಪಾದನಾ ಲಿಂಕ್ಡ್ ಪ್ರೋತ್ಸಾಹಧನ (PLIB) ಹಾಗೂ ಎಕ್ಸ್‌ಗ್ರೇಷಿಯಾ ಸೌಲಭ್ಯಗಳನ್ನು ನೀಡುವುದು ಸೇರಿವೆ.

ಕಾರ್ಮಿಕರ ಹಕ್ಕುಗಳು ಮತ್ತು ಸೌಲಭ್ಯಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಹಾಗೂ ಆಡಳಿತದ ಗಮನ ಸೆಳೆಯಲು ಹಂತ ಹಂತವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರೂ, ಸಮಸ್ಯೆಗಳ ಪರಿಹಾರಕ್ಕೆ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ ಎಂದು ಸಂಘದ ಮುಖಂಡರು ಆರೋಪಿಸಿದರು.

ಇತ್ತೀಚೆಗೆ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ನಿರಂತರ ಒತ್ತಾಯದ ಫಲವಾಗಿ ಜೂನ್ 2025ರಿಂದ ಫೆಬ್ರವರಿ 2026ರವರೆಗೆ ಬಾಕಿ ಇರುವ 12 ತಿಂಗಳ ಆಹಾರ ಪೊಟ್ಟಣಗಳನ್ನು ಹಂತ ಹಂತವಾಗಿ ವಿತರಿಸಲು ಆಡಳಿತ ಒಪ್ಪಿಗೆ ನೀಡಿರುವುದು ಕಾರ್ಮಿಕರ ಹೋರಾಟದ ಮೊದಲ ಗೆಲುವಾಗಿದೆ ಎಂದು ಸಂಘ ತಿಳಿಸಿದೆ. ಆದಾಗ್ಯೂ, ಉಳಿದ ಪ್ರಮುಖ ಬೇಡಿಕೆಗಳ ಕುರಿತು ಇನ್ನೂ ಸ್ಪಷ್ಟ ನಿರ್ಧಾರ ಪ್ರಕಟವಾಗದಿರುವುದರಿಂದ ಹೋರಾಟ ಮುಂದುವರಿಸಲಾಗುತ್ತಿದೆ ಎಂದು ತಿಳಿಸಲಾಯಿತು.

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ಹೋರಾಟಕ್ಕೆ ಅಂತ್ಯ ಹಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಉಪಾಧ್ಯಕ್ಷ ಚಂದ್ರಶೇಖರ್ ಆನ್ವರಿ, ಕಾರ್ಯದರ್ಶಿಗಳಾದ ವೆಂಕೋಬ್ ಮಿಯ್ಯಾಪೂರು, ಗೌಸ್ ಮಿಯಾ, ಜಮದಗ್ನಿ ರಮೇಶ ಬಾಬು, ನಾಗರಾಜ್, ಸಿದ್ದಪ್ಪ ಮುಂಡರಗಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಬು ಸಾಗರ್, ಮುನೀರುದ್ದೀನ್, ಹನುಮಂತಗೌಡ, ಗುಂಡಪ್ಪಗೌಡ, ಗುರುರಾಜ್, ಸಿಐಟಿಯು ಜಿಲ್ಲಾ ಸಮಿತಿ ಜಂಟಿ ಕಾರ್ಯದರ್ಶಿ ರಮೇಶ ವೀರಾಪೂರು, ಮೈನುದ್ದೀನ್, ಎಐಟಿಯುಸಿ ಮುಖಂಡ ಸಂಗಯ್ಯಸ್ವಾಮಿ, ಸಿಐಟಿಯು ಮುಖಂಡರಾದ ಫಕೃದ್ದೀನ್, ವೆಂಕಟೇಶ ಗೋರ್‌ಕಲ್, ಪೆಂಚಲಯ್ಯ, ಬಾಬು ಭೂಪೂರು, ಸೋಮಣ್ಣ ನಾಯಕ್, ರಾಜೇಶ್ವರಿ, ಹನುಮಂತ್ರಾಯ, ಹುಸೇನ್ ಬಾಷಾ, ಬಸವರಾಜ್ ಎಂ.ಎಂ., ದುರಗಪ್ಪ, ಶ್ರೀಧರ್, ಅಲ್ಲಾಭಕ್ಷ, ಯಮನೂರು, ರಾಜ್ ಮಹ್ಮದ್, ಖಾಜಾ, ರಫಿ ಮಲ್ಲಾಫೂರು, ಬಸವರಾಜ್ ನಗನೂರು, ಅಲೆಕ್ಸಾಂಡರ್ ಸೇರಿದಂತೆ ಸಿಐಟಿಯು, ಎಐಟಿಯುಸಿ ಹಾಗೂ ಇತರೆ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮತ್ತು ಕಾರ್ಮಿಕರು ಉಪಸ್ಥಿತರಿದ್ದರು.

Tags

Black flagprotestHattigold mine
share
ವಾರ್ತಾಭಾರತಿ
ವಾರ್ತಾಭಾರತಿ
Next Story
X